AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿಗೂ ಬಂತು AI ಕೋರ್ಸ್; ಮೂರು ವರ್ಷದ ಎಐ ಪದವಿ ಶುರು ಮಾಡಿದ ಜ್ಞಾನಭಾರತಿ ವಿವಿ

AI degree courses; ಜಗತ್ತಿನಾದ್ಯಂತ ಸದ್ಯ ಎಐ ಅಥವಾ ಕೃತಕ ಬುದ್ಧಿಮತ್ತೆ ಹವಾ ಹೆಚ್ಚಾಗಿದೆ. ಒಂದೆಡೆ ಹಲವು ಉದ್ದಯೋಗಾವಕಾಶಗಳನ್ನು ಕಸಿದುಕೊಳ್ಳುವ ಆತಂಕ ಸೃಷ್ಟಿಸಿರುವ ಈ ತಂತ್ರಜ್ಞಾನ ಮತ್ತೊಂದೆಡೆ, ಹೊಸ ಉದ್ಯೋಗಾವಕಾಶಗಳನ್ನೂ ಸೃಷ್ಟಿಸುತ್ತಿದೆ. ಹೀಗಾಗಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಹೊಸ ಎಐ ಪದವಿ ಕೋರ್ಸ್​ ಆರಂಭಿಸಿದೆ. ನೂತನ ಕೋರ್ಸ್​ ಬಗ್ಗೆ ವಿವರ ಇಲ್ಲಿದೆ.

ಬೆಂಗಳೂರು ವಿವಿಗೂ ಬಂತು AI ಕೋರ್ಸ್; ಮೂರು ವರ್ಷದ ಎಐ ಪದವಿ ಶುರು ಮಾಡಿದ ಜ್ಞಾನಭಾರತಿ ವಿವಿ
ಬೆಂಗಳೂರು ವಿವಿಗೂ ಬಂತು AI ಕೋರ್ಸ್ (ಸಾಂದರ್ಭಿಕ ಚಿತ್ರ)
ವಿನಯ್​ ಕಾಶಪ್ಪನವರ್​
| Edited By: |

Updated on: Jun 24, 2024 | 7:56 AM

Share

ಬೆಂಗಳೂರು, ಜೂನ್ 24: ಇತ್ತೀಚಿನ ದಿನಗಳಲ್ಲಿ ಎಲ್ಲ ಕಾರ್ಯ ಕ್ಷೇತ್ರಗಳಿಗೂ ಕೃತಕ ಬುದ್ಧಿಮತ್ತೆ ಅಥವಾ ಎಐ (Artificial intelligence) ಕಾಲಿಟ್ಟಿದೆ. ಜಾಗತಿಕ ಮಟ್ಟದಲ್ಲಿ ಸಖತ್ ಬೇಡಿಕೆಯನ್ನೂ ಈ ತಂತ್ರಜ್ಞಾನ ಸೃಷ್ಟಿ ಮಾಡಿದೆ. ಇದರಿಂದಾಗಿ ಉದ್ಯೋಗಾವಕಾಶಗಳು ಕಡಿಮೆಯಾಗುವುದು ಒಂದೆಡೆಯಾದರೆ ಹೊಸ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಲೂ ಇವೆ. ಹೀಗಾಗಿ ಈಗ ಎಲ್ಲಡೆ ಎಐ ಕೋರ್ಸ್​​​ಗೆ ಬೇಡಿಕೆ ಆರಂಭವಾಗಿದೆ. ಹೀಗಾಗಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ (Bangalore University) 2024-25 ನೇ ಶೈಕ್ಷಣಿಕ ಸಾಲಿಗೆ ಎಐ ಪದವಿ ಕೋರ್ಸ್​​ಗಳನ್ನು ಪರಿಚಯಿಸಿದೆ. ಮೂರು ವಿಷಯಗಳಲ್ಲಿ ಪದವಿ ದೊರೆಯಲಿದ್ದು, ಅವುಗಳೆಂದರೆ ಎಐ ಡಾಟಾ ಅನಾಲಿಸಿಸ್, ಎಐ ಮಿಷನ್ ಲರ್ನಿಂಗ್, ಹಾಗೂ ಪುಲ್ ಸ್ಟಾಕ್ ಡೆವಲೆಪಮೆಂಟ್ ಮೂರು ಆಗಿವೆ.

ಪರೀಕ್ಷೆಯಲ್ಲಿ ನಕಲು ಪತ್ತೆಹಚ್ಚಲು, ಟ್ರಾಫಿಕ್ ನಿಯಂತ್ರಣಕ್ಕೆ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಸದ್ಯ AI ತಂತ್ರಜ್ಞಾನಗಳ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಬೆಂಗಳೂರು ಜ್ಞಾನ ಭಾರತಿ ವಿಶ್ವವಿದ್ಯಾಲಯ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆಯ ಕೋರ್ಸ್ ಆರಂಭಕ್ಕೆ ಮುಂದಾಗಿದೆ.

ಎಐ ಕೋರ್ಸ್​​ಗೆ ಯಾರು ಅರ್ಹರು?

ಪಿಯುಸಿ ಬಳಿಕ ವೃತ್ತಿಪರ ಕೋರ್ಸ್​​ಗಳ ಹುಡಕಾಟದಲ್ಲಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕೋರ್ಸ್ ಆರಂಭಿಸಲಾಗುತ್ತಿದೆ. ಇಂಥ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡೇ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿಮಾಡಿರುವ ಈ ಕೋರ್ಸ್ ಶುರು ಮಾಡಲು ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಮುಂದಾಗಿದೆ ಎಂದು ಕುಲಪತಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ

ಸದ್ಯ ಮೂರು ವರ್ಷದ ಮೂರು ಬೇರೆ ಬೇರೆಯಾದ ಎಐ ಕೋರ್ಸ್​​ಗಳನ್ನ ಶುರು ಮಾಡಲಾಗುತ್ತಿದ್ದು, ಇದರ ಬೇಡಿಕೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಸ್ನಾತ್ತೋಕತ್ತರ ಪದವಿಯಲ್ಲಿಯೂ ಈ ತಂತ್ರಜ್ಞಾನ ಕೋರ್ಸ್ ಆರಂಭಿಸುವ ಬಗ್ಗೆ ವಿಶ್ವವಿದ್ಯಾಲಯ ಚಿಂತನೆ ಮಾಡಿದೆ. ಹೀಗಾಗಿ ಪಿಯುಸಿ ಬಳಿಕ ಟೆಕ್ನಿಕಲ್ ಕೋರ್ಸ್ ಮೊರೆ ಹೋಗಬೇಕು ಎಂಬವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ