AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTech in IISc: ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ನಿಂದ ಹೊಸ ಕೋರ್ಸ್; ಜೂನ್ 1ರಿಂದ ಅರ್ಜಿ ಆಹ್ವಾನ

IIScಯಲ್ಲಿ BTech ಗಣಿತ ಮತ್ತು ಕಂಪ್ಯೂಟಿಂಗ್‌ನ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದ್ದು ನಾಳೆ ಜೂನ್ 1 ರಿಂದಲೇ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವವರು https://admissions.iisc.ac.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

BTech in IISc: ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ನಿಂದ ಹೊಸ ಕೋರ್ಸ್; ಜೂನ್ 1ರಿಂದ ಅರ್ಜಿ ಆಹ್ವಾನ
ಇಂಡಿಯನ್ ಇನ್ಸ್'ಟಿಟ್ಯೂಟ್ ಆಫ್ ಸೈನ್ಸ್
TV9 Web
| Updated By: ಆಯೇಷಾ ಬಾನು|

Updated on: May 31, 2022 | 7:35 PM

Share

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ (ಐಐಎಸ್ಸಿ) ಭಾರತದ ಅತ್ಯುತ್ತಮ ಯೂನಿವರ್ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಈಗ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದೆ. IIScಯಲ್ಲಿ BTech ಗಣಿತ ಮತ್ತು ಕಂಪ್ಯೂಟಿಂಗ್‌ನ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದ್ದು ನಾಳೆಯಿಂದಲೇ (ಜೂನ್ 1) ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವವರು https://admissions.iisc.ac.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹಾಗೂ ಈ ಹೊಸ ಕೋರ್ಸ್ಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು https://iisc.ac.in/admissions/undergraduate-btech/ ವೆಬ್ ಸೈಟ್ಗೆ ಭೇಟಿ ನೀಡಬಹುದು. ಇನ್ನು BTechನಲ್ಲಿ ಅನೇಕ ಕೋರ್ಸ್ಗಳು ಲಭ್ಯವಿದೆ. ಪದವಿಪೂರ್ವ ಹಂತದಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ, ಮಾರ್ಗದರ್ಶನ ಮತ್ತು ನಿರ್ದೇಶನದ ಕೊರತೆಯಿಂದಾಗಿ ಕಲಿಕೆಗೆ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಈ ಕೋರ್ಸ್ ಮೂಲಕ ಪದವಿಪೂರ್ವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಇದು ಸಹಾಯಕವಾಗಲಿದೆ. ಹೀಗೆ ತರಬೇತಿ ಪಡೆದ ವ್ಯಕ್ತಿಗಳ ಶೈಕ್ಷಣಿಕ ಮತ್ತು ಉದ್ಯಮ ಎರಡೂ ಕ್ಷೇತ್ರಗಳಲ್ಲೂ ಮಹತ್ವದ ಪ್ರಭಾವ ಬೀರುತ್ತದೆ. ಇದನ್ನೂ ಓದಿ: Team India: ಮುಂದಿನ 6 ತಿಂಗಳು ಟೀಮ್ ಇಂಡಿಯಾ ಫುಲ್ ಬಿಝಿ: ಹೀಗಿದೆ ವೇಳಾಪಟ್ಟಿ

ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿನ ಈ ಹೊಸ ಪದವಿಪೂರ್ವ ಕಾರ್ಯಕ್ರಮವು ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ಉತ್ತಮರನ್ನಾಗಿಸಿ ಈ ಕ್ಷೇತ್ರದಲ್ಲಿ ಮುಂಬರುವ ಸವಾಲುಗಳನ್ನು ಎದುರಿಸುವಷ್ಟು ಬಲಿಷ್ಠರನ್ನಾಗಿಸಲಿದೆ. ಅವರು ಭವಿಷ್ಯದಲ್ಲಿ ಸಂಶೋಧನೆ, ಅಭಿವೃದ್ಧಿಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ ಮತ್ತು ಗಣಿತ, ಕಂಪ್ಯೂಟರ್ ವಿಜ್ಞಾನದ ಆಳವಾದ ಬಳಕೆಯ ಅಗತ್ಯವಿರುವ ಮುಂದಿನ ಪೀಳಿಗೆಯ ತಂತ್ರಜ್ಞಾನಗಳು, ಮತ್ತು ಡೇಟಾ ಸೈನ್ಸ್ಗಳನ್ನು ತಿಳಿಯುವಲ್ಲಿ ಈ ಕೋರ್ಸ್ ಸಹಾಯ ಮಾಡಲಿದೆ.

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ