
ಹಾಸನ: ಶಾಂತಿಗ್ರಾಮ ಬಳಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನದ ನಿವಾಸಿ ಲೋಕೇಶ್ ಅಲಿಯಾಸ್ ಕೆಂಚ ಲೋಕಿ ಮೃತ ದುರ್ದೈವಿ.
ಲೋಕೇಶ್ನನ್ನು ಜೊತೆಯಲ್ಲೇ ಕರೆತಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Published On - 7:19 pm, Fri, 27 December 19