AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್

Second PUC Exams: 2023-24ನೇ ಸಾಲಿನ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಇದೇ ಮಾರ್ಚ್​ 1 ರಿಂದ ಮಾ. 22ರ ವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿ ಸುದ್ದಿಯೊಂದನ್ನ ನೀಡಿದೆ.

ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 21, 2024 | 4:20 PM

Share

ಬೆಂಗಳೂರು, (ಫೆಬ್ರವರಿ 21): ರಾಜ್ಯದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್​ನ್ಯೂಸ್ ನೀಡಿದೆ. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು.

ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್​ ಟಿಕೆಟ್​​ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.

ಇದನ್ನೂ ಓದಿ: SSLC PUC Exam 2024 Time Table: ದ್ವಿತೀಯ ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಸಹ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುತ್ತಾ ಬಂದಿವೆ. ​ ಸದ್ಯಕ್ಕೆ ಬೆಂಗಳೂರಿನ ವಿದ್ಯಾರ್ಥಿಗಳಿಗಾಗಿ ಉಚಿತ ಸೇವೆಯನ್ನು ಬಿಎಂಟಿಸಿ ಘೋಷಣೆ ಮಾಡಿದ್ದು, ಇನ್ನೂ ಇನ್ನುಳಿದ ಜಿಲ್ಲೆಗಳಿಗೆ ಕೆಎಸ್ಆರ್​ಟಿಸಿ ಈ ಬಗ್ಗೆ ಇನ್ನೂ ಯಾವುದೇ ಸುತ್ತೋಲೆ ಹೊರಡಿಸಿಲ್ಲ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪರೀಕ್ಷೆಗಳನ್ನು ಮಾರ್ಚ್​ 1ರಿಂದ ಮಾರ್ಚ್​ 22ರ ವರೆಗೆ ನಡೆಸುತ್ತಿದೆ. ಇದಕ್ಕೆ ಸಕಲ ಸಿದ್ಧತೆಯನ್ನು ಸಹ ಮಾಡಿಕೊಂಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಮ್ಮ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:55 pm, Wed, 21 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ