ತುಮಕೂರು: ಅಂತ್ಯ ಸಂಸ್ಕಾರಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್ ಬರಬೇಕೆಂದು ಡೆತ್ ನೋಟ್ ಬರೆದು ಯುವಕ‌ ಆತ್ಮಹತ್ಯೆ

ಗೋಮಾಳ ಜಮೀನಿಗೆ ಸಾಗುವಳಿ ಚೀಟಿ‌ ನೀಡಲು ಸಹಾಯ ಮಾಡಿದ್ದ ಶಾಸಕ ಗುಬ್ಬಿ ಶ್ರೀನಿವಾಸ್ ನಂತರ ಅದನ್ನು ಆತನ‌ ಹೆಸರಿಗೆ ಪಹಣಿ ಬರುವಂತೆ ಮಾಡಿಸುವ ಭರವಸೆ ನೀಡಿದ್ದರು.

ತುಮಕೂರು: ಅಂತ್ಯ ಸಂಸ್ಕಾರಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್ ಬರಬೇಕೆಂದು ಡೆತ್ ನೋಟ್ ಬರೆದು ಯುವಕ‌ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Dec 08, 2022 | 10:23 AM

ತುಮಕೂರು: ಅಂತ್ಯ ಸಂಸ್ಕಾರಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್(MLA Gubbi Srinivas) ಬರಬೇಕೆಂದು ಡೆತ್ ನೋಟ್(Death Note) ಬರೆದು ಯುವಕ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಜಯ ಪ್ರಕಾಶ (39) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ದೇವರಹೊಸಹಳ್ಳಿ ಕೆರೆಗೆ ಹಾರಿ ಜಯ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಮಾಳ ಜಮೀನಿಗೆ ಸಾಗುವಳಿ ಚೀಟಿ‌ ನೀಡಲು ಸಹಾಯ ಮಾಡಿದ್ದ ಶಾಸಕ ಗುಬ್ಬಿ ಶ್ರೀನಿವಾಸ್ ನಂತರ ಅದನ್ನು ಆತನ‌ ಹೆಸರಿಗೆ ಪಹಣಿ ಬರುವಂತೆ ಮಾಡಿಸುವ ಭರವಸೆ ನೀಡಿದ್ದರು. ಆದರೆ ಪಹಣಿ ಇನ್ನೂ ಬಾರದ ಹಿನ್ನೆಲೆ ನನ್ನ ಹೆಸರಿಗೆ ಪಹಣಿ ಬರಲಿಲ್ಲ ಎಂದು ಜಯ ಪ್ರಕಾಶ್ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕ ಶ್ರೀನಿವಾಸ್ ನಮ್ಮ ಕುಟುಂಬಕ್ಕೆ ಸಹಾಯ ಮಾಡಬೇಕು ಎಂದು ಡೇತ್ ನೋಟ್​ನಲ್ಲಿ ಬರೆದಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಅವತಾರ ತಾಳಿದ ಕಾಂತಾರ ದೇವಿ: ಓ ಎಂದು ಕೂಗಿ ಜನರಿಗೆ ಮೋಸ ಮಾಡುತ್ತಿದ್ದ ಮಹಿಳೆ ವಿರುದ್ಧ ದೂರು ದಾಖಲು

ಬೈಕ್​ಗೆ ಕಾರು ಡಿಕ್ಕಿ; ಅಪಘಾತದ ವಿಡಿಯೋ ವೈರಲ್

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದ ಹೊರಭಾಗದ ನಾಲ್ಕನೇ ಮೈಲಿನಲ್ಲಿ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬೆಚ್ಚಿ ಬೀಳಿಸೊ ಸಿಸಿಟಿವಿ ದೃಶ್ಯಗಳು ಸದ್ಯ ವೈರಲ್ ಆಗಿದೆ, ನಿನ್ನೆ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಬೈಕ್ ಸವಾರ ಹನುಮಂತ (30), ಮಕ್ಕಳಾದ ಯಶವಂತ (10) ಹಾಗೂ‌ ಸಂಜೀವ(5) ಗಾಯಾಳುಗಳು.

ಬೈಕ್ ನಲ್ಲಿ ಇಬ್ಬರು ಮಕ್ಕಳನ್ನ ಕರೆದುಕೊಂಡು ಹನುಮಂತ ಎಂಬುವವರು ಸಿಂಧನೂರು ಕಡೆ ಹೊರಟಿದ್ದರು. ಈ ವೇಳೆ ಕಾರ್ ನಲ್ಲಿ ಕುಷ್ಟಗಿ ಮಾರ್ಗದಿಂದ ಸಿಂಧನೂರಿಗೆ ಬರ್ತಿದ್ದ ಕಾರು ಅತೀ ವೇಗದಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಕಾರು ಚಾಲಕ ಜಯದೇವ್ ತಪ್ಪಿನಿಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಘಟನೆ ಬಳಿಕ ಗಾಯಾಳುಗಳನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಂಧನೂರು ಟ್ರಾಫಿಕ್ ಪೊಲೀಸರು ಆರೋಪಿ ಕಾರು ಚಾಲಕನನ್ನ ಬಂಧಿಸಿದ್ದಾರೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:22 am, Thu, 8 December 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ