AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Engineering: ಸೆಮಿಕಂಡಕ್ಟರ್ ವಿಷಯದ 2 ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಿದ AICTE

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (AICTE) ಎರಡು ಹೊಸ ಕೋರ್ಸ್​ಗಳನ್ನು ಪ್ರಾರಂಭಿಸಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರು ಅಶ್ವಿನಿ ವೈಷ್ಣವ್ ಎಎನ್​ಐ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

Engineering: ಸೆಮಿಕಂಡಕ್ಟರ್ ವಿಷಯದ 2 ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಿದ AICTE
ಇಂಜಿನಿಯರಿಂಗ್
ನಯನಾ ಎಸ್​ಪಿ
|

Updated on: Feb 18, 2023 | 6:59 PM

Share

ನವದೆಹಲಿ: ಭಾರತದಲ್ಲಿ ತಂತ್ರಜ್ಞಾನಗಳು ಹೆಚ್ಚಿನ ಬೆಳವಣಿಗೆಗೆ ಹಲವುಯೋಜನೆಗಳನ್ನು ತರಲಾಗುತ್ತಿದೆ.ದೇಶವು ಸೆಮಿಕಂಡಕ್ಟರ್ ಗಳ ಅದ್ಭುತ ವಿನ್ಯಾಸಕಾರನ್ನು ಹೊಂದಿದೆ. ಇಂದು ಪ್ರಪಂಚದ 20% ರಷ್ಟು ಸೆಮಿಕಂಡಕ್ಟರ್ ವಿನ್ಯಾಸಗಳನ್ನು ಭಾರತೀಯ ಇಂಜಿನಿಯರ್‌ಗಳೇ ಮಾಡುತ್ತಿದ್ದಾರೆ. ಇದೀಗ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (AICTE) ಎರಡು ಹೊಸ ಕೋರ್ಸ್​ಗಳನ್ನು ಪ್ರಾರಂಭಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಎಎನ್​ಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

“ಪ್ರಧಾನ ಮಂತ್ರಿ ಸೆಮಿಕಾನ್‌ ಇಂಡಿಯಾವನ್ನು 1 ಜನವರಿ 2022 ರಂದು ಪ್ರಾರಂಭಿಸಿದರು. ಪ್ರಮುಖ ಅಂಶವೆಂದರೆ ಭಾರತವು 10 ವರ್ಷಗಳಲ್ಲಿ 85,000 ಸೆಮಿಕಂಡಕ್ಟರ್ ವೃತ್ತಿಪರರನ್ನು ನೀಡಿದೆ. ಹೊಸ ಕೋರ್ಸ್ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಲಾಗಿದೆ ಮತ್ತು ಇಂದು ಶಿಕ್ಷಣ ಸಚಿವಾಲಯದೊಳಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (AICTE) ಎರಡು ಹೊಸ ಕೋರ್ಸ್​ಗಳನ್ನು ಪ್ರಾರಂಭಿಸಿದೆ” ಎಂದು ಎಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದರು.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಅಧ್ಯಯನ ಮಾಡಲು ಬಯಸುವ ಭಾರತದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ!

“ಹೊಸ ಕೋರ್ಸ್​ಗಳಲ್ಲಿ ಮೊದಲನೆಯದು ಸೆಮಿಕಂಡಕ್ಟರ್‌ಗಳಲ್ಲಿ ಬಿಟೆಕ್ ಪ್ರೋಗ್ರಾಂ ಮತ್ತು ಎರಡನೆಯದು ಸೆಮಿಕಂಡಕ್ಟರ್‌ಗಳಲ್ಲಿ ಡಿಪ್ಲೊಮಾ ಪ್ರೋಗ್ರಾಂ. ಈ ಎರಡು ಕೋರ್ಸ್​ಗಳು ಇಂಜಿನಿಯರಿಂಗ್​ನಲ್ಲಿರುವ ಉತ್ತಮ ಪ್ರತಿಭೆಯನ್ನು ಗುರುತಿಸಲು ನಮಗೆ ಸಹಾಯ ಮಾಡುತ್ತದೆ” ಎಂದು ಸಚಿವರು ಹೇಳಿದರು.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ