Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಬಗ್ಗೆ ಸ್ನಾತಕೋತ್ತರ ಕೋರ್ಸ್ ಆರಂಭಿಸಿದ ಬನಾರಸ್ ಹಿಂದೂ ವಿವಿ; ಮೊದಲ ಬ್ಯಾಚ್​ಗೆ 45 ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆ

ಈ ಕೋರ್ಸ್ ಹಿಂದೂ ಧರ್ಮದ ಅನೇಕ ಅಪರಿಚಿತ ಅಂಶಗಳ ಬಗ್ಗೆ ಜಗತ್ತಿಗೆ ಅರಿವು ಮೂಡಿಸುತ್ತದೆ ಮತ್ತು ಈ ಕೋರ್ಸ್​ನ ಬೋಧನೆಯು ಹೆಚ್ಚಿನ ಜನರಿಗೆ ಹಿಂದೂ ಧರ್ಮವನ್ನು ತಲುಪಿಸಲು ಸಹಾಯ ಮಾಡುತ್ತದೆ. ಸದ್ಯ ಈ ಕೋರ್ಸ್​ನ ಮೊದಲ ಬ್ಯಾಚ್‌ಗೆ ವಿದೇಶಿ ವಿದ್ಯಾರ್ಥಿ ಸೇರಿದಂತೆ ಒಟ್ಟು 45 ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಪ್ರೊ.ಶುಕ್ಲಾ ಹೇಳಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಸ್ನಾತಕೋತ್ತರ ಕೋರ್ಸ್ ಆರಂಭಿಸಿದ ಬನಾರಸ್ ಹಿಂದೂ ವಿವಿ; ಮೊದಲ ಬ್ಯಾಚ್​ಗೆ 45 ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆ
ಬನಾರಸ್ ಹಿಂದೂ ವಿವಿ
Follow us
TV9 Web
| Updated By: preethi shettigar

Updated on:Jan 31, 2022 | 9:03 AM

ನವದೆಹಲಿ: ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯ (BHU) ಹೊಸ ಕೋರ್ಸ್ ಅನ್ನು ಪ್ರಾರಂಭಿಸಿದೆ.  ಹಿಂದೂ ಧರ್ಮದ ಬಗ್ಗೆ ವಿದ್ಯಾರ್ಥಿಗಳಿಗೆ(Students) ಹೆಚ್ಚಿನ ಮಾಹಿತಿ ನೀಡುವ ನಿಟ್ಟಿನಲ್ಲಿ ಎಂಎ ಕೋರ್ಸ್​ನಲ್ಲಿ(Course) ಹಿಂದೂ ಅಧ್ಯಯನ ಎಂಬ ಹೊಸ ಕೋರ್ಸ್​ ಪ್ರಾರಂಭಿಸಿದ್ದಾರೆ. ಉತ್ತರ ಪ್ರದೇಶದ ಬಿಹೆಚ್​ಯು ಪ್ರಕಾರ, ಸ್ನಾತಕೋತ್ತರ ಕೋರ್ಸ್​ನಲ್ಲಿ ಈ ರೀತಿಯ ಬದಲಾವಣೆ ಇದೇ ಮೊದಲು ಎಂದು ತಿಳಿಸಿದ್ದಾರೆ.

ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮುಖ್ಯಸ್ಥ ವಿ.ಕೆ. ಶುಕ್ಲಾ ಈ ಕೋರ್ಸ್ ಅನ್ನು ಉದ್ಘಾಟಿಸಿದರು ಮತ್ತು ಇದು ರಾಷ್ಟ್ರೀಯ ಶಿಕ್ಷಣ ನೀತಿ, 2020ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಅಂತರಶಿಸ್ತೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಜತೆಗೆ ಈ ಕಾರ್ಯಕ್ರಮವನ್ನು ಭಾರತ್ ಅಧ್ಯಯನ ಕೇಂದ್ರ, ತತ್ವಶಾಸ್ತ್ರ ಮತ್ತು ಧರ್ಮ ಇಲಾಖೆ, ಸಂಸ್ಕೃತ ಇಲಾಖೆ ಮತ್ತು ಪ್ರಾಚೀನ ಭಾರತೀಯ ಇತಿಹಾಸ, ಸಂಸ್ಕೃತಿ ಮತ್ತು ಪುರಾತತ್ವ ಇಲಾಖೆ, ಕಲಾ ವಿಭಾಗದ ಅಡಿಯಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಈ ಕೋರ್ಸ್ ಹಿಂದೂ ಧರ್ಮದ ಅನೇಕ ಅಪರಿಚಿತ ಅಂಶಗಳ ಬಗ್ಗೆ ಜಗತ್ತಿಗೆ ಅರಿವು ಮೂಡಿಸುತ್ತದೆ ಮತ್ತು ಈ ಕೋರ್ಸ್​ನ ಬೋಧನೆಯು ಹೆಚ್ಚಿನ ಜನರಿಗೆ ಹಿಂದೂ ಧರ್ಮವನ್ನು ತಲುಪಿಸಲು ಸಹಾಯ ಮಾಡುತ್ತದೆ. ಸದ್ಯ ಈ ಕೋರ್ಸ್​ನ ಮೊದಲ ಬ್ಯಾಚ್‌ಗೆ ವಿದೇಶಿ ವಿದ್ಯಾರ್ಥಿ ಸೇರಿದಂತೆ ಒಟ್ಟು 45 ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಪ್ರೊ.ಶುಕ್ಲಾ ಹೇಳಿದ್ದಾರೆ.

ಬಳಿಕ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್‌ನ ನಿರ್ದೇಶಕ ಡಾ.ವಿಜಯ್ ಶಂಕರ್ ಶುಕ್ಲಾ, ಹಿಂದೂ ಅಧ್ಯಯನದ ಬಗ್ಗೆ ಇಂತಹ ಕೋರ್ಸ್‌ನ ಅಗತ್ಯವನ್ನು ಮತ್ತಷ್ಟು ಮನವರಿಕೆ ಮಾಡುವಂತೆ ವಿವರಣೆ ನೀಡಿದರು.

ಬಳಿಕ ಪ್ರೊ.ರಾಕೇಶ್ ಉಪಾಧ್ಯಾಯ ಮಾತನಾಡಿ, ಸನಾತನ ಜೀವನ ಮೌಲ್ಯಗಳ ನಿರ್ಮಾಣಕ್ಕೆ ಈ ಕೋರ್ಸ್ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:

ಪ್ರಸಕ್ತ ಸಾಲಿನಿಂದ ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ: ಅಶ್ವತ್ಥ್ ನಾರಾಯಣ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ

2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ಕಲಿಕೆಗೆ ಅವಕಾಶ

Published On - 8:51 am, Mon, 31 January 22

ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು