AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka: ಶಾಲಾ ಪ್ರವೇಶ ದಾಖಲೆಗಳಿಗೆ ಹೊಂದಿಕೆಯಾಗದ 15 ಲಕ್ಷ ವಿದ್ಯಾರ್ಥಿಗಳ ಆಧಾರ್ ವಿವರ

ಶಾಲಾ ಮಕ್ಕಳು ತಮ್ಮ ಆಧಾರ್ ಕಾರ್ಡ್ ಅನ್ನು ವ್ಯಾಸಾಂಗ ಮಾಡುತ್ತಿರು ಶಾಲೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಅದರಂತೆ ನಡೆಸಿದ ಪರಿಶೀಲನೆ ವೇಳೆ ಬರೋಬ್ಬರಿ 15 ಲಕ್ಷ ವಿದ್ಯಾರ್ಥಿಗಳ ಶಾಲಾ ಧಾಖಲಾತಿ ವಿವರಗಳು ಆಧಾರ್ ಕಾರ್ಡ್​ನಲ್ಲಿರುವ ವಿವರಗಳಿಗೆ ಹೊಂದಿಕೆಯಾಗಿರುವುದು ತಿಳಿದುಬಂದಿದೆ.

Karnataka: ಶಾಲಾ ಪ್ರವೇಶ ದಾಖಲೆಗಳಿಗೆ ಹೊಂದಿಕೆಯಾಗದ 15 ಲಕ್ಷ ವಿದ್ಯಾರ್ಥಿಗಳ ಆಧಾರ್ ವಿವರ
ಶಾಲಾ ಪ್ರವೇಶ ದಾಖಲೆಗಳಿಗೆ ಹೊಂದಿಕೆಯಾಗದ 15 ಲಕ್ಷ ವಿದ್ಯಾರ್ಥಿಗಳ ಆಧಾರ್ ವಿವರImage Credit source: justdial.com
Rakesh Nayak Manchi
Rakesh Nayak Manchi|

Updated on: Jun 24, 2023 | 4:54 PM

Share

ಬೆಂಗಳೂರು: ಶಿಕ್ಷಣ ಇಲಾಖೆಯ ಸೂಚನೆ ಮೇರೆಗೆ ಮಕ್ಕಳು ಶಾಲೆಗಳಿಗೆ ಸಲ್ಲಿಸಿರುವ ಆಧಾರ್ ಕಾರ್ಡ್ (Aadhaar Card) ಪರಿಶೀಲನೆ ವೇಳೆ ಸುಮಾರು 15 ಲಕ್ಷ ವಿದ್ಯಾರ್ಥಿಗಳ ಆಧಾರ್ ಕಾರ್ಡ್‌ನಲ್ಲಿರುವ ಹೆಸರುಗಳು ಶಾಲಾ ದಾಖಲಾತಿ ವೇಳೆ ನಮೂದಿಸಿರುವ ಹೆಸರುಗಳಿಗೆ ಹೊಂದಿಕೆಯಾಗದಿರುವುದು ತಿಳಿದುಬಂದಿದೆ. ಹೀಗಾಗಿ ಪೋಷಕರು ಆಧಾರ್​ ಕಾರ್ಡ್‌ಗಳಲ್ಲಿ ಹೆಸರುಗಳನ್ನು ಸರಿಪಡಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಕೇಂದ್ರ ಸರ್ಕಾರವು ಫೆಬ್ರವರಿ 17 ರಂದು ಹೊರಡಿಸಿದ ಸುತ್ತೋಲೆಯಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಕಾರ್ಮಿಕ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ವಿವಿಧ ವಿದ್ಯಾರ್ಥಿವೇತನಗಳಿಗೆ ಮತ್ತು ವಿವಿಧ ಪ್ರವೇಶ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ದಾಖಲಾತಿಗೆ ಆಧಾರ್ ಸಂಖ್ಯೆಯನ್ನು ನವೀಕರಿಸುವಂತೆ ಸೂಚಿಸಿದೆ. ಅದರಂತೆ ಮಕ್ಕಳು ಶಾಲೆಗಳಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಸಲ್ಲಿಸಬೇಕು. ಅದರಂತೆ ವಿದ್ಯಾರ್ಥಿಗಳು ಶಾಲೆಗಳಿಗೆ ಆಧಾರ್​ ಕಾರ್ಡ್ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ: Tax Evasion: ಪ್ಯಾನ್, ಆಧಾರ್ ಕದ್ದು ಶೆಲ್ ಕಂಪನಿ ಮೂಲಕ ತೆರಿಗೆ ವಂಚಿಸುತ್ತಿದ್ದ ಜಾಲಗಳು ಬೆಳಕಿಗೆ; 30,000 ಕೋಟಿ ರೂ ಕರ್ಮಕಾಂಡ ಬಯಲು

ನಂತರ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ದಾಖಲಾತಿಗೆ ಹೆಸರುಗಳು ಹೊಂದಿಕೆಯಾಗದಿರುವುದನ್ನು ಕಂಡುಕೊಂಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, 1 ಕೋಟಿಗೂ ಅಧಿಕ ವಿದ್ಯಾರ್ಥಿಗಳ ಪೈಕಿ 78 ಲಕ್ಷ ಮಂದಿಯ ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ.

ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಂಡಿದೆ. ಹೆಚ್ಚಿನ ಮಕ್ಕಳು ಮೂರು ಪದಗಳನ್ನು ಒಳಗೊಂಡಿರುವ ಹೆಸರನ್ನು ಹೊಂದಿದ್ದಾರೆ. ಶಾಲಾ ದಾಖಲಾತಿಯಲ್ಲಿರುವ ಹೆಸರುಗಳನ್ನು ನಾವು ಬದಲಾಯಿಸಲು ಸಾಧ್ಯವಿಲ್ಲ. ಪೋಷಕರು ಆಧಾರ್ ಕಾರ್ಡ್‌ಗಳಲ್ಲಿ ಬದಲಾಯಿಸಿ ಅವುಗಳನ್ನು ನಮಗೆ ಮತ್ತೆ ಸಲ್ಲಿಸಬೇಕು ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

ವಿವಿಧ ಶಾಲೆಗಳಲ್ಲಿ ಸುಮಾರು 30,000 ಹೆಸರುಗಳನ್ನು ನಕಲು ಮಾಡಲಾಗಿರುವುದು ದಾಖಲಾಗಿದೆ. ಫೆಬ್ರವರಿಯಿಂದ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 14 ಲಕ್ಷ ಮಕ್ಕಳು ಶಾಲೆಗಳಿಗೆ ಆಧಾರ್ ಕಾರ್ಡ್ ಸಲ್ಲಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಹೆಚ್ಚಿನ ಪೋಷಕರು ತಮ್ಮ ಮಕ್ಕಳ ಜನ್ಮ ಪ್ರಮಾಣಪತ್ರಗಳನ್ನು ಸಲ್ಲಿಸುತ್ತಾರೆ ಎಂದು ಶಾಲೆಗಳು ಹೇಳುತ್ತವೆ.

“ಪೋಷಕರು ತಮ್ಮ ಮಕ್ಕಳ ಹೆಸರುಗಳನ್ನು ಶಾಲೆಗಳಿಗೆ ನೀಡುವಾಗ ಅತ್ಯಂತ ಜಾಗರೂಕರಾಗಿರಬೇಕು. ಹೆಚ್ಚಿನ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರಗಳಲ್ಲಿನ ಹೆಸರುಗಳು ಮತ್ತು ಆಧಾರ್​ನಲ್ಲಿರುವ ಹೆಸರುಗಳು ಹೊಂದಿಕೆಯಾಗುವುದಿಲ್ಲ. ಪ್ರವೇಶ ದಾಖಲೆಗಳಿಗಾಗಿ ಶಾಲೆಗಳು ಜನನ ಪ್ರಮಾಣಪತ್ರಗಳನ್ನು ಬಳಸಬಾರದು. ಹೆಸರುಗಳನ್ನು ಅರ್ಜಿ ನಮೂನೆಯಿಂದ ತೆಗೆದುಕೊಳ್ಳಬೇಕು ಎಂದು ಕರ್ನಾಟಕದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾಗಿ ವರದಿ ಮಾಡಿದೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!