AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆರಿಟ್ ಲಿಸ್ಟ್ ಪ್ರಕಾರ ಕೌನ್ಸೆಲಿಂಗ್ ನಡೆಯದ ಆರೋಪ; ಬೆಂಗಳೂರು ಉತ್ತರ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಸುಮಾರು 400 ರಾಂಕ್ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. ಬಿಸಿಯು ಯನಿವರ್ಸಿಟಿ ವಿದ್ಯಾರ್ಥಿಗಳಿಗೆ ಮಾತ್ರ ಆಧ್ಯತೆ ನೀಡಲಾಗಿದೆ ಎಂದು ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ, ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ವಾಗ್ವಾದ ಏರ್ಪಟ್ಟಿದೆ.

ಮೆರಿಟ್ ಲಿಸ್ಟ್ ಪ್ರಕಾರ ಕೌನ್ಸೆಲಿಂಗ್ ನಡೆಯದ ಆರೋಪ; ಬೆಂಗಳೂರು ಉತ್ತರ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 01, 2021 | 3:18 PM

Share

ಬೆಂಗಳೂರು: ಮೆರಿಟ್ ಲಿಸ್ಟ್ ಪ್ರಕಾರ ಕೌನ್ಸೆಲಿಂಗ್ ನಡೆಯದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸೆಂಟ್ರಲ್ ಕಾಲೇಜು ಮುಂದೆ ವಿದ್ಯಾರ್ಥಿಗಳಿಂದ ಧರಣಿ ನಡೆಸಲಾಗಿದೆ. ಸುಮಾರು 400 ರಾಂಕ್ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. ಬಿಸಿಯು ಯನಿವರ್ಸಿಟಿ ವಿದ್ಯಾರ್ಥಿಗಳಿಗೆ ಮಾತ್ರ ಆಧ್ಯತೆ ನೀಡಲಾಗಿದೆ ಎಂದು ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ, ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ವಾಗ್ವಾದ ಏರ್ಪಟ್ಟಿದೆ.

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. 400 ರಾಂಕ್ ವಿದ್ಯಾರ್ಥಿಗಳಲ್ಲಿ ಮೊದಲ ಆದ್ಯತೆ ಬಿಸಿಯು ಯನಿವರ್ಸಿಟಿಯ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ. ಎಂಎಸ್​ಸಿ, ಕೆಮೆಸ್ರ್ಟಿ, ಅಪ್ಲೀಕೇಷನ್​ಗಾಗಿ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿ ವಾಗ್ವಾದ ಉಂಟಾಗಿದೆ. ರಾಂಕ್ ಲಿಸ್ಟ್ ಪ್ರಕಾರ ಸೀಟ್ ಅಲಾಟ್ ಆಗಲಿ ಎಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ ವ್ಯಕ್ತವಾಗಿದೆ.

ಬೆಂಗಳೂರು ವಿವಿ ತ್ರಿಭಜನೆ ಆಪತ್ತು ತಂದಿದೆ ಎಂದು ಹೇಳಲಾಗುತ್ತಿದೆ. ಬಿಎಸ್​ಸಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಬಿಎಸ್​ಸಿ ಬಳಿಕ ಎಮ್​ಎಸ್​ಸಿ ವ್ಯಾಸಾಂಗ ಮಾಡಲು ಕಾಲೇಜುಗಳೇ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೆ, ಬೆಂಗಳೂರು ಉತ್ತರ ವಿವಿಯಲ್ಲಿ ಎಮ್​ಎಸ್​ಸಿ ರಸಾಯನಶಾಸ್ತ್ರದಲ್ಲಿ ಯಾವುದೇ ಕಾಲೇಜುಗಳು ಇಲ್ಲ. ಹೀಗಾಗಿ ಬೆಂಗಳೂರು ಕೇಂದ್ರ ವಿವಿಗೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಮೊದಲು ಎಲ್ಲಾ ವಿದ್ಯಾರ್ಥಿಗಳಿಗೂ ಅಪ್ಲಿಕೇಷನ್ ಕೊಟ್ಟಿದ್ದ ಬೆಂಗಳೂರು ಸೆಂಟ್ರಲ್ ವಿವಿ, ಇಂದು ಮೊದಲನೇ ದಿನದ ಕೌನ್ಸಿಲಿಂಗ್​ಗೆ ವಿದ್ಯಾರ್ಥಿಗಳನ್ನು ಬರೋಕೆ ಹೇಳಿತ್ತು. ಆದರೆ ಮೊದಲು ನಮ್ಮ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ಎಂದು ಬೆಂಗಳೂರು ಸೆಂಟ್ರಲ್ ವಿವಿ ಹೇಳುತ್ತಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಬಿಎಸ್​ಸಿ ವ್ಯಾಸಾಂಗ ಮಾಡಿದ್ದರು. ಈಗ ಆ ವಿದ್ಯಾರ್ಥಿಗಳು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಬೆಂಗಳೂರು ಕೇಂದ್ರ ವಿವಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: Niranjan Vanalli: ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ್ ವಾನಳ್ಳಿ ನೇಮಕ

ಇದನ್ನೂ ಓದಿ: ಎಂಬಿಎ ಸಹಿತ ಹಲವು ಪರೀಕ್ಷೆಗಳನ್ನು ಮುಂದೂಡಿದ ಬೆಂಗಳೂರು ವಿಶ್ವವಿದ್ಯಾಲಯ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು