AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ

2015ಕ್ಕಿಂತ ಹಿಂದಿನ‌ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿದೆ.

3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 30, 2021 | 8:46 PM

Share

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ 3 ವರ್ಷಗಳ ಡಿಪ್ಲೊಮಾ ಕೋರ್ಸ್​ಅನ್ನು ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಕೆಪಿಎಎಸ್ಸಿ‌ ನಡೆಸುವ ಇಲಾಖಾ‌ ಪರೀಕ್ಷೆಗಳ‌ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯ‌ವಾಗಲಿದೆ. 2015ಕ್ಕಿಂತ ಹಿಂದಿನ‌ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಿಇ ವ್ಯಾಸಂಗದ ಲ್ಯಾಟರಲ್ ಎಂಟ್ರಿಗೂ ಈ ಮೂಲಕ ಅವಕಾಶ ನೀಡಲಾಗಿದೆ. ಈ ಕುರಿತು ನಿರ್ಧರಿಸಲೆಂದು ಈಮುನ್ನ ಸಮಿತಿ ರಚಿಸಲು ಆದೇಶಿಸಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆದಿದ್ದು, ಸಮಿತಿಯು ವಿಸ್ತಾರವಾಗಿ ಚರ್ಚಿ, ಸಾಧಕ-ಬಾಧಕಗನ್ನು ಪರಿಗಣಿಸಿ ದಿನಾಂಕ 31-03-2021ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿ ಸಲ್ಲಿಸಿದೆ.

Karnataka School Reopen: ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ ಸಿ ನಾಗೇಶ್ ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಈ ವಾರದಲ್ಲಿ ಸಿಎಂ ಹಾಗೂ ಕೊವಿಡ್ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡುತ್ತೇವೆ. ಆದರೆ ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ತಮಿಳುನಾಡು: 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನ 1ರಿಂದ ಶಾಲೆ ಆರಂಭ ತಮಿಳುನಾಡಿನಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಪಾಠ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ವರ್ಷದ ನಂತರ (19 ತಿಂಗಳು) ಅಂದರೆ ನವೆಂಬರ್ 1ರಿಂದ ಶಾಲೆಗಳು ಆರಂಭವಾಗಲಿವೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಸೆ.1ರಿಂದಲೇ ಭೌತಿಕ ತರಗತಿಗಳು ನಡೆಯುತ್ತಿವೆ.

ದೀರ್ಘಾವಧಿಗೆ ಶಾಲೆಗಳು ನಡೆಯದ ಕಾರಣ ಕಲಿಕೆಯಲ್ಲಿ ಸಾಕಷ್ಟವಾಗಿದೆ ಎಂದು ವೈದ್ಯಕೀಯ ಪರಿಣಿತರು, ಪೋಷಕರು ಮತ್ತು ಶಿಕ್ಷಣ ತಜ್ಞರು ಅಭಿಪ್ರಾಯಟ್ಟಿದ್ದರು. ಅವರ ದೃಷ್ಟಿಕೋನವನ್ನು ಗಮನದಲ್ಲಿರಿಸಿಕೊಂಡು 1ರಿಂದ 8ನೇ ತರಗತಿವರೆಗಿನ ಎಲ್ಲ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನವೆಂಬರ್ 1ರಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಕೊವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಶಾಲೆಗಳನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ದಗಂಗಾ ಶಿಕ್ಷಣ ಸಂಸ್ಥೆಗೆ ಎರಡು ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

World Heart Day 2021: ಇಂದು ವಿಶ್ವ ಹೃದಯ ದಿನ; ಇತಿಹಾಸ ಮಹತ್ವದ ಜತೆ ಉತ್ತಮ ಆರೋಗ್ಯಕ್ಕಾಗಿ ತಿಳಿಯಬೇಕಾದ ಮಾಹಿತಿ ಇಲ್ಲಿದೆ

Published On - 6:23 pm, Thu, 30 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್