AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ

ಮೂರ್ತದಿಂದ ಏಡ್ಸ್ ಗುಣ ಎಂಬುದು ಪ್ರಾಚೀನ ಗ್ರಂಥಗಳಲ್ಲಿ ದಾಖಲಾಗಿರುವ ಸಾಧ್ಯತೆ ಇಲ್ಲವೇ ಇಲ್ಲ ಎಂದು ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಹೇಳಿದ್ದಾರೆ.

ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ
ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ
Follow us
TV9 Web
| Updated By: Rakesh Nayak Manchi

Updated on:Nov 19, 2022 | 7:43 AM

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ (Mysore University)ದ ಪಠ್ಯಕ್ರಮದಲ್ಲಿ, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಹಾಗೂ ಕ್ಯಾನ್ಸರ್ (AIDS and Cancer)​ಗೆ ಸ್ವಮೂತ್ರ (Urine) ಪಾನವೇ ಮದ್ದು ಎಂಬುದನ್ನು ಉಲ್ಲೇಖಿಸಲಾಗಿತ್ತು. ಈ ವಿಚಾರವಾಗಿ ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ (Dr Giridhara Kaje) ಅವರು ಕೂಡ ಸ್ವಮೂತ್ರದಿಂದ ಕ್ಯಾನ್ಸರ್ ಚಿಕಿತ್ಸೆಗೆ ಮದ್ದು ಎಂಬುದನ್ನು ಅಲ್ಲಗೆಳೆದಿದ್ದಾರೆ. ಸ್ವಮೂತ್ರದಿಂದ ಕ್ಯಾನ್ಸರ್ ಚಿಕಿತ್ಸೆ ಎಂಬ ಮಾಹಿತಿಯನ್ನು ಉಲ್ಲೇಖಿಸಿದಿ ಕೆ.ಭೈರಪ್ಪನವರ ಪಠ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಅವರು, ಮನುಷ್ಯ ಮೂತ್ರದಿಂದ ಕ್ಯಾನ್ಸರ್ ಗುಣಪಡಿಸುವ ಬಗ್ಗೆ ವೈಜ್ಞಾನಿಕ ದಾಖಲೆಗಳಿಲ್ಲ. ಮೂರ್ತದಿಂದ ಏಡ್ಸ್ ಗುಣ ಎಂಬುದು ಪ್ರಾಚೀನ ಗ್ರಂಥಗಳಲ್ಲಿ ದಾಖಲಾಗಿರುವ ಸಾಧ್ಯತೆ ಇಲ್ಲವೇ ಇಲ್ಲ. ಹಾಗಿದ್ದರೆ ಲೇಖಕರು ಯಾವ ನೆಲಯ ಮೇಲೆ ಈ ವಿಚಾರವನ್ನು ಬರೆದಿದ್ದಾರೆ? ಸ್ವಂತ ಅನುಭವದ ಮೇಲೆ ಈ ಅಂಶ ಉಲ್ಲೇಖಿಸಿದ್ದಾರಾ ಎಂದು ಪ್ರಶ್ನಿಸಿದರು.

ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಹಾಗೂ ಕ್ಯಾನ್ಸರ್​​​ಗೆ ಸ್ವಮೂತ್ರ ಪಾನವೇ ಮದ್ದು ಎಂಬುದನ್ನು ಉಲ್ಲೇಖಿಸಲಾಗಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ವಿದ್ಯಾರ್ಥಿ ಸಂಘಟನೆಗಳು ಕೂಡಲೇ ಪಠ್ಯ ಹಿಂಪಡೆಯಲು ಹಾಗೂ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದವು.

ಇದನ್ನೂ ಓದಿ: ಶಾಲೆಗಳಲ್ಲಿ Meditation ಕಲಿಕೆ: ಟೀಕೆಗಳ ನಡುವೆ ಮಕ್ಕಳಿಗೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ

ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು ಎಂದು ಹೇಳಿರುವುದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಟೀಕಿಸಲಾಗಿದೆ. ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ, ಮೂತ್ರ ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದರು.

ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೆ ಹೊರತು ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಬಾರದು. ಈ ಕೂಡಲೇ ಪಠ್ಯವನ್ನು ಹಿಂಪಡೆಯಬೇಕು ಎಂದು AIDSO ವಿದ್ಯಾರ್ಥಿ ಸಂಘಟನೆ ಆಗ್ರಹಿಸಿತ್ತು. ಅಲ್ಲದೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ಪ್ರಜಾತಂತ್ರ, ಧರ್ಮ ನಿರಪೇಕ್ಷತ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 am, Sat, 19 November 22

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ