AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alert: ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ ಫಾರ್ಮಾ ಕೋರ್ಸ್​ಗೆ ಜ 27ರಂದು ಪ್ರವೇಶ ಪರಿಶೀಲನೆ

BPharma in GCP: ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಅಂಕಪಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ದೃಢೀಕರಿಸಿದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಸಿಇಟಿ ಱಂಕ್ ಪ್ರಮಾಣ ಪತ್ರವನ್ನು ತರಬೇಕು

Alert: ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ ಫಾರ್ಮಾ ಕೋರ್ಸ್​ಗೆ ಜ 27ರಂದು ಪ್ರವೇಶ ಪರಿಶೀಲನೆ
ಬೆಂಗಳೂರಿನ ಸರ್ಕಾರಿ ಔಷಧ ಮಹಾವಿದ್ಯಾಲಯ
TV9 Web
| Edited By: |

Updated on:Jan 19, 2022 | 7:04 PM

Share

ಬೆಂಗಳೂರು: ನಗರದ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಫಾರ್ಮಾ ಪ್ರಥಮ ವರ್ಷದ ಕೋರ್ಸ್​ಗಳಿಗೆ ಸೇರಲು ಇಚ್ಛಿಸುವ ವಿದ್ಯಾರ್ಥಿಗಳು ಜನವರಿ 27ರಂದು ಮೂಲ ದಾಖಲಾತಿಗಳೊಂದಿಗೆ ಆಯ್ಕೆ ಸಮಿತಿ ಎದುರು ಹಾಜರಾಗಬೇಕು ಎಂದು ವಿದ್ಯಾಲಯದ ಪ್ರಾಚಾರ್ಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಅಂಕಪಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ದೃಢೀಕರಿಸಿದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಸಿಇಟಿ ಱಂಕ್ ಪ್ರಮಾಣ ಪತ್ರವನ್ನು ತರಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ಅದೇ ದಿನ ₹ 14,450 ಪಾವತಿಸಿ ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂದು ಸೂಚಿಸಲಾಗಿದೆ.

ಮಾಹಿತಿಗೆ ದೂರವಾಣಿ ಸಂಖ್ಯೆ 080 2222 2681, ಇಮೇಲ್ principal.gcp@gmail.com, ಜಾಲತಾಣ www.govtcopblr.org ನೋಡಬಹುದು.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಹೆಡ್ ಕಾನ್ಸ್‌ಟೇಬಲ್ ಜಿಡಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 249 ಹುದ್ದೆಗಳು ಖಾಲಿಯಿದ್ದು, ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ನೇಮಕಾತಿ ನಡೆಯಲಿದೆ. ಅದರಂತೆ ಆಸಕ್ತ ಅಭ್ಯರ್ಥಿಗಳು ಅಭ್ಯರ್ಥಿಗಳು CISF-cisf.gov.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು. ಇನ್ನು ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31, 2022 ಆಗಿದ್ದು, ಅದಕ್ಕೂ ಮುನ್ನ ಅರ್ಜಿ ಸಲ್ಲಿಸಬೇಕಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಪುರುಷ ಅಭ್ಯರ್ಥಿಗಳಿಗೆ ಲಭ್ಯವಿರುವ ಖಾಲಿ ಹುದ್ದೆಗಳು- 181 ಮಹಿಳಾ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳು- 68

ಅರ್ಹತಾ ಮಾನದಂಡ: ಅಭ್ಯರ್ಥಿಗಳು ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ/ರಾಷ್ಟ್ರೀಯ/ಅಂತರರಾಷ್ಟ್ರೀಯ ಪ್ರತಿನಿಧಿಸುವ ಕ್ರೆಡಿಟ್‌ನೊಂದಿಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಆಗಸ್ಟ್ 1, 2021 ರಂತೆ 18 ವರ್ಷದಿಂದ 23 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ, SC ಮತ್ತು ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಸೆಪ್ಟೆಂಬರ್ 1, 2019 ರಿಂದ ಮಾರ್ಚ್ 31, 2022 ರವರೆಗೆ ನಡೆದ ಕ್ರೀಡಾ ಪಂದ್ಯಾವಳಿಗಳಲ್ಲಿನ ಅವರ ಪ್ರದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಪ್ರಾಂತ್ಯದಲ್ಲೂ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.

ಪ್ರಮುಖ ದಿನಾಂಕಗಳು: ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 31, 2022 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ: ಸರಳೀಕೃತ ಪಿಯು ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಂತನೆ ಇದನ್ನೂ ಓದಿ: Oxfam India Survey: ಭಾರತದ ಟಾಪ್ 10​ ಶ್ರೀಮಂತರ ಸಂಪತ್ತಲ್ಲಿ 25 ವರ್ಷಗಳ ತನಕ ಮಕ್ಕಳಿಗೆ ನೀಡಬಹುದಂತೆ ಶಿಕ್ಷಣ

Published On - 7:02 pm, Wed, 19 January 22

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ