AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಶಾಪಿಂಗ್​ ವೇಳೆ ಯುವತಿಯ ಮೇಲೆ ಭಗ್ನ ಪ್ರೇಮಿ ಹಲ್ಲೆ

ಶಾಪಿಂಗ್​ಗೆಂದು ಮನೆಯಿಂದ ಹೊರ ಬಂದಿದ್ದ ವೇಳೆ ಯುವತಿ ಮೇಲೆ ಭಗ್ನ ಪ್ರೇಮಿ ಹಲ್ಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಮದ್ದೂರು ಮೂಲದ ನಿತ್ಯಶ್ರೀ(27) ಹಲ್ಲೆಗೊಳಗಾದ ಯುವತಿ. ಮದುವೆಯಾಗುವಂತೆ ಯುವತಿ ಮನೆ ಮುಂದೆ ಬಂದು ಯುವಕ ಪೀಡಿಸುತ್ತಿದ್ದ. ಆದರೆ ಯುವಕನ ಜೊತೆ ಮದುವೆಗೆ ಯುವತಿ ನಿರಾಕರಿಸಿದ್ದರು. ನಂತರ ಯುವತಿಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಯವಾಗಿತ್ತು. ಜೂನ್​ನಲ್ಲಿ ಮದುವೆಗೆ ದಿನಾಂಕ ಸಹ ನಿಗದಿಯಾಗಿತ್ತು. ಹಾಗಾಗಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಶಾಪಿಂಗ್​ಗೆಂದು ಯುವತಿ ಮನೆಯಿಂದ ಹೊರ ಬಂದಿದ್ದರು. ಬಟ್ಟೆ […]

ಮದುವೆ ಶಾಪಿಂಗ್​ ವೇಳೆ ಯುವತಿಯ ಮೇಲೆ ಭಗ್ನ ಪ್ರೇಮಿ ಹಲ್ಲೆ
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:49 PM

Share

ಶಾಪಿಂಗ್​ಗೆಂದು ಮನೆಯಿಂದ ಹೊರ ಬಂದಿದ್ದ ವೇಳೆ ಯುವತಿ ಮೇಲೆ ಭಗ್ನ ಪ್ರೇಮಿ ಹಲ್ಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಮದ್ದೂರು ಮೂಲದ ನಿತ್ಯಶ್ರೀ(27) ಹಲ್ಲೆಗೊಳಗಾದ ಯುವತಿ.

ಮದುವೆಯಾಗುವಂತೆ ಯುವತಿ ಮನೆ ಮುಂದೆ ಬಂದು ಯುವಕ ಪೀಡಿಸುತ್ತಿದ್ದ. ಆದರೆ ಯುವಕನ ಜೊತೆ ಮದುವೆಗೆ ಯುವತಿ ನಿರಾಕರಿಸಿದ್ದರು. ನಂತರ ಯುವತಿಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಯವಾಗಿತ್ತು. ಜೂನ್​ನಲ್ಲಿ ಮದುವೆಗೆ ದಿನಾಂಕ ಸಹ ನಿಗದಿಯಾಗಿತ್ತು. ಹಾಗಾಗಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಶಾಪಿಂಗ್​ಗೆಂದು ಯುವತಿ ಮನೆಯಿಂದ ಹೊರ ಬಂದಿದ್ದರು. ಬಟ್ಟೆ ಶಾಪಿಂಗ್​ ಮಾಡಲು ಮನೆಯಿಂದ ಯುವತಿ ಹೊರ ಬಂದಿದ್ದರು.

ಈ ವೇಳೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವಿಶಾಲ್ ಮಾರ್ಟ್ ಬಳಿ ಯುವತಿ ಮೇಲೆ ಭಗ್ನ ಪ್ರೇಮಿ ಮಚ್ಚಿನಿಂದ ಅಟ್ಯಾಕ್ ಮಾಡಿ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿ ಗಂಭೀರವಾಗಿ ಯುವತಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಹಲ್ಲೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:47 pm, Wed, 27 May 20

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ