AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Education: 6 ವರ್ಷ ತುಂಬಿದ್ದರೆ ಮಾತ್ರ 1ನೇ ತರಗತಿ ದಾಖಲಾತಿಗೆ ಅವಕಾಶ; ಹೊಸ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಆದೇಶ ಹೊರಡಿಸಿದೆ.

Education: 6 ವರ್ಷ ತುಂಬಿದ್ದರೆ ಮಾತ್ರ 1ನೇ ತರಗತಿ ದಾಖಲಾತಿಗೆ ಅವಕಾಶ; ಹೊಸ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 27, 2022 | 8:28 AM

Share

ಬೆಂಗಳೂರು: ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಆಯಾ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ ಮಗುವಿನ ವಯಸ್ಸು 6 ವರ್ಷ ಪೂರ್ಣಗೊಂಡಿದ್ದರೆ ಮಾತ್ರ 1ನೇ ತರಗತಿಗೆ ಪ್ರವೇಶ ಪಡೆಯಲು ಸಾಧ್ಯ. ಶಿಕ್ಷಣ ಹಕ್ಕು ಕಾಯ್ದೆ 2009 (Right To Education – RTE) ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರ ಅನ್ವಯ ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆಯ ಅನ್ವಯ 2016-17ನೇ ಶೈಕ್ಷಣಿಕ ವರ್ಷದಲ್ಲಿ ಎಲ್​ಕೆಜಿ ಪ್ರವೇಶಕ್ಕೆ ಮಗುವಿಗೆ 4 ವರ್ಷ, 10 ತಿಂಗಳು ತುಂಬಿರಬೇಕು ಎಂದು ನಿಯಮ ಮಾಡಲಾಯಿತು. ಅದಕ್ಕೂ ಮೊದಲು ಎಲ್​ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳು ಆಗಿದ್ದರೆ ಸಾಕಾಗಿತ್ತು. ಅದೇ ರೀತಿ 1ನೇ ತರಗತಿ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ನಡುವೆ ಮಗುವಿನ ವಯಸ್ಸು ಇದ್ದರೆ ದಾಖಲಾತಿ ಮಾಡಿಕೊಳ್ಳಬಹುದು ಎಂದು ನಿಯಮ ರೂಪಿಸಿತ್ತು.

Govt-Order

1ನೇ ತರಗತಿಗೆ ಪ್ರವೇಶಕ್ಕೆ ನಿಯಮ ರೂಪಿಸಿ ಸರ್ಕಾರ ಹೊರಡಿಸಿರುವ ಆದೇಶ

ಕರ್ನಾಟಕ ಸರ್ಕಾರವು ಈ ನಿಯಮವನ್ನು 2018ರಲ್ಲಿ ಮತ್ತೊಮ್ಮೆ ಸಡಿಲಿಸಿತ್ತು. 1ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳು, ಗರಿಷ್ಠ 7 ವರ್ಷ ಆಗಿರಬೇಕು ಎಂದು ಅಧಿಸೂಚನೆ ಹೊರಡಿಸಿತು. ಇದೀಗ ಮತ್ತೊಮ್ಮೆ ಈ ಆದೇಶ ಮಾರ್ಪಾಟಾಗಿದ್ದು, ಆಯಾ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ ಮಗುವಿನ ವಯಸ್ಸು 6 ವರ್ಷ ಪೂರ್ಣಗೊಂಡಿದ್ದರೆ ಮಾತ್ರ 1ನೇ ತರಗತಿಗೆ ಪ್ರವೇಶ ಪಡೆಯಲು ಸಾಧ್ಯ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.

Published On - 6:56 pm, Tue, 26 July 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್