1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಇಂಗ್ಲಿಷ್ ಮೀಡಿಯಂ ಪಠ್ಯ ಪುಸ್ತಕಗಳು, ಪೋಷಕರ ಆಕ್ರೋಶ

75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ 1,419 ಶಾಲೆಗಳಿಗೆ ಇನ್ನೂ ಕೂಡ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಇದರಿಂದ ಮಕ್ಕಳ ಓದಿಗೆ ಸಮಸ್ಯೆಗಳು ಎದುರಾಗಿವೆ.

1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಇಂಗ್ಲಿಷ್ ಮೀಡಿಯಂ ಪಠ್ಯ ಪುಸ್ತಕಗಳು, ಪೋಷಕರ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
|

Updated on: Sep 10, 2024 | 11:14 AM

ಬೆಂಗಳೂರು, ಸೆ.10: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಸದ್ಯ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಸರ್ಕಾರದ ಈ ಆದೇಶ ಬಂದಿರುವ ಸರ್ಕಾರಿ ಶಾಲೆಗಳು ತಮ್ಮದೇ ಆದ ಸಮಸ್ಯೆಗಳನ್ನು ಎದುರಿಸುತ್ತಿವೆ.

ಸದ್ಯ ಮಧ್ಯಾವಧಿ ಪರೀಕ್ಷೆಗಳಿಗೆ ಸಾವಿರಾರು ಮಕ್ಕಳು ತಯಾರಾಗುತ್ತಿದ್ದು, ಈ ವರ್ಷದ ಆರಂಭದಲ್ಲಿ ಆಂಗ್ಲ-ಮಾಧ್ಯಮ ವಿಭಾಗಗಳನ್ನು ಪರಿಚಯಿಸಿದ 1,419 ಶಾಲೆಗಳಿಗೆ ಇನ್ನೂ ಕೂಡ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಇದರಿಂದ ಮಕ್ಕಳ ಓದಿಗೆ ಸಮಸ್ಯೆಗಳು ಎದುರಾಗಿವೆ. ಇದರ ಹೊರತಾಗಿಯೂ, ಸೆಪ್ಟೆಂಬರ್ 5 ರಂದು, ಸರ್ಕಾರವು 2,000 ಶಾಲೆಗಳಲ್ಲಿ ಹೆಚ್ಚು ಬೇಡಿಕೆಯಿರುವ ವಿಭಾಗಗಳನ್ನು ಸೇರಿಸುವ ತನ್ನ ಕಾರ್ಯಕ್ರಮದ ಭಾಗವಾಗಿ ವರ್ಷದ ಮಧ್ಯದಲ್ಲಿ ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್-ಮಾಧ್ಯಮ ವಿಭಾಗಗಳನ್ನು ಮಂಜೂರು ಮಾಡಲು ನಿರ್ಧರಿಸಿದೆ.

ಸರ್ಕಾರಿ ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸುವ ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯು ಈ ತಿಂಗಳ ಅಂತ್ಯದೊಳಗೆ ಅಗತ್ಯ ಅಧ್ಯಯನ ಸಾಮಗ್ರಿಗಳನ್ನು ಪೂರೈಸುವ ಸಾಧ್ಯತೆ ಇದ್ದು, ಕೆಲವು ತಜ್ಞರು ಹಿಂದಿನ ವರ್ಷದ ಪುಸ್ತಕಗಳನ್ನು ಬಳಸಿ ಅಥವಾ ಬೇರೆ ವ್ಯವಸ್ಥೆ ಮಾಡುವವರೆಗೆ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು, ವಿಡಿಯೋ ನೋಡಿ

2019ರಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲಾಗಿತ್ತು. ಅಂದಿನಿಂದ, 285 ಕರ್ನಾಟಕ ಸಾರ್ವಜನಿಕ ಶಾಲೆಗಳು ಸೇರಿದಂತೆ 2,403 ಶಾಲೆಗಳು ಇಂಗ್ಲಿಷ್-ಮಾಧ್ಯಮ ವಿಭಾಗಗಳನ್ನು ಆರಂಭಿಸಿವೆ. ಇದೀಗ ಸಾರ್ವಜನಿಕ ಬೇಡಿಕೆಯಿಂದ ಉತ್ತೇಜಿತವಾಗಿರುವ ರಾಜ್ಯ ಸರ್ಕಾರವು 2024-25ರ ಬಜೆಟ್‌ನಲ್ಲಿ 2,000 ಆಂಗ್ಲ-ಮಾಧ್ಯಮ ವಿಭಾಗಗಳನ್ನು ಸೇರಿಸುವುದಾಗಿ ಘೋಷಿಸಿತ್ತು. ಇನ್ನೂ 1,419 ಶಾಲೆಗಳಿಗೆ ಪಠ್ಯಪುಸ್ತಕಗಳ ಕೊರತೆ ಇದ್ದು ಇತ್ತ ಪುಸ್ತಕಗಳಿಲ್ಲದಿರುವ ಕಾರಣ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು