Public Exam 2023: ಸುಪ್ರೀಂಕೋರ್ಟ್ ವಿಚಾರಣೆ ನಡುವೆಯೇ ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಆರಂಭ

ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ.

Public Exam 2023: ಸುಪ್ರೀಂಕೋರ್ಟ್ ವಿಚಾರಣೆ ನಡುವೆಯೇ ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಆರಂಭ
ಪ್ರಾತಿನಿಧಿಕ ಚಿತ್ರ Image Credit source: asianetnews.com
Follow us
| Updated By: Digi Tech Desk

Updated on:Mar 27, 2023 | 9:49 AM

ಬೆಂಗಳೂರು: ಇಂದಿನಿಂದ ಇದೇ ಮೊದಲ ಬಾರಿಗೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು ಆರಂಭವಾಗಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. 5ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಾ.30ರವರೆಗೆ ಪರೀಕ್ಷೆ ನಡೆಯಲಿದೆ. ಹಾಗೂ 8ನೇ ತರಗತಿ ಮಕ್ಕಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.

ಇನ್ನು ಮತ್ತೊಂದೆಡೆ ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.

ಇದನ್ನೂ ಓದಿ: 5,8th Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನವೊಂದಕ್ಕೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುತ್ತದೆ. ಪ್ರತಿ ವಿಷಯದ ಮೌಲ್ಯಂಕನಕ್ಕೆ ಎರಡು ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ. ತರಗತಿವಾರು ಪ್ರತಿ ವಿಷಯಕ್ಕೆ 40 ಅಂಕಗಳ ಲಿಖಿತ ಮೌಲ್ಯಾಂಕನಕ್ಕೆ 28 ಪ್ರಶ್ನೆಗಳನ್ನೊಳಗೊಂಡ 1 ಅಂಕದ 20 ಬಹುಆಯ್ಕೆ ಪ್ರಶ್ನೆಗಳು, 2 ಅಂಕಗಳ 5, 3 ಅಂಕಗಳ 2 ಹಾಗೂ 4 ಅಂಕಗಳ 1 ವಿವರಣಾತ್ಮಕ ಪ್ರಶ್ನೆಗಳು ಪ್ರತ್ಯಕ ಪ್ರಶ್ನೋತ್ತರ ಪತ್ರಿಕೆಯನ್ನು ನೀಡಲಾಗುತ್ತದೆ. 10 ಅಂಕಗಳ ಮೌಖಿಕ ಮೌಲ್ಯಾಂಕನವನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಲು ತಿಳಿಸಲಾಗಿದೆ. 40 ಅಂಕಗಳ ಲಿಖಿತ ಮೌಲ್ಯಾಂಕನ ಮತ್ತು 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸುವುದು. ಇಂದು ಸುಪ್ರೀಕೋರ್ಟ್ ಐದು ಹಾಗೂ ಎಂಟನೆ ತರಗತಿಗೆ ಪರೀಕ್ಷೆ ವಿಚಾರವಾಗಿ ವಿಚಾರಣೆ ನಡೆಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Mon, 27 March 23

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ