AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರಿನ ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 26, 2023 | 6:46 AM

Share

ಬೆಂಗಳೂರು, ಸೆ.26: ಪಕ್ಕದ ರಾಜ್ಯ ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಇಂದು ಬೀದಿಗಿಳಿಯಲಿದ್ದಾರೆ (Cauvery Water Dispute). ನಾಡಿನಾದ್ಯಂತ ಕಾವೇರಿಗಾಗಿ ಹೋರಾಟ ತೀವ್ರಗೊಂಡಿದ್ದು, ಇವತ್ತು ಇಡೀ ಬೆಂಗಳೂರು ಸ್ತಬ್ಧವಾಗಲಿದೆ (Bengaluru Bandh). ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು ಬಂದ್ ಆಗಲಿದೆ. 97ಕ್ಕೂ ಹೆಚ್ಚು ಸಂಘಟನೆಗಳು ಬೆಳಗ್ಗೆ ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ. ಹೀಗಾಗಿ ಇಂದು ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಇಂದಿನ ಬಂದ್‌ಗೆ ಖಾಸಗಿ ಶಿಕ್ಷಣ ಒಕ್ಕೂಟ ರೂಪ್ಸಾ ಬೆಂಬಲ ನೀಡಿದೆ. ರೂಪ್ಸಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಪೋಷಕರ ಸಂಘಟನೆಗಳು, ಖಾಸಗಿ ಶಾಲಾ ವಾಹನಗಳ ಮಾಲೀಕರು ಕೂಡಾ ಬಂದ್​ಗೆ ಬೆಂಬಲ ಘೋಷಿಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟದ 37 ಸಂಘಟನೆಗಳು ಬಂದ್‌ಗೆ ಸಾಥ್‌ ಕೊಟ್ಟಿವೆ. ಪ್ರವಾಸೋದ್ಯಮ ವಾಹನಗಳ ಮಾಲೀಕರು, ಸಣ್ಣ ಕೈಗಾರಿಕೆಗಳ ಒಕ್ಕೂಟ, ಬೆಂಗಳೂರು ವಕೀಲರ ಸಂಘ, ಬಿಡಿಎ ನೌಕರರ ಸಂಘ & BWSSB ನೌಕರರ ಸಂಘ , ಬೆಂಗಳೂರು ಬೀದಿ ಬದಿ ಸಂಘ, ಬಿಬಿಎಂಪಿ ನೌಕರರ ಸಂಘ, ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಸೇರಿದಂತೆ 95 ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ.

ಇದನ್ನೂ ಓದಿ: Bengaluru Bandh News Live Updates: ಕಾವೇರಿ ವಿವಾದ: ಇಂದು ಬೆಂಗಳೂರು ಬಂದ್‌

ಇಂದು ಟಿ.ನರಸೀಪುರ ಬಂದ್​

ಇನ್ನು ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಇಂದು ಟಿ.ನರಸೀಪುರ ಕೂಡ ಬಂದ್ ಮಾಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ರೈತರು, ಹೋರಾಟಗಾರರ ಆಕ್ರೋಶ ಮುಂದುವರಿದಿದೆ. ಕಾವೇರಿ, ಕಬಿನಿ ಹಿತರಕ್ಷಣಾ ಸಮಿತಿಯಿಂದ ಇಂದು ಟಿ.ನರಸೀಪುರ ಬಂದ್​ ಕರೆ ಕೊಡಲಾಗಿದೆ. ಬಂದ್ ಹಿನ್ನೆಲೆ ಇಂದು ಸರ್ಕಾರಿ ಅನುದಾನ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಟಿ.ನರಸೀಪುರ ಬಿಇಒ ಶೋಭಾ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ಬಂದ್​ಗೆ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ರೈತ ಸಂಘಟನೆ, ದಲಿತ ಸಂಘರ್ಷ ಸಮಿತಿ, ಆಟೋ & ಕಾರು ಚಾಲಕರ ಸಂಘ, ಕರ್ನಾಟಕ ಪ್ರತಿಧ್ವನಿ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಟಿ.ನರಸೀಪುರ ಬಂದ್​ಗೆ ಎಲ್ಲರೂ ಸಹಕಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!