ಎಣ್ಣೆ ಪಾರ್ಟಿಯಲ್ಲಿ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಎಣ್ಣೆ ಪಾರ್ಟಿಯಲ್ಲಿ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ತಡರಾತ್ರಿ ಕೆಂಗೇರಿಯಲ್ಲಿ ಬಾಟಲಿಯಿಂದ ಚುಚ್ಚಿ 20 ವರ್ಷದ ಮಣಿ ಎಂಬುವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೆಂಗೇರಿಯ ರೂಮ್​ನಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಣಿ ಎಂಬುವನಿಗೆ ಬಾಟಲಿಯಿಂದ ತಿವಿದು ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ […]

ಎಣ್ಣೆ ಪಾರ್ಟಿಯಲ್ಲಿ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ
ಸಾಧು ಶ್ರೀನಾಥ್​ Edited By:

Updated on: Jun 01, 2020 | 3:00 PM

ಬೆಂಗಳೂರು: ಎಣ್ಣೆ ಪಾರ್ಟಿಯಲ್ಲಿ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ತಡರಾತ್ರಿ ಕೆಂಗೇರಿಯಲ್ಲಿ ಬಾಟಲಿಯಿಂದ ಚುಚ್ಚಿ 20 ವರ್ಷದ ಮಣಿ ಎಂಬುವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕೆಂಗೇರಿಯ ರೂಮ್​ನಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಣಿ ಎಂಬುವನಿಗೆ ಬಾಟಲಿಯಿಂದ ತಿವಿದು ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Loading...
Unable to load recommendations.
Follow Us