AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

Basavaraj Bommai: ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು. ಶೇ.95 ರಷ್ಟು ಅಂಕ ಪಡೆದವರಿಗೂ ಸೀಟ್ ಸಿಗುತ್ತಿಲ್ಲ. ಈ ಬಗ್ಗೆ ಗಂಭೀರ ಚಿಂತನೆ ಆಗಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Mar 21, 2022 | 3:55 PM

Share

ದಾವಣಗೆರೆ: ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿನ ವೈದ್ಯಕೀಯ ಕೋರ್ಸ್​ಗೂ, ಇಲ್ಲಿಗೂ ಬದಲಾವಣೆ ಇದೆ‌. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ದಾವಣಗೆರೆಯಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಮ್ಮಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ‌ ಕಡಿಮೆ ಇದೆ. ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು. ಶೇ.95 ರಷ್ಟು ಅಂಕ ಪಡೆದವರಿಗೂ ಸೀಟ್ ಸಿಗುತ್ತಿಲ್ಲ. ಈ ಬಗ್ಗೆ ಗಂಭೀರ ಚಿಂತನೆ ಆಗಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ಇಂದು ಸಿಎಂ ಭೇಟಿ ಆಗಲಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ಜತೆ ಚರ್ಚೆ ನಡೆಸಲಿದ್ದಾರೆ.

ರಷ್ಯಾ, ಉಕ್ರೇನ್ ಯುದ್ಧ ಮುಂದುವರಿದಿರುವ ಹಿನ್ನೆಲೆ ಮೆಡಿಕಲ್ ವಿದ್ಯಾರ್ಥಿಗಳಿಂದ ತುಮಕೂರು ಡಿಸಿ ಭೇಟಿ ಮಾಡಲಾಗಿದೆ. ಉಕ್ರೇನ್​​ನಿಂದ ವಾಪಸಾದ ಮೆಡಿಕಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಭೇಟಿ ಆಗಿದ್ದಾರೆ. ಯುದ್ಧದಿಂದ ನಮ್ಮ ಶಿಕ್ಷಣದ ಭವಿಷ್ಯ ಅತಂತ್ರವಾಗಿದೆ. ಇಲ್ಲೇ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಕೊಡಲು ಡಿಸಿಗೆ ಮನವಿ ಮಾಡಲಾಗಿದೆ. ಡಿಸಿ ವೈ.ಎಸ್. ಪಾಟೀಲ್​ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ 26 ಮೆಡಿಕಲ್ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಮನವಿ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದ್ದಾರೆ.

ಉಕ್ರೇನ್ ನಿಂದ ವಾಪಸ್ ಆಗಿ ನಮ್ಮ ವಿದ್ಯಾಭ್ಯಾಸ ತೊಂದರೆಯಾಗಿದೆ. ಹೀಗಾಗಿ ನಮಗೆ ನಮ್ಮ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಕೊಡಿಸಬೇಕೆಂದು ಡಿಸಿಗೆ ಮನವಿ ಮಾಡಿದ್ದೇವೆ. ಆಯಾ ಸೆಮಿಸ್ಟರ್ ಪರೀಕ್ಷೆಗಳಿಗೆ ಅನುಗುಣವಾಗಿ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಸರ್ಕಾರ ನಮಗೆ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳಿಂದ ಮನವಿ ಮಾಡಲಾಗಿದೆ ಎಂದು ಉಕ್ರೇನ್​ನಿಂದ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿನಿ ರೂಪಶ್ರೀ ಹೇಳಿಕೆ ನೀಡಿದ್ದಾರೆ.

ಉಕ್ರೇನ್​ನಿಂದ ವಾಪಸ್ ಆದ ವಿದ್ಯಾರ್ಥಿಗಳು ನನ್ನ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಉಕ್ರೇನ್​ನಲ್ಲಿ ವಿದ್ಯಾಭ್ಯಾಸ ಸಂಪೂರ್ಣ ನಿಂತಿದ್ದು, ನಮ್ಮ ರಾಜ್ಯದಲ್ಲಿ ಹತ್ತಿರದ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ನಾನು ಈ ಬಗ್ಗೆ ಸರ್ಕಾರಕ್ಕೆ ತಿಳಿಸಿ, ಬಳಿಕ ಸರ್ಕಾರದ ನಿರ್ಧಾರವನ್ನು ತಿಳಿಸಲಾಗುತ್ತದೆ ಎಂದು ತುಮಕೂರು ಡಿಸಿ ವೈಎಸ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಿಂದ ತಾಯ್ನಾಡಿಗೆ ಬಂದ ನವೀನ್ ಮೃತದೇಹ: ವಿಮಾನ ನಿಲ್ದಾಣದಲ್ಲಿ ಗೌರವ ಸಲ್ಲಿಸಿದ ಸಿಎಂ

ಇದನ್ನೂ ಓದಿ: ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಕೊಡಿ: ಐಎಂಎ ಸಲಹೆ

Published On - 11:33 am, Mon, 21 March 22

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ