AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ

2004ರಿಂದ 2027-18 ಸಾಲಿನ ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ ಅವಕಾಶ ಕಲ್ಪಿಸಿಕೊಟ್ಟಿದೆ.

ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ
Bangalore university
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 17, 2022 | 11:10 PM

Share

ಬೆಂಗಳೂರು: ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಫೇಲ್​ ಆಗಿರುವ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಅವಕಾಶ ನೀಡಿದೆ. ಈ ಮೂಲಕ ಅನುತ್ತೀರ್ಣಗೊಂಡು ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ (Students) ಬೆಂಗಳೂರು ವಿವಿ  ಸುವರ್ಣವಕಾಶ ಕಲ್ಪಿಸಿಕೊಟ್ಟಿದೆ.

2004ರಿಂದ 2027-18 ಸಾಲಿನ ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯ ಎಲ್ಲಾ ಸೆಮಿಸ್ಟರ್ ಪರೀಕ್ಷೆ ಹಾಗೂ ದೂರ ಶಿಕ್ಷಣ ಮೂಲಕ ಪದವಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ. ಇದರೊಂದಿಗೆ ಅನುತ್ತೀರ್ಣಗೊಂಡಿದ್ದ ಹಲವು ವಿದ್ಯಾರ್ಥಿಗಳಿಗೆ ಬಯಸದೇ ಬಂದ ಭಾಗ್ಯವಾಗಿದೆ.

ಹಲವು ವಿದ್ಯಾರ್ಥಿಗಳು ಫೇಲಾಗಿ ಉನ್ನತ ಶಿಕ್ಷಣದಿಂದ ವಂಚಿತರಾಗಿ ಉನ್ನತ ಮಟ್ಟದ ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇದನ್ನು ತಪ್ಪಿಸಿಸುವ ದೃಷ್ಟಿಯಿಂದ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಗೋಲ್ಡನ್ ಚಾನ್ಸ್ ಕೊಟ್ಟಿದೆ.

ಬೆಂಗಳೂರು ವಿವಿಯ 2004ರಿಂದ 2027-18 ಸಾಲಿನ ಅವಧಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಪರೀಕ್ಷೆ ಶುಲ್ಕ ಕಟ್ಟಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, 2023ರ ಫೆಬ್ರವರಿಯಲ್ಲಿ ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಪರೀಕ್ಷೆ ಶುಲ್ಕ, ಕೊನೆ ದಿನಾಂಕ ಸೇರಿದಂತೆ ಇತರೆ ಮಾಹಿತಿಯೊಂದಿಗೆ ಶೀಘ್ರದಲ್ಲೇ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:05 pm, Thu, 17 November 22

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ