AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರಿನ ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 26, 2023 | 6:46 AM

Share

ಬೆಂಗಳೂರು, ಸೆ.26: ಪಕ್ಕದ ರಾಜ್ಯ ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಇಂದು ಬೀದಿಗಿಳಿಯಲಿದ್ದಾರೆ (Cauvery Water Dispute). ನಾಡಿನಾದ್ಯಂತ ಕಾವೇರಿಗಾಗಿ ಹೋರಾಟ ತೀವ್ರಗೊಂಡಿದ್ದು, ಇವತ್ತು ಇಡೀ ಬೆಂಗಳೂರು ಸ್ತಬ್ಧವಾಗಲಿದೆ (Bengaluru Bandh). ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು ಬಂದ್ ಆಗಲಿದೆ. 97ಕ್ಕೂ ಹೆಚ್ಚು ಸಂಘಟನೆಗಳು ಬೆಳಗ್ಗೆ ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ. ಹೀಗಾಗಿ ಇಂದು ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಇಂದಿನ ಬಂದ್‌ಗೆ ಖಾಸಗಿ ಶಿಕ್ಷಣ ಒಕ್ಕೂಟ ರೂಪ್ಸಾ ಬೆಂಬಲ ನೀಡಿದೆ. ರೂಪ್ಸಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಪೋಷಕರ ಸಂಘಟನೆಗಳು, ಖಾಸಗಿ ಶಾಲಾ ವಾಹನಗಳ ಮಾಲೀಕರು ಕೂಡಾ ಬಂದ್​ಗೆ ಬೆಂಬಲ ಘೋಷಿಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟದ 37 ಸಂಘಟನೆಗಳು ಬಂದ್‌ಗೆ ಸಾಥ್‌ ಕೊಟ್ಟಿವೆ. ಪ್ರವಾಸೋದ್ಯಮ ವಾಹನಗಳ ಮಾಲೀಕರು, ಸಣ್ಣ ಕೈಗಾರಿಕೆಗಳ ಒಕ್ಕೂಟ, ಬೆಂಗಳೂರು ವಕೀಲರ ಸಂಘ, ಬಿಡಿಎ ನೌಕರರ ಸಂಘ & BWSSB ನೌಕರರ ಸಂಘ , ಬೆಂಗಳೂರು ಬೀದಿ ಬದಿ ಸಂಘ, ಬಿಬಿಎಂಪಿ ನೌಕರರ ಸಂಘ, ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಸೇರಿದಂತೆ 95 ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ.

ಇದನ್ನೂ ಓದಿ: Bengaluru Bandh News Live Updates: ಕಾವೇರಿ ವಿವಾದ: ಇಂದು ಬೆಂಗಳೂರು ಬಂದ್‌

ಇಂದು ಟಿ.ನರಸೀಪುರ ಬಂದ್​

ಇನ್ನು ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಇಂದು ಟಿ.ನರಸೀಪುರ ಕೂಡ ಬಂದ್ ಮಾಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ರೈತರು, ಹೋರಾಟಗಾರರ ಆಕ್ರೋಶ ಮುಂದುವರಿದಿದೆ. ಕಾವೇರಿ, ಕಬಿನಿ ಹಿತರಕ್ಷಣಾ ಸಮಿತಿಯಿಂದ ಇಂದು ಟಿ.ನರಸೀಪುರ ಬಂದ್​ ಕರೆ ಕೊಡಲಾಗಿದೆ. ಬಂದ್ ಹಿನ್ನೆಲೆ ಇಂದು ಸರ್ಕಾರಿ ಅನುದಾನ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಟಿ.ನರಸೀಪುರ ಬಿಇಒ ಶೋಭಾ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ಬಂದ್​ಗೆ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ರೈತ ಸಂಘಟನೆ, ದಲಿತ ಸಂಘರ್ಷ ಸಮಿತಿ, ಆಟೋ & ಕಾರು ಚಾಲಕರ ಸಂಘ, ಕರ್ನಾಟಕ ಪ್ರತಿಧ್ವನಿ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಟಿ.ನರಸೀಪುರ ಬಂದ್​ಗೆ ಎಲ್ಲರೂ ಸಹಕಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ