AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Scholarships 2022: ಆಗಸ್ಟ್​ನಲ್ಲಿ ನೀವು ಈ 3 ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ

ಸ್ಕಾಲರ್‌ ಶಿಪ್‌ಗಳು ವಿವಿಧ ವಯಸ್ಸಿನ ಮತ್ತು ಅರ್ಹತೆಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ಹಣಕಾಸಿನ ನೆರವಿನ ಒಂದು ರೂಪವಾಗಿದೆ. ಈ ಸ್ಕಾಲರ್‌ ಶಿಪ್​ನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು .

Scholarships 2022: ಆಗಸ್ಟ್​ನಲ್ಲಿ ನೀವು ಈ 3 ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 25, 2022 | 5:34 PM

Share

ಸ್ಕಾಲರ್‌ ಶಿಪ್‌ಗಳು ವಿವಿಧ ವಯಸ್ಸಿನ ಮತ್ತು ಅರ್ಹತೆಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ಹಣಕಾಸಿನ ನೆರವಿನ ಒಂದು ರೂಪವಾಗಿದೆ. ಈ ಸ್ಕಾಲರ್‌ ಶಿಪ್​ನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು . ದೇಶದಲ್ಲಿ ಕೊರೊನಾ ಸಮಯದಲ್ಲಿ   ಅನೇಕ ವಿದ್ಯಾರ್ಥಿವೇತನಗಳು ಜಾರಿಗೆ ಬಂದವು, ಇದು ಮಕ್ಕಳು ಮತ್ತು ಪೋಷಕರನ್ನು ಕಳೆದುಕೊಂಡಿರುವ  ವಿದ್ಯಾರ್ಥಿಗಳಿ ಈ ಸ್ಕಾಲರ್‌ ಶಿಪ್‌ ಉಪಯುಕ್ತವಾಗಿತ್ತು.

ಈ ಸ್ಕಾಲರ್‌ಶಿಪ್ ಮತ್ತು ಫೆಲೋಶಿಪ್ ಗಳು ನಿಮ್ಮ ಮುಂದಿನ   ವೃತ್ತಿಜೀವನವನ್ನು ಪ್ರಾರಂಭಿಸಲು ಸಹಾಯ ಮಾಡಬಹುದು. ವಿದೇಶದಲ್ಲಿ ಈ ವಿದ್ಯಾರ್ಥಿವೇತನಗಳಿಂದ  ಕಡಿಮೆ ಶುಲ್ಕದಿಂದ ಉನ್ನತ ಅಧ್ಯಯನಕ್ಕಾಗಿ ವಿದೇಶಿಕ್ಕೆ ಹೋಗಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಈ 3 ವಿದ್ಯಾರ್ಥಿವೇತನಗಳಿಗೆ  ಆಗಸ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ದಿ ರೋಡ್ಸ್ ಸ್ಕಾಲರ್‌ಶಿಪ್ಸ್ ಫಾರ್ ಇಂಡಿಯಾ 2022-23

ರೋಡ್ಸ್ ಸ್ಕಾಲರ್‌ ಶಿಪ್ಸ್ ಫಾರ್ ಇಂಡಿಯಾ 2022-23 ಭಾರತೀಯ ಪದವಿಪೂರ್ವ ಪದವಿ ಹೊಂದಿರುವವರಿಗೆ ರೋಡ್ಸ್ ಟ್ರಸ್ಟ್‌ (ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ) ವೇತನವನ್ನು ನೀಡುವುದು.  ಜಾಗತಿಕ ಮಟ್ಟದಲ್ಲಿ ಬೆಳೆಯಲು ಈ ಸ್ಕಾಲರ್‌ ಶಿಪ್‌ ಸಹಾಯ ಮಾಡುತ್ತದೆ.  ಇತರರ ಸೇವೆಗೆ ಬದ್ಧವಾಗಿರುವ ಮತ್ತು ತಮ್ಮ  ಭವಿಷ್ಯಕ್ಕಾಗಿ  ಭರವಸೆಯನ್ನು ಮೂಡಿಸಲು ದಿ ರೋಡ್ಸ್ ಸ್ಕಾಲರ್‌ಶಿಪ್ಸ್ ಫಾರ್ ಇಂಡಿಯಾ ಉತ್ತಮವಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-08-2022

ಆನ್‌ಲೈನ್ ಅಪ್ಲಿಕೇಶನ್‌ಗಳು ಮಾತ್ರ,  https://www.rhodeshouse.ox.ac.uk/

ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನಲ್ ಸ್ಕಾಲರ್‌ಶಿಪ್ ಪ್ರೋಗ್ರಾಮ್‌

Colgate-Palmolive (India) Ltd. ಇದು ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ತರಬೇತಿ, ವೈದ್ಯಕೀಯ ಮತ್ತು ಇತರ ವೆಚ್ಚಗಳಿಗಾಗಿ ಹಣಕಾಸಿನ ನೆರವು ಪಡೆಯಲು ಯುವ ಕ್ರೀಡಾಪಟುಗಳನ್ನು ಆಹ್ವಾನಿಸುತ್ತದೆ.  ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಗುರಿಯನ್ನು  ಈ ಸ್ಕಾಲರ್‌ಶಿಪ್  ಹೊಂದಿದೆ.

ಅರ್ಹತೆ

  1.  ಕ್ರೀಡೆಯಲ್ಲಿ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ಅಥವಾ ರಾಷ್ಟ್ರೀಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿರುವ ಮತ್ತು 500 (ರಾಷ್ಟ್ರೀಯ ಮಟ್ಟ), 100 (ರಾಜ್ಯ ಮಟ್ಟ), ಅಥವಾ 10 (ಜಿಲ್ಲಾ ಮಟ್ಟ) ರೊಳಗೆ ಶ್ರೇಯಾಂಕ ಹೊಂದಿರುವ ಭಾರತೀಯ ಕ್ರೀಡಾಪಟುಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
  2. ಎಲ್ಲಾ ಅರ್ಜಿದಾರರು ಒಟ್ಟು ಕುಟುಂಬದ ಆದಾಯವನ್ನು ವಾರ್ಷಿಕ INR 5 ಲಕ್ಷಕ್ಕಿಂತ ಕಡಿಮೆ ಹೊಂದಿರಬೇಕು.
  3. ಆಯ್ಕೆಯಾದ ಕ್ರೀಡಾ ಪ್ರತಿಭೆಗಳು ಫಿಟ್‌ನೆಸ್, ಆರೋಗ್ಯ ರಕ್ಷಣೆ, ತರಬೇತಿ ಮತ್ತು ಆಡಳಿತಾತ್ಮಕ ವೆಚ್ಚಗಳನ್ನು ನಿರ್ವಹಿಸಲು 3 ವರ್ಷಗಳವರೆಗೆ ವರ್ಷಕ್ಕೆ INR 75,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2022

ಆನ್‌ಲೈನ್ ಅಪ್ಲಿಕೇಶನ್‌ಗಳು ಮಾತ್ರ, www.b4s.in/it/CSP2

IET ಇಂಡಿಯಾ ಸ್ಕಾಲರ್‌ಶಿಪ್ 

ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ (IET) ಪದವಿಪೂರ್ವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ  ಸೃಜನಶೀಲತೆ, ನಾವೀನ್ಯತೆ, ನಾಯಕತ್ವ ಮತ್ತು ಶ್ರೇಷ್ಠತೆಯನ್ನು ಪುರಸ್ಕರಿಸಲು ಈ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ವಿದ್ಯಾರ್ಥಿವೇತನವು ಭಾರತದ ಭವಿಷ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಗುರುತಿಸಲು ಮತ್ತು ಪೋಷಿಸುವ ಗುರಿಯನ್ನು ಹೊಂದಿದೆ.

ಅರ್ಹತೆ

  • AICTE/UGC-ಅನುಮೋದಿತ ಸಂಸ್ಥೆಗಳಿಂದ ಪದವಿಪೂರ್ವ ಎಂಜಿನಿಯರಿಂಗ್ ವಿದ್ಯಾರ್ಥಿ (ಯಾವುದೇ ಕ್ಷೇತ್ರದಲ್ಲಿ) 1ನೇ, 2ನೇ, 3ನೇ ಮತ್ತು 4ನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಇದಕ್ಕೆ ಅರ್ಜಿ ಸಲ್ಲಿಸಬಹುದು.
  • 2 ನೇ ವರ್ಷದಲ್ಲಿ ಬಿಟೆಕ್ ಮಾಡಲು ಸೇರುವ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಈ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರು ಇದುವರೆಗೆ ತೆರವುಗೊಳಿಸಿದ ಸೆಮಿಸ್ಟರ್‌ಗಳಲ್ಲಿ 10-ಪಾಯಿಂಟ್ ಸ್ಕೇಲ್‌ನಲ್ಲಿ ಕನಿಷ್ಠ 6.5 ರ ಒಟ್ಟು ಅಥವಾ ಸಮಾನವಾದ CGPA ಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು. INR 10,00,000 ಮೌಲ್ಯದ ವಿದ್ಯಾರ್ಥಿವೇತನಗಳನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-08-2022

ಆನ್‌ಲೈನ್ ಅಪ್ಲಿಕೇಶನ್‌ಗಳು ಮಾತ್ರ,  https://scholarships.theietevents.com/#!


Published On - 5:33 pm, Mon, 25 July 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್