AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರಿನ ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Sep 26, 2023 | 6:46 AM

Share

ಬೆಂಗಳೂರು, ಸೆ.26: ಪಕ್ಕದ ರಾಜ್ಯ ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಇಂದು ಬೀದಿಗಿಳಿಯಲಿದ್ದಾರೆ (Cauvery Water Dispute). ನಾಡಿನಾದ್ಯಂತ ಕಾವೇರಿಗಾಗಿ ಹೋರಾಟ ತೀವ್ರಗೊಂಡಿದ್ದು, ಇವತ್ತು ಇಡೀ ಬೆಂಗಳೂರು ಸ್ತಬ್ಧವಾಗಲಿದೆ (Bengaluru Bandh). ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು ಬಂದ್ ಆಗಲಿದೆ. 97ಕ್ಕೂ ಹೆಚ್ಚು ಸಂಘಟನೆಗಳು ಬೆಳಗ್ಗೆ ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ. ಹೀಗಾಗಿ ಇಂದು ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಇಂದಿನ ಬಂದ್‌ಗೆ ಖಾಸಗಿ ಶಿಕ್ಷಣ ಒಕ್ಕೂಟ ರೂಪ್ಸಾ ಬೆಂಬಲ ನೀಡಿದೆ. ರೂಪ್ಸಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಪೋಷಕರ ಸಂಘಟನೆಗಳು, ಖಾಸಗಿ ಶಾಲಾ ವಾಹನಗಳ ಮಾಲೀಕರು ಕೂಡಾ ಬಂದ್​ಗೆ ಬೆಂಬಲ ಘೋಷಿಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟದ 37 ಸಂಘಟನೆಗಳು ಬಂದ್‌ಗೆ ಸಾಥ್‌ ಕೊಟ್ಟಿವೆ. ಪ್ರವಾಸೋದ್ಯಮ ವಾಹನಗಳ ಮಾಲೀಕರು, ಸಣ್ಣ ಕೈಗಾರಿಕೆಗಳ ಒಕ್ಕೂಟ, ಬೆಂಗಳೂರು ವಕೀಲರ ಸಂಘ, ಬಿಡಿಎ ನೌಕರರ ಸಂಘ & BWSSB ನೌಕರರ ಸಂಘ , ಬೆಂಗಳೂರು ಬೀದಿ ಬದಿ ಸಂಘ, ಬಿಬಿಎಂಪಿ ನೌಕರರ ಸಂಘ, ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಸೇರಿದಂತೆ 95 ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ.

ಇದನ್ನೂ ಓದಿ: Bengaluru Bandh News Live Updates: ಕಾವೇರಿ ವಿವಾದ: ಇಂದು ಬೆಂಗಳೂರು ಬಂದ್‌

ಇಂದು ಟಿ.ನರಸೀಪುರ ಬಂದ್​

ಇನ್ನು ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಇಂದು ಟಿ.ನರಸೀಪುರ ಕೂಡ ಬಂದ್ ಮಾಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ರೈತರು, ಹೋರಾಟಗಾರರ ಆಕ್ರೋಶ ಮುಂದುವರಿದಿದೆ. ಕಾವೇರಿ, ಕಬಿನಿ ಹಿತರಕ್ಷಣಾ ಸಮಿತಿಯಿಂದ ಇಂದು ಟಿ.ನರಸೀಪುರ ಬಂದ್​ ಕರೆ ಕೊಡಲಾಗಿದೆ. ಬಂದ್ ಹಿನ್ನೆಲೆ ಇಂದು ಸರ್ಕಾರಿ ಅನುದಾನ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಟಿ.ನರಸೀಪುರ ಬಿಇಒ ಶೋಭಾ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ಬಂದ್​ಗೆ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ರೈತ ಸಂಘಟನೆ, ದಲಿತ ಸಂಘರ್ಷ ಸಮಿತಿ, ಆಟೋ & ಕಾರು ಚಾಲಕರ ಸಂಘ, ಕರ್ನಾಟಕ ಪ್ರತಿಧ್ವನಿ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಟಿ.ನರಸೀಪುರ ಬಂದ್​ಗೆ ಎಲ್ಲರೂ ಸಹಕಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್