AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆರಿಟ್ ಲಿಸ್ಟ್ ಪ್ರಕಾರ ಕೌನ್ಸೆಲಿಂಗ್ ನಡೆಯದ ಆರೋಪ; ಬೆಂಗಳೂರು ಉತ್ತರ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಸುಮಾರು 400 ರಾಂಕ್ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. ಬಿಸಿಯು ಯನಿವರ್ಸಿಟಿ ವಿದ್ಯಾರ್ಥಿಗಳಿಗೆ ಮಾತ್ರ ಆಧ್ಯತೆ ನೀಡಲಾಗಿದೆ ಎಂದು ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ, ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ವಾಗ್ವಾದ ಏರ್ಪಟ್ಟಿದೆ.

ಮೆರಿಟ್ ಲಿಸ್ಟ್ ಪ್ರಕಾರ ಕೌನ್ಸೆಲಿಂಗ್ ನಡೆಯದ ಆರೋಪ; ಬೆಂಗಳೂರು ಉತ್ತರ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 01, 2021 | 3:18 PM

Share

ಬೆಂಗಳೂರು: ಮೆರಿಟ್ ಲಿಸ್ಟ್ ಪ್ರಕಾರ ಕೌನ್ಸೆಲಿಂಗ್ ನಡೆಯದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸೆಂಟ್ರಲ್ ಕಾಲೇಜು ಮುಂದೆ ವಿದ್ಯಾರ್ಥಿಗಳಿಂದ ಧರಣಿ ನಡೆಸಲಾಗಿದೆ. ಸುಮಾರು 400 ರಾಂಕ್ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. ಬಿಸಿಯು ಯನಿವರ್ಸಿಟಿ ವಿದ್ಯಾರ್ಥಿಗಳಿಗೆ ಮಾತ್ರ ಆಧ್ಯತೆ ನೀಡಲಾಗಿದೆ ಎಂದು ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ, ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ವಾಗ್ವಾದ ಏರ್ಪಟ್ಟಿದೆ.

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. 400 ರಾಂಕ್ ವಿದ್ಯಾರ್ಥಿಗಳಲ್ಲಿ ಮೊದಲ ಆದ್ಯತೆ ಬಿಸಿಯು ಯನಿವರ್ಸಿಟಿಯ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ. ಎಂಎಸ್​ಸಿ, ಕೆಮೆಸ್ರ್ಟಿ, ಅಪ್ಲೀಕೇಷನ್​ಗಾಗಿ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿ ವಾಗ್ವಾದ ಉಂಟಾಗಿದೆ. ರಾಂಕ್ ಲಿಸ್ಟ್ ಪ್ರಕಾರ ಸೀಟ್ ಅಲಾಟ್ ಆಗಲಿ ಎಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ ವ್ಯಕ್ತವಾಗಿದೆ.

ಬೆಂಗಳೂರು ವಿವಿ ತ್ರಿಭಜನೆ ಆಪತ್ತು ತಂದಿದೆ ಎಂದು ಹೇಳಲಾಗುತ್ತಿದೆ. ಬಿಎಸ್​ಸಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಬಿಎಸ್​ಸಿ ಬಳಿಕ ಎಮ್​ಎಸ್​ಸಿ ವ್ಯಾಸಾಂಗ ಮಾಡಲು ಕಾಲೇಜುಗಳೇ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೆ, ಬೆಂಗಳೂರು ಉತ್ತರ ವಿವಿಯಲ್ಲಿ ಎಮ್​ಎಸ್​ಸಿ ರಸಾಯನಶಾಸ್ತ್ರದಲ್ಲಿ ಯಾವುದೇ ಕಾಲೇಜುಗಳು ಇಲ್ಲ. ಹೀಗಾಗಿ ಬೆಂಗಳೂರು ಕೇಂದ್ರ ವಿವಿಗೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಮೊದಲು ಎಲ್ಲಾ ವಿದ್ಯಾರ್ಥಿಗಳಿಗೂ ಅಪ್ಲಿಕೇಷನ್ ಕೊಟ್ಟಿದ್ದ ಬೆಂಗಳೂರು ಸೆಂಟ್ರಲ್ ವಿವಿ, ಇಂದು ಮೊದಲನೇ ದಿನದ ಕೌನ್ಸಿಲಿಂಗ್​ಗೆ ವಿದ್ಯಾರ್ಥಿಗಳನ್ನು ಬರೋಕೆ ಹೇಳಿತ್ತು. ಆದರೆ ಮೊದಲು ನಮ್ಮ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ಎಂದು ಬೆಂಗಳೂರು ಸೆಂಟ್ರಲ್ ವಿವಿ ಹೇಳುತ್ತಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಬಿಎಸ್​ಸಿ ವ್ಯಾಸಾಂಗ ಮಾಡಿದ್ದರು. ಈಗ ಆ ವಿದ್ಯಾರ್ಥಿಗಳು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಬೆಂಗಳೂರು ಕೇಂದ್ರ ವಿವಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: Niranjan Vanalli: ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ್ ವಾನಳ್ಳಿ ನೇಮಕ

ಇದನ್ನೂ ಓದಿ: ಎಂಬಿಎ ಸಹಿತ ಹಲವು ಪರೀಕ್ಷೆಗಳನ್ನು ಮುಂದೂಡಿದ ಬೆಂಗಳೂರು ವಿಶ್ವವಿದ್ಯಾಲಯ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!