Sign In

By signing in or creating an account, you agree with Associated Broadcasting Company's Terms & Conditions and Privacy Policy.

Public Exam 2023: ಸುಪ್ರೀಂಕೋರ್ಟ್ ವಿಚಾರಣೆ ನಡುವೆಯೇ ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಆರಂಭ

ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ.

Public Exam 2023: ಸುಪ್ರೀಂಕೋರ್ಟ್ ವಿಚಾರಣೆ ನಡುವೆಯೇ ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಆರಂಭ
ಪ್ರಾತಿನಿಧಿಕ ಚಿತ್ರ Image Credit source: asianetnews.com
Follow us
ಆಯೇಷಾ ಬಾನು
| Updated By: Digi Tech Desk

Updated on:Mar 27, 2023 | 9:49 AM

ಬೆಂಗಳೂರು: ಇಂದಿನಿಂದ ಇದೇ ಮೊದಲ ಬಾರಿಗೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು ಆರಂಭವಾಗಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. 5ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಾ.30ರವರೆಗೆ ಪರೀಕ್ಷೆ ನಡೆಯಲಿದೆ. ಹಾಗೂ 8ನೇ ತರಗತಿ ಮಕ್ಕಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.

ಇನ್ನು ಮತ್ತೊಂದೆಡೆ ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.

ಇದನ್ನೂ ಓದಿ: 5,8th Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನವೊಂದಕ್ಕೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುತ್ತದೆ. ಪ್ರತಿ ವಿಷಯದ ಮೌಲ್ಯಂಕನಕ್ಕೆ ಎರಡು ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ. ತರಗತಿವಾರು ಪ್ರತಿ ವಿಷಯಕ್ಕೆ 40 ಅಂಕಗಳ ಲಿಖಿತ ಮೌಲ್ಯಾಂಕನಕ್ಕೆ 28 ಪ್ರಶ್ನೆಗಳನ್ನೊಳಗೊಂಡ 1 ಅಂಕದ 20 ಬಹುಆಯ್ಕೆ ಪ್ರಶ್ನೆಗಳು, 2 ಅಂಕಗಳ 5, 3 ಅಂಕಗಳ 2 ಹಾಗೂ 4 ಅಂಕಗಳ 1 ವಿವರಣಾತ್ಮಕ ಪ್ರಶ್ನೆಗಳು ಪ್ರತ್ಯಕ ಪ್ರಶ್ನೋತ್ತರ ಪತ್ರಿಕೆಯನ್ನು ನೀಡಲಾಗುತ್ತದೆ. 10 ಅಂಕಗಳ ಮೌಖಿಕ ಮೌಲ್ಯಾಂಕನವನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಲು ತಿಳಿಸಲಾಗಿದೆ. 40 ಅಂಕಗಳ ಲಿಖಿತ ಮೌಲ್ಯಾಂಕನ ಮತ್ತು 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸುವುದು. ಇಂದು ಸುಪ್ರೀಕೋರ್ಟ್ ಐದು ಹಾಗೂ ಎಂಟನೆ ತರಗತಿಗೆ ಪರೀಕ್ಷೆ ವಿಚಾರವಾಗಿ ವಿಚಾರಣೆ ನಡೆಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Mon, 27 March 23

ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ