ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ಕಾವೇರಲಿದೆ. ಒಂದ್ಕಡೆ ಸಾರಿಗೆ ನೌಕರರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ರೆ, ಇನ್ನೊದ್ಕಡೆ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಱಲಿಗೆ ಮುಂದಾಗಿದ್ದಾರೆ. ಬಜೆಟ್ ಅಧಿನವೇಶನಕ್ಕೂ ಮುನ್ನ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸೋಕೆ ವಿವಿಧ ಸಂಘಟನೆಗಳು ಸಜ್ಜಾಗಿವೆ.