AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಗಳ ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಯುವಕ ಅರೆಸ್ಟ್- ಸಿಕ್ಕಿದ್ದೆಷ್ಟು ಗೊತ್ತಾ?

ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ತನ್ನ ಕೈಚಳ ತೋರಿಸುತ್ತಿದ್ದ ಆ ಕಳ್ಳ. ಸಂಬಂಧಿಕರು ಯಾರಾದರೂ ಸಾವನ್ನಪ್ಪಿರುವ ವಿಚಾರ ತಿಳಿದು ಆ ಮನೆಗಳ ಬಳಿಗೆ ತೆರಳುತ್ತಿದ್ದ ಆರೋಪಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ.

ಸಂಬಂಧಿಗಳ ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಯುವಕ ಅರೆಸ್ಟ್- ಸಿಕ್ಕಿದ್ದೆಷ್ಟು ಗೊತ್ತಾ?
ಕಲ್ಯಾಣ ಮಂಟಪ, ಸಾವಿನ ಮನೆಗಳ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚ್ತಿದ್ದವ ಯುವಕ ಅರೆಸ್ಟ್
ಪ್ರಶಾಂತ್​ ಬಿ.
| Edited By: ಸಾಧು ಶ್ರೀನಾಥ್​|

Updated on:Jan 26, 2024 | 5:39 PM

Share

ಅವನು ಒಬ್ಬ ಖತರ್ನಾಕ್ ಕಳ್ಳ. ಸಾವಿನ ಮನೆಗಳೇ ಅವನ ಟಾರ್ಗೆಟ್. ಅತ್ತ ಎಲ್ಲರೂ ಅಂತ್ಯಸಂಸ್ಕಾರಕ್ಕೆ ಅಂತಾ ತೆರಳಿದ್ರೆ, ಇತ್ತ ಆತ ಸಾವಿನ ಮನೆಯಲ್ಲಿ ತನ್ನ ಕೈಚಳಕ ತೋರುತ್ತಿದ್ದ. ಎಲ್ಲರೂ ಸಾವಿನ ನೋವಿನಲ್ಲಿ ಇದ್ದರೇ ಆತ ಮಾತ್ರ ಚಿನ್ನಾಭರಣಗಳನ್ನ ಕದ್ದ ಸಂಭ್ರಮದಲ್ಲಿ ಇರುತ್ತಿದ್ದ. ಸಂಬಂಧಿಕರ ಸಾವಿನ ಮನೆಗಳಲ್ಲೇ ಕಳ್ಳತನ ಮಾಡಿ, ಪೊಲೀಸರ ನಿದ್ರೆಗೆಡಿಸಿದ್ದ ಐನಾತಿ ಕಳ್ಳ ಕೊನೆಗೂ ಅಂದರ್ ಆಗಿದ್ದಾನೆ.

ಹೌದು ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳ ಕೊನೆಗೂ ಅಂದರ್ ಆಗಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ವಿವೇಕ್ (23) ಬಂಧಿತ ಖತರ್ನಾಕ್ ಕಳ್ಳ. ಅಂದಹಾಗೆ ಮೈಸೂರಿನಲ್ಲಿ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ವಿವೇಕ್, ಕಳೆದ ಮೂರು ವರ್ಷದಿಂದ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ.

ಅದರಲ್ಲೂ ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ತನ್ನ ಕೈಚಳ ತೋರಿಸುತ್ತಿದ್ದ. ತನ್ನ ಸಂಬಂಧಿಕರು ಯಾರಾದರೂ ಸಾವನ್ನಪ್ಪಿರುವ ವಿಚಾರ ತಿಳಿದು ಆ ಮನೆಗಳ ಬಳಿಗೆ ತೆರಳುತ್ತಿದ್ದ ಆರೋಪಿ, ಅಂತ್ಯಸಂಸ್ಕಾರಕ್ಕೆಂದು ಎಲ್ಲರೂ ಮನೆಯಿಂದ ತೆರಳಿದ ನಂತರ ಈತ ಮಾತ್ರ ಅಲ್ಲಿಯೇ ಇದ್ದು ಎಲ್ಲರೂ ಹೋದ ನಂತರ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ.

ಕೇವಲ ಸಾವಿನ ಮನೆ ಮಾತ್ರವಲ್ಲ, ಕಲ್ಯಾಣ ಮಂಟಪಗಳಲ್ಲೂ ಕೂಡ ಕಳ್ಳತನ ಮಾಡುತ್ತಿದ್ದ. ಇನ್ನು ಸಾವಿನ ಮನೆಯಲ್ಲಿ ಕದ್ದ ಚಿನ್ನಾಭರಣಗಳನ್ನ ಅಡವಿಟ್ಟು ಮೋಜು ಮಸ್ತಿ ಕೂಡ ಮಾಡುತ್ತಿದ್ದ. ಅಂದಹಾಗೆ ಕಳೆದ ಆರು ತಿಂಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಪಾಂಡವಪುರ ತಾಲೂಕಿನ ಹಿರಮರಳ್ಳಿ, ಚಿನಕುರಳಿ, ಆರತಿ ಉಕ್ಕಡ, ಹರವು, ಡಾಮಡಹಳ್ಳಿ ಗ್ರಾಮಗಳು ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಸಾವಿನ ಮನೆಗಳಲ್ಲಿ ಕಳ್ಳತನ ಮಾಡಿದ್ದ.

ಇದು ಪೊಲೀಸರಿಗೂ ಕೂಡ ದೊಡ್ಡ ತಲೆ ನೋವಾಗಿತ್ತು. ಆರೋಪಿಯ ಬಂಧನಕ್ಕೆ ಪೊಲೀಸರು ಕೂಡ ಬಲೆ ಬೀಸಿದ್ರು. ಅದೇ ರೀತಿ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಶಿವಕುಮಾರ್ ಎಂಬುವವರ ಮನೆಯಲ್ಲಿ 135 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿಯನ್ನ ಬಂಧಿಸಿದಾಗ ಹತ್ತು ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತನಿಂದ ಒಟ್ಟು 36 ಲಕ್ಷ ಮೌಲ್ಯದ 521 ಗ್ರಾಂ‌ ಚಿನ್ನಾಭರಣ, ಕ್ಯಾಮರಾ ಮತ್ತು ಲೆನ್ಸ್, ಒಂದು ಬೈಕ್, ಒಂದು ಕಾರು ಜಪ್ತಿ ಮಾಡಿದ್ದಾರೆ. ಒಟ್ಟಾರೆ ಸಾವಿನ ಮನೆಯಲ್ಲಿ ಕಳ್ಳತನ ಮಾಡಿ ಶೋಕಿ ಮಾಡುತ್ತಿದ್ದ ಆಸಾಮಿ ಕೊನೆಗೂ ಅಂದರ್ ಆಗಿದ್ದು, ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ.

Published On - 5:31 pm, Fri, 26 January 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ