AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Bus Pass: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ ಪಾಸ್ ವಿತರಣೆ

ಸೇವಾಸಿಂಧು ಪೋರ್ಟಲ್​ ಮತ್ತು ಬಿಎಂಟಿಸಿ ವೆಬ್​ಸೈಟ್​ನಲ್ಲಿ ಬಸ್​ಪಾಸ್​ನ ಆನ್​ಲೈನ್ ಅರ್ಜಿಗಳು ಲಭ್ಯ

BMTC Bus Pass: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ ಪಾಸ್ ವಿತರಣೆ
ಬಿಎಂಟಿಸಿ ಬಸ್
TV9 Web
| Edited By: |

Updated on:Nov 12, 2021 | 11:41 AM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (Bengaluru Metropolitan Transport Corporation – BMTC) ನವೆಂಬರ್ 14ರಿಂದ ವಿದ್ಯಾರ್ಥಿಗಳಿಗೆ ಬಸ್​ಪಾಸ್ ವಿತರಿಸಲಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಈ ಪಾಸ್ ಲಭ್ಯವಾಗಲಿವೆ. ಸೇವಾಸಿಂಧು ಪೋರ್ಟಲ್​ ಮತ್ತು ಬಿಎಂಟಿಸಿ ವೆಬ್​ಸೈಟ್​ನಲ್ಲಿ ಬಸ್​ಪಾಸ್​ನ ಆನ್​ಲೈನ್ ಅರ್ಜಿಗಳು ಲಭ್ಯ. ಬೆಂಗಳೂರು ಒನ್ ಕೇಂದ್ರದಲ್ಲಿ ಪ್ರತಿದಿನ ಬೆಳಿಗ್ಗೆ 8ರಿಂದ ಸಂಜೆ 6.30ರವರೆಗೆ ಪಾಸ್​ಗಳನ್ನು ವಿತರಿಸಲಾಗುವುದು ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಂದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಅನುಮೋದಿಸಲಾಗುವುದು. ಈ ಕುರಿತು ಸೂಚನೆ ಲಭ್ಯವಾದ ನಂತರ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪಾಸ್ ವಿತರಣೆಗಾಗಿ ಬೆಂಗಳೂರು ಒನ್ ಕೇಂದ್ರದಲ್ಲಿ ದಿನಾಂಕ ಮತ್ತು ಸಮಯ ನಿಗದಿಪಡಿಸಿಕೊಳ್ಳಬೇಕು. ಬೆಂಗಳೂರು ಒನ್ ಕೇಂದ್ರಗಳಿಗೆ ಬರುವಾಗ ಶಿಕ್ಷಣ ಸಂಸ್ಥೆಯ ಗುರುತಿನ ಚೀಟಿ, ಶುಲ್ಕ ರಸೀದಿ, ಶಾಲಾ ಮುಖ್ಯಸ್ಥರು ನೀಡುವ ದೃಢೀಕರಣ ಪತ್ರವನ್ನು ತರಬೇಕು ಎಂದು ಬಿಎಂಟಿಸಿ ಹೇಳಿದೆ.

ವಿದ್ಯಾರ್ಥಿಗಳು ಒಂದು ವೇಳೆ ನೋಂದಣಿಯಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿದ್ದರೆ, ಅಂಥವರು ತಮ್ಮ ಶಾಲೆಗಳನ್ನು ಬಿಎಂಟಿಸಿ ವೆಬ್​ಸೈಟ್​ನಲ್ಲಿ ನೋಂದಣಿ ಮಾಡಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಬೇಕು. ಎಲ್ಲೆಲ್ಲಿ ಪಾಸ್ ವಿತರಿಸಲಾಗುವುದು ಎಂಬ ಪಟ್ಟಿಯು ಬಿಎಂಟಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದೆ. ನಗರದ ಒಟ್ಟು 95 ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್​ಗಳನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​ ಮೇಲೆ ಬಿತ್ತು ರೈಲ್ವೇ ಬ್ರಿಡ್ಜ್​ಗೆ ಹಾಕಿದ್ದ ಕಬ್ಬಿಣದ ಶೀಟ್​; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಇದನ್ನೂ ಓದಿ: BMTC Revenue: ಸಾರಿಗೆ ಸಿಬ್ಬಂದಿಗೆ ಬಿಎಂಟಿಸಿಯಿಂದ ಟಾರ್ಗೆಟ್ ಟಾರ್ಚರ್!

Published On - 11:39 am, Fri, 12 November 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ