AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ

2004ರಿಂದ 2027-18 ಸಾಲಿನ ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ ಅವಕಾಶ ಕಲ್ಪಿಸಿಕೊಟ್ಟಿದೆ.

ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ
Bangalore university
TV9 Web
| Edited By: |

Updated on:Nov 17, 2022 | 11:10 PM

Share

ಬೆಂಗಳೂರು: ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಫೇಲ್​ ಆಗಿರುವ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಅವಕಾಶ ನೀಡಿದೆ. ಈ ಮೂಲಕ ಅನುತ್ತೀರ್ಣಗೊಂಡು ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ (Students) ಬೆಂಗಳೂರು ವಿವಿ  ಸುವರ್ಣವಕಾಶ ಕಲ್ಪಿಸಿಕೊಟ್ಟಿದೆ.

2004ರಿಂದ 2027-18 ಸಾಲಿನ ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯ ಎಲ್ಲಾ ಸೆಮಿಸ್ಟರ್ ಪರೀಕ್ಷೆ ಹಾಗೂ ದೂರ ಶಿಕ್ಷಣ ಮೂಲಕ ಪದವಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ. ಇದರೊಂದಿಗೆ ಅನುತ್ತೀರ್ಣಗೊಂಡಿದ್ದ ಹಲವು ವಿದ್ಯಾರ್ಥಿಗಳಿಗೆ ಬಯಸದೇ ಬಂದ ಭಾಗ್ಯವಾಗಿದೆ.

ಹಲವು ವಿದ್ಯಾರ್ಥಿಗಳು ಫೇಲಾಗಿ ಉನ್ನತ ಶಿಕ್ಷಣದಿಂದ ವಂಚಿತರಾಗಿ ಉನ್ನತ ಮಟ್ಟದ ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇದನ್ನು ತಪ್ಪಿಸಿಸುವ ದೃಷ್ಟಿಯಿಂದ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಗೋಲ್ಡನ್ ಚಾನ್ಸ್ ಕೊಟ್ಟಿದೆ.

ಬೆಂಗಳೂರು ವಿವಿಯ 2004ರಿಂದ 2027-18 ಸಾಲಿನ ಅವಧಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಪರೀಕ್ಷೆ ಶುಲ್ಕ ಕಟ್ಟಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, 2023ರ ಫೆಬ್ರವರಿಯಲ್ಲಿ ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಪರೀಕ್ಷೆ ಶುಲ್ಕ, ಕೊನೆ ದಿನಾಂಕ ಸೇರಿದಂತೆ ಇತರೆ ಮಾಹಿತಿಯೊಂದಿಗೆ ಶೀಘ್ರದಲ್ಲೇ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:05 pm, Thu, 17 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ