AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿಗೂ ಬಂತು AI ಕೋರ್ಸ್; ಮೂರು ವರ್ಷದ ಎಐ ಪದವಿ ಶುರು ಮಾಡಿದ ಜ್ಞಾನಭಾರತಿ ವಿವಿ

AI degree courses; ಜಗತ್ತಿನಾದ್ಯಂತ ಸದ್ಯ ಎಐ ಅಥವಾ ಕೃತಕ ಬುದ್ಧಿಮತ್ತೆ ಹವಾ ಹೆಚ್ಚಾಗಿದೆ. ಒಂದೆಡೆ ಹಲವು ಉದ್ದಯೋಗಾವಕಾಶಗಳನ್ನು ಕಸಿದುಕೊಳ್ಳುವ ಆತಂಕ ಸೃಷ್ಟಿಸಿರುವ ಈ ತಂತ್ರಜ್ಞಾನ ಮತ್ತೊಂದೆಡೆ, ಹೊಸ ಉದ್ಯೋಗಾವಕಾಶಗಳನ್ನೂ ಸೃಷ್ಟಿಸುತ್ತಿದೆ. ಹೀಗಾಗಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಹೊಸ ಎಐ ಪದವಿ ಕೋರ್ಸ್​ ಆರಂಭಿಸಿದೆ. ನೂತನ ಕೋರ್ಸ್​ ಬಗ್ಗೆ ವಿವರ ಇಲ್ಲಿದೆ.

ಬೆಂಗಳೂರು ವಿವಿಗೂ ಬಂತು AI ಕೋರ್ಸ್; ಮೂರು ವರ್ಷದ ಎಐ ಪದವಿ ಶುರು ಮಾಡಿದ ಜ್ಞಾನಭಾರತಿ ವಿವಿ
ಬೆಂಗಳೂರು ವಿವಿಗೂ ಬಂತು AI ಕೋರ್ಸ್ (ಸಾಂದರ್ಭಿಕ ಚಿತ್ರ)
Follow us
Vinay Kashappanavar
| Updated By: Ganapathi Sharma

Updated on: Jun 24, 2024 | 7:56 AM

ಬೆಂಗಳೂರು, ಜೂನ್ 24: ಇತ್ತೀಚಿನ ದಿನಗಳಲ್ಲಿ ಎಲ್ಲ ಕಾರ್ಯ ಕ್ಷೇತ್ರಗಳಿಗೂ ಕೃತಕ ಬುದ್ಧಿಮತ್ತೆ ಅಥವಾ ಎಐ (Artificial intelligence) ಕಾಲಿಟ್ಟಿದೆ. ಜಾಗತಿಕ ಮಟ್ಟದಲ್ಲಿ ಸಖತ್ ಬೇಡಿಕೆಯನ್ನೂ ಈ ತಂತ್ರಜ್ಞಾನ ಸೃಷ್ಟಿ ಮಾಡಿದೆ. ಇದರಿಂದಾಗಿ ಉದ್ಯೋಗಾವಕಾಶಗಳು ಕಡಿಮೆಯಾಗುವುದು ಒಂದೆಡೆಯಾದರೆ ಹೊಸ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಲೂ ಇವೆ. ಹೀಗಾಗಿ ಈಗ ಎಲ್ಲಡೆ ಎಐ ಕೋರ್ಸ್​​​ಗೆ ಬೇಡಿಕೆ ಆರಂಭವಾಗಿದೆ. ಹೀಗಾಗಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ (Bangalore University) 2024-25 ನೇ ಶೈಕ್ಷಣಿಕ ಸಾಲಿಗೆ ಎಐ ಪದವಿ ಕೋರ್ಸ್​​ಗಳನ್ನು ಪರಿಚಯಿಸಿದೆ. ಮೂರು ವಿಷಯಗಳಲ್ಲಿ ಪದವಿ ದೊರೆಯಲಿದ್ದು, ಅವುಗಳೆಂದರೆ ಎಐ ಡಾಟಾ ಅನಾಲಿಸಿಸ್, ಎಐ ಮಿಷನ್ ಲರ್ನಿಂಗ್, ಹಾಗೂ ಪುಲ್ ಸ್ಟಾಕ್ ಡೆವಲೆಪಮೆಂಟ್ ಮೂರು ಆಗಿವೆ.

ಪರೀಕ್ಷೆಯಲ್ಲಿ ನಕಲು ಪತ್ತೆಹಚ್ಚಲು, ಟ್ರಾಫಿಕ್ ನಿಯಂತ್ರಣಕ್ಕೆ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಸದ್ಯ AI ತಂತ್ರಜ್ಞಾನಗಳ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಬೆಂಗಳೂರು ಜ್ಞಾನ ಭಾರತಿ ವಿಶ್ವವಿದ್ಯಾಲಯ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆಯ ಕೋರ್ಸ್ ಆರಂಭಕ್ಕೆ ಮುಂದಾಗಿದೆ.

ಎಐ ಕೋರ್ಸ್​​ಗೆ ಯಾರು ಅರ್ಹರು?

ಪಿಯುಸಿ ಬಳಿಕ ವೃತ್ತಿಪರ ಕೋರ್ಸ್​​ಗಳ ಹುಡಕಾಟದಲ್ಲಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕೋರ್ಸ್ ಆರಂಭಿಸಲಾಗುತ್ತಿದೆ. ಇಂಥ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡೇ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿಮಾಡಿರುವ ಈ ಕೋರ್ಸ್ ಶುರು ಮಾಡಲು ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಮುಂದಾಗಿದೆ ಎಂದು ಕುಲಪತಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ

ಸದ್ಯ ಮೂರು ವರ್ಷದ ಮೂರು ಬೇರೆ ಬೇರೆಯಾದ ಎಐ ಕೋರ್ಸ್​​ಗಳನ್ನ ಶುರು ಮಾಡಲಾಗುತ್ತಿದ್ದು, ಇದರ ಬೇಡಿಕೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಸ್ನಾತ್ತೋಕತ್ತರ ಪದವಿಯಲ್ಲಿಯೂ ಈ ತಂತ್ರಜ್ಞಾನ ಕೋರ್ಸ್ ಆರಂಭಿಸುವ ಬಗ್ಗೆ ವಿಶ್ವವಿದ್ಯಾಲಯ ಚಿಂತನೆ ಮಾಡಿದೆ. ಹೀಗಾಗಿ ಪಿಯುಸಿ ಬಳಿಕ ಟೆಕ್ನಿಕಲ್ ಕೋರ್ಸ್ ಮೊರೆ ಹೋಗಬೇಕು ಎಂಬವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ