AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ಖರೀದಿ ವೇಳೆ ಚಿಲ್ಲರೆ ಹಣಕ್ಕಾಗಿ ಯುವಕರ ಜಗಳ; ಬಾರ್ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯವಾದ ಗಲಾಟೆ

ಪ್ರತಿಷ್ಟಿತ ಕಂಪೆನಿಗಳ ಹೆಸರಿನಲ್ಲಿ ಇಂಜಿನ್ ಆಯಿಲ್ ಕಲಬೆರಕೆ ಮಾಡುತ್ತಿದ್ದ ಆರೋಪಿಯನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ  ಬಂಧಿತ ಆರೋಪಿ.

ಬಿಯರ್ ಖರೀದಿ ವೇಳೆ ಚಿಲ್ಲರೆ ಹಣಕ್ಕಾಗಿ ಯುವಕರ ಜಗಳ; ಬಾರ್ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯವಾದ ಗಲಾಟೆ
ಯಶ್‍ಪಾಲ್ (28) ಮೃತ ದುರ್ದೈವಿ
TV9 Web
| Edited By: |

Updated on: Apr 04, 2022 | 1:23 PM

Share

ಚಿಕ್ಕಮಗಳೂರು: ಚಿಲ್ಲರೆ ಹಣಕ್ಕಾಗಿ ಬಾರ್ ಕ್ಯಾಶಿಯರ್ ಕೊಲೆ (Bar Cashier Murder) ಯಾದಂತಹ ಘಟನೆ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಯಶ್‍ಪಾಲ್ (28) ಮೃತ ದುರ್ದೈವಿ. ವಾಸಿತಾಣ ಅಯ್ಯನಕೆರೆಗೆ ಹೋಗಿ ಬಂದ ಆರು ಜನ ಯುವಕರ ತಂಡ ಬಿಯರ್ ಖರೀದಿ ವೇಳೆ ಚಿಲ್ಲರೆ ಹಣಕ್ಕಾಗಿ ಯಶ್‍ಪಾಲ್ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ರಸ್ತೆಗೆ ಬೈಕ್ ಅಡ್ಡಲಾಗಿ ನಿಲ್ಲಿಸಿ ಗಲಾಟೆ ಮಾಡಿದ ಯುವಕರು, ಪ್ರಶ್ನಿಸಿದ ಯಶ್‍ಪಾಲ್ ಎದೆಗೆ ಬಲವಾಗಿ ಹೊಡೆದಿದ್ದಾರೆ. ಎದೆನೋವಿನಿಂದ ಜಿಲ್ಲಾಸ್ಪತ್ರೆ ಸೇರಿದ ಯಶ್‍ಪಾಲ್, ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಷ್ಟಿತ ಕಂಪೆನಿಗಳ ಹೆಸರಿನಲ್ಲಿ ಇಂಜಿನ್ ಆಯಿಲ್ ಕಲಬೆರಕೆ ಮಾರಟ:

ಬೆಂಗಳೂರು: ಪ್ರತಿಷ್ಟಿತ ಕಂಪೆನಿಗಳ ಹೆಸರಿನಲ್ಲಿ ಇಂಜಿನ್ ಆಯಿಲ್ ಕಲಬೆರಕೆ ಮಾಡುತ್ತಿದ್ದ ಆರೋಪಿಯನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ  ಬಂಧಿತ ಆರೋಪಿ.ಕ್ಯಾಸ್ಟ್ರಾಆಯಿಲ್, ಸೆಲ್, ಸರ್ವೋ ಇತ್ಯಾದಿ ಕಂಪೆನಿಗಳ ಆಯಿಲ್ ಕಲಬೆರಕೆ ಮಾಡುತ್ತಿದ್ದು, ಅನುಮಾನ ಬರದಂತೆ ಅದೇ ಕಂಪೆನಿಗಳ ಸ್ಟಿಕರ್, ಸೀಲ್ ಅಂಟಿಸಿ ಮಾರಾಟ ಮಾಡುತಿದ್ದ. ನಕಲಿ ಸೀಲ್ ಬಳಸಿ ಪ್ಯಾಕ್ ಮಾಡಿ ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಇಂಜಿನ್ ಆಯಿಲ್ ಸಪ್ಲೈ ಮಾಡುತ್ತಿದ್ದ. ಚನ್ನಪಟ್ಟಣದಲ್ಲಿ ಕಲಬೆರಕೆ ಮಾಡಲು ಯೂನಿಟ್ ಹೊಂದಿದ್ದ. ಕಲಬೆರಕೆ ಇಂಜಿನ್ ಆಯಿಲ್ ಘಟಕದ ಮೇಲೆ ಅಶೋಕ ನಗರ ಪೊಲೀಸರು ದಾಳಿ ನಡೆಸಿದರು. ಪೊಲೀಸರ ತನಿಖೆ ಹಾದಿ ತಪ್ಪಿಸಲು ದೆಹಲಿಯಲ್ಲಿ ಯೂನಿಟ್ ಇರುವುದಾಗಿ ಆರೋಪಿ ಸ್ವಾಮಿ ಹೇಳಿದ್ದ. ಘಟನೆ ಸಂಬಂಧ ಕೇಸ್ ದಾಖಲಿಸಿ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ:

ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡರುವಂತಹ ಘಟನೆ ನಗರದ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಬೆಂಕಿ ತಗಲುತ್ತಿದ್ದಂತೆಯೇ ಕಾರು ನಿಲ್ಲಿಸಿ ಕಾರು ಚಾಲಕ ಹೊರಬಂದಿದ್ದಾನೆ. ಖಾಸಗಿ ಕೋ-ಆಪರೇಟಿವ್ ಸೊಸೈಟಿ ಬ್ಯಾಂಕ್‌ ನೌಕರ ವಿಶಾಲ ಪಾಟೀಲ್ ಎಂಬುವರಿಗೆ ಕಾರು ಸೇರಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಚನ್ನಮ್ಮ ವೃತ್ತದಲ್ಲಿದ್ದ ಪೊಲೀಸರು ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಬೆಂಕಿ ಅಗ್ನಿ ಶಾಮಕ ಸಿಬ್ಬಂದಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾಣಿ ಸಂಭವಿಸಿಲ್ಲ.

ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ:

ಬೆಂಗಳೂರು: ಜಯನಗರದಲ್ಲಿ ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಜಯನಗರ 7 ನೇ ಬ್ಲಾಕ್​ನ ವೇಸ್ಟೆಜ್ ತುಂಬಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

Financial Crisis In Sri Lanka: ಲಂಕಾ ಜನರ ಬಳಿ ಕಾಸಿಲ್ಲ, ಬೇಕಾದದ್ದು ಸಿಗ್ತಿಲ್ಲ, ಸಿಕ್ಕರೂ ಕೊಳ್ಳಲು ಆಗ್ತಿಲ್ಲ

ಇಷ್ಟು ದಿನ ಇಲ್ಲದ ಆಜಾನ್ ವಿಚಾರ ಈಗ ಏಕೆ ಬಂದಿದೆ?- ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ