AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2017ರ ಸಮೀಕ್ಷೆಗೆ ಹೋಲಿಸಿದರೆ 2021ರಲ್ಲಿ ಶಾಲೆಗಳಲ್ಲಿನ ಕಲಿಕಾ ಮಟ್ಟ ಕುಸಿತ: ಎನ್ಎಎಸ್ ಸಮೀಕ್ಷೆ

NAS 2021 8ನೇ ಕ್ಲಾಸು ವಿದ್ಯಾರ್ಥಿಗಳಿಗೆ ಭಾಷೆ,ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದ ತಿಳುವಳಿಕೆಯನ್ನು ಪರೀಕ್ಷಿಸಲಾಯಿತು. ಪಂಜಾಬ್, ರಾಜಸ್ಥಾನ, ಚಂಡೀಗಢ ಮತ್ತು ಹರಿಯಾಣ 2017 ರ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿದೆ.

2017ರ ಸಮೀಕ್ಷೆಗೆ ಹೋಲಿಸಿದರೆ 2021ರಲ್ಲಿ ಶಾಲೆಗಳಲ್ಲಿನ ಕಲಿಕಾ ಮಟ್ಟ ಕುಸಿತ: ಎನ್ಎಎಸ್ ಸಮೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 27, 2022 | 5:38 PM

ರಾಷ್ಟ್ರೀಯ ಸಾಧನೆ ಸಮೀಕ್ಷೆ 2021 ರ (NAS 2021)  ಪ್ರಕಾರ ಪಂಜಾಬ್ (Punjab) ಮತ್ತು ರಾಜಸ್ಥಾನವನ್ನು(Rajasthan) ಹೊರತುಪಡಿಸಿ, ದೇಶಾದ್ಯಂತದ ಶಾಲೆಗಳಲ್ಲಿನ  ಕಲಿಕಾ ಮಟ್ಟವು 2017 ರಲ್ಲಿ ದಾಖಲಾದ ಮಟ್ಟಕ್ಕಿಂತ ಕುಸಿದಿದೆ. ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ (Covid-19) ಉಂಟಾದ ಅಡಚಣೆಯಿಂದಾಗಿ ಕಲಿಕೆಗೆ ತೊಂದರೆಯಾಗಿದೆ. 720 ಜಿಲ್ಲೆಗಳಲ್ಲಿ 1.18 ಲಕ್ಷ ಶಾಲೆಗಳಲ್ಲಿ ನಡೆಸಿದ ಪರೀಕ್ಷೆಗಳ ಆಧಾರದ ಮೇಲೆ ಸಮೀಕ್ಷೆ ಬಹಿರಂಗ ಪಡಿಸಿರುವ ಕೆಲವು ಪ್ರಮುಖ ಅಂಶಗಳು ಇಲ್ಲಿವೆ.

3ನೇ ಕ್ಲಾಸು: ಗಣಿತ ಮತ್ತು ಭಾಷಾ ಕೌಶಲ್ಯಗಳು ಮತ್ತು ಪರಿಸರ ವಿಜ್ಞಾನದ ಪರಿಕಲ್ಪನಾ ತಿಳುವಳಿಕೆಯನ್ನು ಪರೀಕ್ಷಿಸಲಾಯಿತು. ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ವಿಷಯಗಳಲ್ಲಿ ಸಾಧಿಸಿದ ಅಂಕಗಳ ಒಟ್ಟು ಮೊತ್ತವು ಶೇಕಡಾವಾರು ಪ್ರಮಾಣದಲ್ಲಿ ನೀಡಲಾಗಿದೆ. ಪಂಜಾಬ್ ಮತ್ತು ರಾಜಸ್ಥಾನವನ್ನು ಹೊರತುಪಡಿಸಿ ಇದು 2017 ರ ಎನ್ಎಎಸ್ ಸುತ್ತಿನಲ್ಲಿ ದಾಖಲಾದ ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಾಗಿದೆ. 2017 ಕ್ಕೆ ಹೋಲಿಸಿದರೆ ಕೇರಳದಂತಹ ಕೆಲವು ರಾಜ್ಯಗಳು ತಮ್ಮ ಗಣಿತದ ಸ್ಕೋರ್ ಅನ್ನು ಉತ್ತಮಗೊಳಿಸಿವೆ. ಆದರೆ ಒಟ್ಟಾರೆ ಸ್ಕೋರ್ ಕಡಿಮೆಯಾಗಿದೆ. ರಾಜಸ್ಥಾನ, ಪಂಜಾಬ್ ಮತ್ತು ಕೇರಳ ಅತ್ಯುತ್ತಮ ಪ್ರದರ್ಶನ ನೀಡಿದ್ದು ತೆಲಂಗಾಣ, ಅರುಣಾಚಲ ಪ್ರದೇಶ ಮತ್ತು ಛತ್ತೀಸ್‌ಗಢ ಕೊನೆಯ ಮೂರು ಸ್ಥಾನಗಳಲ್ಲಿದೆ.

ಜಿಲ್ಲಾ ಮಟ್ಟದ ಕಾರ್ಯತಂತ್ರ III, V, VIII ಮತ್ತು X ತರಗತಿಗಳ 34 ಲಕ್ಷ ವಿದ್ಯಾರ್ಥಿಗಳ ನಡುವೆ ನವೆಂಬರ್‌ನಲ್ಲಿ ಸಮೀಕ್ಷೆಯನ್ನು ನಡೆಸಿದ ಶಿಕ್ಷಣ ಸಚಿವಾಲಯವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿರುವುದರಿಂದ, ಕಾರ್ಯಕ್ಷಮತೆಯ ಆಧಾರದ ಮೇಲೆ ಜಿಲ್ಲಾ ಮಟ್ಟದ ಕಾರ್ಯತಂತ್ರಗಳನ್ನು ಸಿದ್ಧಪಡಿಸಲು ಈ ಸಂಶೋಧನೆಗಳು ಮಹತ್ವದ್ದಾಗಿದೆ.

ಇದನ್ನೂ ಓದಿ
Image
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ ಅರ್ಹತೆ ಬಿಡುಗಡೆ
Image
ದೇವನೂರು ಮಹದೇವ ತಿರುಗೇಟು: ಸಚಿವ ನಾಗೇಶ್ ನಾಗಪುರದ ಆರ್‌ಎಸ್‌ಎಸ್‌ ಪ್ರಭಾವಕ್ಕೆ ಒಳಗಾಗಿದ್ದಾರೆ, ನನ್ನ ಪಾಠ ಮಾಡಬೇಡಿ ಎಂದು ಸರ್ಕಾರ ಹೇಳಲಿ
Image
ಎರಡು ಕೊಠಡಿ ಎಂಟು ತರಗತಿ; ದಿಕ್ಕಿಗೊಂದು ಕ್ಲಾಸ್, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಸರ್ಕಾರಿ ಶಾಲೆಯ ಸ್ಥಿತಿ ಹೇಗಿದೆ ನೋಡಿ
Image
KSEEB Result 2022: ಶೇ. 90.29 ಫಲಿತಾಂಶದೊಂದಿಗೆ ವಿದ್ಯಾರ್ಥಿನಿಯರೇ ಮೇಲುಗೈ

5ನೇ ಕ್ಲಾಸು: ಇಲ್ಲಿಯೂ ಗಣಿತ ಮತ್ತು ಭಾಷಾ ಕೌಶಲ್ಯಗಳು ಮತ್ತು ಪರಿಸರ ವಿಜ್ಞಾನದ ಪರಿಕಲ್ಪನಾ ತಿಳುವಳಿಕೆಯನ್ನು ಪರೀಕ್ಷಿಸಲಾಯಿತು. ಪಂಜಾಬ್ ಮತ್ತು ರಾಜಸ್ಥಾನ 2017 ರ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಅಂಕಗಳಿದ್ದರೂ ಈ ರಾಜ್ಯಗಳ ಫಲಿತಾಂಶಗಳು ಹೆಚ್ಚು ಭಿನ್ನವಾಗಿರಲಿಲ್ಲ.  ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉತ್ತಮ ಪ್ರದರ್ಶನ ನೀಡಿದವು. ಆದರೆ ಇದು ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದ ಶೈಕ್ಷಣಿಕ ಸಾಧನೆ 2017 ರ ರಾಷ್ಟ್ರೀಯ ಸ್ಕೋರ್‌ಗಿಂತ ಕಡಿಮೆ. ಈ ವಿಭಾಗದಲ್ಲಿ ತೆಲಂಗಾಣ, ಮೇಘಾಲಯ ಮತ್ತು ಛತ್ತೀಸ್‌ಗಢ ಕಳಪೆ ಪ್ರದರ್ಶನ ನೀಡಿದೆ.

8ನೇ ಕ್ಲಾಸು: ಭಾಷೆ,ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದ ತಿಳುವಳಿಕೆಯನ್ನು ಪರೀಕ್ಷಿಸಲಾಯಿತು. ಪಂಜಾಬ್, ರಾಜಸ್ಥಾನ, ಚಂಡೀಗಢ ಮತ್ತು ಹರಿಯಾಣ 2017 ರ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿತು. ಮೇಘಾಲಯ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶ ಕೆಳಗಿನ ಹಂತದಲ್ಲಿದೆ. ವಿವಿಧ ಕ್ಲಾಸುಗಳವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ವಿವಿಧ ಸೂಚಕಗಳ ಮೇಲೆ ಮೌಲ್ಯಮಾಪನ ಮಾಡಲಿದೆ. ಉದಾಹರಣೆಗೆ 3ನೇ ತರಗತಿಯ ವಿದ್ಯಾರ್ಥಿಗಳಿಗೆ ಗ್ರಹಿಕೆಯೊಂದಿಗೆ ಸಣ್ಣ ಪಠ್ಯಗಳನ್ನು ಓದಲು ಮತ್ತು ಮೂರು-ಅಂಕಿಯ ಸಂಖ್ಯೆಗಳ ಸಂಕಲನ ಮತ್ತು ವ್ಯವಕಲನವನ್ನು ಬಳಸಿಕೊಂಡು ಸರಳ ದೈನಂದಿನ ಜೀವನದ ಸಂಖ್ಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕೇಳಲಾಯಿತು. ಗಣಿತ ಪ್ರಶ್ನೆಗಳನ್ನು ನೀಡಿ ಸ್ಕ್ವೇರ್,ಕ್ಯೂಬ್ಸ್, ಸ್ಕ್ವೇರ್ ರೂಟ್ಸ್ ಮತ್ತು ಕ್ಯೂಬ್ ರೂಟ್ಸ್ ಕಂಡು ಹಿಡಿಯುವಂತೆ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೇಳಲಾಯಿತು ಸಂವಿಧಾನದ ಅಡಿಯಲ್ಲಿ ಮೂಲಭೂತ ಹಕ್ಕುಗಳ ಬಗ್ಗೆ ಅವರ ಜ್ಞಾನ ಮತ್ತು ನಿರ್ದಿಷ್ಟ ಸಂದರ್ಭಗಳಲ್ಲಿ ರಕ್ಷಣೆ ಮತ್ತು ಪ್ರಚಾರವನ್ನು ಸಹ ಪರೀಕ್ಷಿಸಲಾಯಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:47 pm, Fri, 27 May 22

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್