AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Exam 2022 Time Table: ಎಸ್​ಎಸ್​ಎಲ್​ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Karnataka SSLC Exam 2022 Schedule in Kannada: 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಡಿಸೆಂಬರ್ 05) ಪ್ರಕಟಿಸಿದೆ.

Karnataka SSLC Exam 2022 Time Table: ಎಸ್​ಎಸ್​ಎಲ್​ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
SSLC Final Exam Time Table Announced
TV9 Web
| Edited By: |

Updated on:Dec 06, 2022 | 7:08 PM

Share

ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ(10ನೇ ತರಗತಿ) ಪರೀಕ್ಷೆಯ ಅಂತಿಮ ವೇಳಾಪಟ್ಟಿ (Karnataka SSLC Exam Final Time Table) ಪ್ರಕಟವಾಗಿದೆ. 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ(karnataka secondary education examination board) ಇಂದು (ಡಿಸೆಂಬರ್ 05) ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.

ಇದನ್ನೂ ಓದಿ: Karnataka 2nd PUC Exam Timetable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ (SSLC Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅ.29 ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಿದ್ದು, ಈ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದರೆ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು. ಇದೀಗ ಅಂತಿಮವಾಗಿ ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಫೈನಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿರುವ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದು, ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎನ್ನುವ ವೇಳಾಪಟ್ಟಿ ಕೆಳಗಿನಂತಿದೆ ನೋಡಿ.

    ದಿನಾಂಕ           ವಿಷಯ
31-03-2023 ಪ್ರಥಮ ಭಾಷೆ ಪರೀಕ್ಷೆ ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
04-04-2023 ಗಣಿತ
06-04-2023 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
10-04-2023 ವಿಜ್ಞಾನ
12-04-2023 ತೃತೀಯ ಭಾಷೆ (ತೃತೀಯ ಭಾಷೆ ಪರೀಕ್ಷೆ ತೃತೀಯ ಭಾಷೆ-ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
15-04-2023 ಸಮಾಜ ವಿಜ್ಞಾನ

Published On - 5:24 pm, Mon, 5 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ