AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Results: ಜಯನಗರದ ವಿಜಯ ಪಿಯು ಕಾಲೇಜಿನ ಅವಳಿ ವಿದ್ಯಾರ್ಥಿಗಳು ಒಂದೇ ಅಂಕ ಗಳಿಸಿದ್ದಾರೆ

ಜಯನಗರದ ವಿಜಯ ಪಿಯು ಕಾಲೇಜಿನ ಸರ್ವೇಶ್ ಎನ್.ಎನ್ ಮತ್ತು ಸಂತೋಷ್ ಎನ್‌.ಎನ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಂದೇ ಅಂಕಗಳನ್ನು ಗಳಿಸಿದ್ದಾರೆ.

Karnataka 2nd PUC Results: ಜಯನಗರದ ವಿಜಯ ಪಿಯು ಕಾಲೇಜಿನ ಅವಳಿ ವಿದ್ಯಾರ್ಥಿಗಳು ಒಂದೇ ಅಂಕ ಗಳಿಸಿದ್ದಾರೆ
ಸರ್ವೇಶ್ ಎನ್.ಎನ್ (ಕೆಂಪು ಬಣ್ಣದ ಬಟ್ಟೆ), ಸಂತೋಷ್ ಎನ್.ಎನ್Image Credit source: Times of India
ನಯನಾ ಎಸ್​ಪಿ
|

Updated on: Apr 22, 2023 | 11:08 AM

Share

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ 2023 ರ ಫಲಿತಾಂಶ (Karnataka 2nd PUC Results) ನಿನ್ನೆ (April 21) ಪ್ರಕಟವಾಗಿದೆ. ಫಲಿತಾಂಶ ಪ್ರಕಟಣೆಗಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯದ ಟಾಪರ್​ಗಳ ಹೆಸರನ್ನು ಘೋಷಿಸಲಾಗಿತ್ತು. ಇದೀಗ ಬೆಂಗಳೂರಿನ ಜಯನಗರದ (Jayanagar) ವಿಜಯ ಪಿಯು ಕಾಲೇಜಿನ ಸರ್ವೇಶ್ ಎನ್‌ಎನ್ (Sarvesh NN) (ಕೆಂಪು ಬಣ್ಣದ ಬಟ್ಟೆ ಧರಿಸಿರುವ ವಿದ್ಯಾರ್ಥಿ) ಮತ್ತು ಸಂತೋಷ್ ಎನ್‌ಎನ್ (Santhosh NN) ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಂದೇ ಅಂಕಗಳನ್ನು ಗಳಿಸಿದ್ದಾರೆ. ಈ ಒಂದು ಅಪರೂಪದ ಘಟನೆಯ ಕುರಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವೈಯಕ್ತಿಕ ವಿಷಯಗಳಲ್ಲಿ ಅವರ ಅಂಕಗಳು ವಿಭಿನ್ನವಾಗಿದ್ದರೂ ಇಬ್ಬರೂ 600 ರಲ್ಲಿ 566 ಗಳಿಸಿದ್ದಾರೆ.

“ಫಲಿತಾಂಶಗಳಿಂದ ನಮಗೆ ಆಶ್ಚರ್ಯವಾಯಿತು. ನಾವಿಬ್ಬರು ಓದುತ್ತಿರುವುದರಲ್ಲಿ ಐದು ವಿಷಯಗಳು ವಿಭಿನ್ನವಾಗಿವೆ. ನಾವು ಕೆಲವೊಮ್ಮೆ ಒಟ್ಟಿಗೆ ಅಧ್ಯಯನ ಮಾಡುತ್ತೇವೆ ಮತ್ತು ಅನುಮಾನಗಳನ್ನು ಸ್ಪಷ್ಟಪಡಿಸುತ್ತೇವೆ. ಆದರೆ, ನಾವು ಒಂದೇ ರೀತಿಯ ಅಂಕಗಳನ್ನು ನಿರೀಕ್ಷಿಸಿರಲಿಲ್ಲ” ಎಂದು ಸರ್ವೇಶ್ ಹೇಳಿದರು. ಕ್ರಿಕೆಟ್, ಸಂಗೀತ ಮತ್ತು ಚಲನಚಿತ್ರಗಳಲ್ಲಿ ಅವರಿಬ್ಬರಿಗಿರುವ ಆಸಕ್ತಿಯನ್ನು ಹೊರತುಪಡಿಸಿದರೆ ಅವರಲ್ಲಿ ಹೆಚ್ಚು ಸಾಮ್ಯತೆ ಇಲ್ಲ ಎಂದು ಸರ್ವೇಶ್ ಹೇಳಿದರು.

“ನಾನು ಬೆಳಿಗ್ಗೆ ಓದುತ್ತೇನೆ, ಸಂತೋಷ್ ರಾತ್ರಿ ಓದುತ್ತಾನೆ, ಶಾಲೆಯಲ್ಲಿ ನಾವು ಒಟ್ಟಿಗೆ ಇದ್ದೇವೆ, ಆದರೆ ನಮ್ಮ ಎಸ್‌ಎಸ್‌ಎಲ್‌ಸಿ ಅಂಕಗಳು ತುಂಬಾ ವಿಭಿನ್ನವಾಗಿವೆ” ಎಂದು ಸರ್ವೇಶ್ ಹೇಳಿದರು. ಈ ಅವಳಿ ಜೋಡಿ ಮುಂದಿನ ದಿನಗಳಲ್ಲಿ ವಾಣಿಜ್ಯ ವಿಭಾಗದಲ್ಲಿ ಬಿಕಾಂ ಅನ್ನು ಆಯ್ಕೆ ಮಾಡಲು ಯೋಚಿಸಿದ್ದಾರೆ.

ಇದನ್ನೂ ಓದಿ: ಮರುಮೌಲ್ಯಮಾಪನಕ್ಕೆ ಮೇ 3 ರಿಂದ ಅರ್ಜಿ ಸಲ್ಲಿಸಲು ಅವಕಾಶ

ದ್ವಿತೀಯ ಪಿಯುಸಿ ಫಲಿತಾಂಶದ ಪ್ರಕಾರ ಕಲಾ ವಿಭಾಗದಲ್ಲಿ ಜಯನಗರ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶೇಖ್ 600ಕ್ಕೆ 593 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನದಲ್ಲಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ