AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಸಾಗಳಲ್ಲಿ ಇವತ್ತಿನ ಕಾಲದ ಶಿಕ್ಷಣ ಕೊಡುತ್ತಿಲ್ಲ, ಏಕರೂಪದ ಶಿಕ್ಷಣ ನೀಡುವ ಆಸೆ ನಮಗಿದೆ: ಬಿ.ಸಿ ನಾಗೇಶ್

ಅನುದಾನ ಪಡೆಯುತ್ತಿರುವ ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ನೀಡಲಾಗುತ್ತಿದೆ. ವೃತ್ತಿಪರ ಶಿಕ್ಷಣ ನೀಡುವುದಕ್ಕೆ ನಾವು ಪ್ರಯತ್ನ ಮಾಡುತ್ತೇವೆ. ಮದರಸಾಗಳಲ್ಲಿ ಶಿಕ್ಷಣ ಪದ್ಧತಿ ಜಾರಿಗೆ ಪ್ರಯತ್ನಿಸುತ್ತೇವೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಮದರಸಾಗಳಲ್ಲಿ ಇವತ್ತಿನ ಕಾಲದ ಶಿಕ್ಷಣ ಕೊಡುತ್ತಿಲ್ಲ, ಏಕರೂಪದ ಶಿಕ್ಷಣ ನೀಡುವ ಆಸೆ ನಮಗಿದೆ: ಬಿ.ಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
TV9 Web
| Edited By: |

Updated on: Mar 21, 2022 | 11:53 AM

Share

ಬೆಂಗಳೂರು: ಮದರಸಾಗಳಲ್ಲಿ ಇವತ್ತಿನ ಕಾಲದ ಶಿಕ್ಷಣವನ್ನು ಕೊಡುತ್ತಿಲ್ಲ. ಮದರಸಾಗಳು ಕೇಳಿದರೆ ಔಪಚಾರಿಕ ಶಿಕ್ಷಣ ಕೊಡಲು ಸಿದ್ಧ. ಏಕರೂಪದ ಶಿಕ್ಷಣ ನೀಡುವ ಆಸೆ ನಮಗಿದೆ. ಆದರೆ ಸದ್ಯಕ್ಕೆ ಈ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಚರ್ಚೆ ಬಳಿಕ ಅಂತಿಮವಾಗಿ ನಿರ್ಧಾರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಸೋಮವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.

ಮದರಸಾಗಳಲ್ಲಿ ವೃತ್ತಿಪರ ಶಿಕ್ಷಣ ಸಿಗುತ್ತಿಲ್ಲ. ಮದರಸಾಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅನುದಾನ ನೀಡಲಾಗುತ್ತಿದೆ. ಅನುದಾನ ಪಡೆಯುತ್ತಿರುವ ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ನೀಡಲಾಗುತ್ತಿದೆ. ವೃತ್ತಿಪರ ಶಿಕ್ಷಣ ನೀಡುವುದಕ್ಕೆ ನಾವು ಪ್ರಯತ್ನ ಮಾಡುತ್ತೇವೆ. ಮದರಸಾಗಳಲ್ಲಿ ಶಿಕ್ಷಣ ಪದ್ಧತಿ ಜಾರಿಗೆ ಪ್ರಯತ್ನಿಸುತ್ತೇವೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಹೀಗಾಗಿ ಕೆಲ ಮದರಸಾಗಳನ್ನು ಶಿಕ್ಷಣ ಪದ್ಧತಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಇದಕ್ಕೂ ಮೊದಲು ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದರು. ಅಲ್ಪಸಂಖ್ಯಾತ ಮಕ್ಕಳು ಇವತ್ತಿನ ಶಿಕ್ಷಣ ಪದ್ದತಿ (Education System) ಯಿಂದ ದೂರ ಉಳಿಯಬಾರದು. ಒಂದಷ್ಟುಕಡೆ ಮದರಸಾಗಳನ್ನು ಶಿಕ್ಷಣ ಪದ್ದತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಗೋಕರ್ಣದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು.

ಅವರು ಸಹ ನಮ್ಮ ಎಲ್ಲಾ ಮಕ್ಕಳಂತೆ ಈ ಶಿಕ್ಷಣ ಪದ್ದತಿಗೆ ಬರಬೇಕು. ಅವರು ಸಹಿತ ಮುಂದುವರಿಯಬೇಕು ಎನ್ನುವಂತ ಕಾರಣದಿಂದ ಮುಂದಿನ ದಿನದಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ. ಅಲ್ಪಸಂಖ್ಯಾತ ನಾಯಕರ ಗಮನಕ್ಕೂ ಬಂದಿದೆ. ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟು ಅವಕಾಶ ಮಾಡಿಕೊಟ್ಟಿದ್ದೀವಿ ಆ ಪ್ರಕಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಶಾಲೆಗೆ ಬರಲೇಬೇಕು ಎಂದು ಅವರ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಶೇಕಡಾ 99.9 ಆ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಶೇಕಡಾ 1 ಮಾತ್ರ ಬರುತ್ತಿಲ್ಲ. ಅವರನ್ನು ತರುವಂತ ಪ್ರಯತ್ನ ಮಾಡುತ್ತೇವೆ. ಆದರೆ ಎಳೆದುಕೊಂಡು ಬರುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದರು

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು; ಕೆಲ ಮದರಸಾಗಳನ್ನು ಶಿಕ್ಷಣ ಪದ್ಧತಿಗೆ ತರಲು ಪ್ರಯತ್ನ: ಬಿಸಿ ನಾಗೇಶ್

ಇದನ್ನೂ ಓದಿ: ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು; ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು