AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.Sc Nursing, B.Pharma, Pharma.D ಕೋರ್ಸ್​: ಅಂತಿಮ ಸುತ್ತಿನ ಸೀಟು ಹಂಚಿಕೆ

B.Sc Nursing, B.Pharma, Pharma.D ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದಿಷ್ಟು ಸೂಚನೆಗಳನ್ನ ನೀಡಿದೆ. ಅ.6ರ ಬೆಳಿಗ್ಗೆ 11 ಗಂಟೆಯ ಒಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು ಸೂಚಿಸಿದೆ.

B.Sc Nursing, B.Pharma, Pharma.D ಕೋರ್ಸ್​: ಅಂತಿಮ ಸುತ್ತಿನ ಸೀಟು ಹಂಚಿಕೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಪ್ರಸನ್ನ ಹೆಗಡೆ
|

Updated on: Oct 03, 2025 | 9:02 PM

Share

ಬೆಂಗಳೂರು, ಅಕ್ಟೋಬರ್​ 03: B.Sc Nursing, B.Pharma, Pharma.D ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11 ಗಂಟೆಯ ಒಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು KEA ವೆಬ್ ಸೈಟ್ ನಲ್ಲಿ ಲಿಂಕ್ ತೆರೆಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examinations Authority)  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೆ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲ್ಪಡುತ್ತವೆ. ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಸಹ ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಕಾಲೇಜುವಾರು, ವರ್ಗವಾರು ಮತ್ತು ಕೋರ್ಸುವಾರು ವಿವರವಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಅದನ್ನು ನೋಡಿಕೊಂಡೇ ಆಯ್ಕೆ ದಾಖಲಿಸಬೇಕು. 10 ಸಾವಿರ‌ ರೂಪಾಯಿ ಕಾಷನ್ ಡೆಪಾಸಿಟ್ ಮಾಡಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆಗೆ ಅರ್ಜಿ ಪ್ರಕ್ರಿಯೆ ಆರಂಭ

ಇದು ಅಂತಿಮ ಸುತ್ತಿನ ಸೀಟು ಹಂಚಿಕೆಯಾಗಿರುವುದರಿಂದ ಆಯ್ಕೆ ಎಂಟ್ರಿ ಮಾಡಿದ ಕಾಲೇಜಿನಲ್ಲಿ ಸೀಟು ಹಂಚಿಕೆಯಾದರೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಹೀಗಾಗಿ, ಅಭ್ಯರ್ಥಿಗಳು ಸೇರಬಹುದಾದ ಕಾಲೇಜನ್ನು ಖಚಿತಪಡಿಸಿಕೊಂಡು ಎಂಟ್ರಿ ನಮೂದಿಸಬೇಕು. ಸೀಟ್ ಮ್ಯಾಟ್ರಿಕ್ಸ್ ನ ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ವೆಬ್ ಸೈಟ್ ಗಮನಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!