AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಗಳ ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಯುವಕ ಅರೆಸ್ಟ್- ಸಿಕ್ಕಿದ್ದೆಷ್ಟು ಗೊತ್ತಾ?

ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ತನ್ನ ಕೈಚಳ ತೋರಿಸುತ್ತಿದ್ದ ಆ ಕಳ್ಳ. ಸಂಬಂಧಿಕರು ಯಾರಾದರೂ ಸಾವನ್ನಪ್ಪಿರುವ ವಿಚಾರ ತಿಳಿದು ಆ ಮನೆಗಳ ಬಳಿಗೆ ತೆರಳುತ್ತಿದ್ದ ಆರೋಪಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ.

ಸಂಬಂಧಿಗಳ ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಯುವಕ ಅರೆಸ್ಟ್- ಸಿಕ್ಕಿದ್ದೆಷ್ಟು ಗೊತ್ತಾ?
ಕಲ್ಯಾಣ ಮಂಟಪ, ಸಾವಿನ ಮನೆಗಳ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚ್ತಿದ್ದವ ಯುವಕ ಅರೆಸ್ಟ್
ಪ್ರಶಾಂತ್​ ಬಿ.
| Edited By: |

Updated on:Jan 26, 2024 | 5:39 PM

Share

ಅವನು ಒಬ್ಬ ಖತರ್ನಾಕ್ ಕಳ್ಳ. ಸಾವಿನ ಮನೆಗಳೇ ಅವನ ಟಾರ್ಗೆಟ್. ಅತ್ತ ಎಲ್ಲರೂ ಅಂತ್ಯಸಂಸ್ಕಾರಕ್ಕೆ ಅಂತಾ ತೆರಳಿದ್ರೆ, ಇತ್ತ ಆತ ಸಾವಿನ ಮನೆಯಲ್ಲಿ ತನ್ನ ಕೈಚಳಕ ತೋರುತ್ತಿದ್ದ. ಎಲ್ಲರೂ ಸಾವಿನ ನೋವಿನಲ್ಲಿ ಇದ್ದರೇ ಆತ ಮಾತ್ರ ಚಿನ್ನಾಭರಣಗಳನ್ನ ಕದ್ದ ಸಂಭ್ರಮದಲ್ಲಿ ಇರುತ್ತಿದ್ದ. ಸಂಬಂಧಿಕರ ಸಾವಿನ ಮನೆಗಳಲ್ಲೇ ಕಳ್ಳತನ ಮಾಡಿ, ಪೊಲೀಸರ ನಿದ್ರೆಗೆಡಿಸಿದ್ದ ಐನಾತಿ ಕಳ್ಳ ಕೊನೆಗೂ ಅಂದರ್ ಆಗಿದ್ದಾನೆ.

ಹೌದು ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳ ಕೊನೆಗೂ ಅಂದರ್ ಆಗಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ವಿವೇಕ್ (23) ಬಂಧಿತ ಖತರ್ನಾಕ್ ಕಳ್ಳ. ಅಂದಹಾಗೆ ಮೈಸೂರಿನಲ್ಲಿ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ವಿವೇಕ್, ಕಳೆದ ಮೂರು ವರ್ಷದಿಂದ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ.

ಅದರಲ್ಲೂ ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ತನ್ನ ಕೈಚಳ ತೋರಿಸುತ್ತಿದ್ದ. ತನ್ನ ಸಂಬಂಧಿಕರು ಯಾರಾದರೂ ಸಾವನ್ನಪ್ಪಿರುವ ವಿಚಾರ ತಿಳಿದು ಆ ಮನೆಗಳ ಬಳಿಗೆ ತೆರಳುತ್ತಿದ್ದ ಆರೋಪಿ, ಅಂತ್ಯಸಂಸ್ಕಾರಕ್ಕೆಂದು ಎಲ್ಲರೂ ಮನೆಯಿಂದ ತೆರಳಿದ ನಂತರ ಈತ ಮಾತ್ರ ಅಲ್ಲಿಯೇ ಇದ್ದು ಎಲ್ಲರೂ ಹೋದ ನಂತರ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ.

ಕೇವಲ ಸಾವಿನ ಮನೆ ಮಾತ್ರವಲ್ಲ, ಕಲ್ಯಾಣ ಮಂಟಪಗಳಲ್ಲೂ ಕೂಡ ಕಳ್ಳತನ ಮಾಡುತ್ತಿದ್ದ. ಇನ್ನು ಸಾವಿನ ಮನೆಯಲ್ಲಿ ಕದ್ದ ಚಿನ್ನಾಭರಣಗಳನ್ನ ಅಡವಿಟ್ಟು ಮೋಜು ಮಸ್ತಿ ಕೂಡ ಮಾಡುತ್ತಿದ್ದ. ಅಂದಹಾಗೆ ಕಳೆದ ಆರು ತಿಂಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಪಾಂಡವಪುರ ತಾಲೂಕಿನ ಹಿರಮರಳ್ಳಿ, ಚಿನಕುರಳಿ, ಆರತಿ ಉಕ್ಕಡ, ಹರವು, ಡಾಮಡಹಳ್ಳಿ ಗ್ರಾಮಗಳು ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಸಾವಿನ ಮನೆಗಳಲ್ಲಿ ಕಳ್ಳತನ ಮಾಡಿದ್ದ.

ಇದು ಪೊಲೀಸರಿಗೂ ಕೂಡ ದೊಡ್ಡ ತಲೆ ನೋವಾಗಿತ್ತು. ಆರೋಪಿಯ ಬಂಧನಕ್ಕೆ ಪೊಲೀಸರು ಕೂಡ ಬಲೆ ಬೀಸಿದ್ರು. ಅದೇ ರೀತಿ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಶಿವಕುಮಾರ್ ಎಂಬುವವರ ಮನೆಯಲ್ಲಿ 135 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿಯನ್ನ ಬಂಧಿಸಿದಾಗ ಹತ್ತು ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತನಿಂದ ಒಟ್ಟು 36 ಲಕ್ಷ ಮೌಲ್ಯದ 521 ಗ್ರಾಂ‌ ಚಿನ್ನಾಭರಣ, ಕ್ಯಾಮರಾ ಮತ್ತು ಲೆನ್ಸ್, ಒಂದು ಬೈಕ್, ಒಂದು ಕಾರು ಜಪ್ತಿ ಮಾಡಿದ್ದಾರೆ. ಒಟ್ಟಾರೆ ಸಾವಿನ ಮನೆಯಲ್ಲಿ ಕಳ್ಳತನ ಮಾಡಿ ಶೋಕಿ ಮಾಡುತ್ತಿದ್ದ ಆಸಾಮಿ ಕೊನೆಗೂ ಅಂದರ್ ಆಗಿದ್ದು, ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ.

Published On - 5:31 pm, Fri, 26 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ