Sign In

By signing in or creating an account, you agree with Associated Broadcasting Company's Terms & Conditions and Privacy Policy.

Career Option : ಪಿಯುಸಿ ನಂತರ ಮುಂದೇನು? ಈ ಕೋರ್ಸ್ ಮಾಡಿದ್ರೆ ಸುಲಭವಾಗಿ ಕೆಲಸ ಸಿಗುತ್ತೆ

ಪಿಯುಸಿ ನಂತರ ಮುಂದೇನು ಎನ್ನುವ ಪ್ರಶ್ನೆಗಳು ಹೆಚ್ಚಿನ ವಿದ್ಯಾರ್ಥಿಗಳನ್ನು ಕಾಡುತ್ತಿರುತ್ತದೆ. ಕೆಲವರು ಪರೀಕ್ಷೆ ಏನೋ ಮುಗಿಯಿತು ರಿಸಲ್ಟ್ ಬರಲಿ, ಆಮೇಲೆ ನೋಡಿದರಾಯಿತು ಎಂದುಕೊಳ್ಳುತ್ತಾರೆ. ಅಂಕಗಳ ಆಧಾರದ ಮೇಲೆ ಕೋರ್ಸ್ ಮಾಡ್ಬೇಕಾ ಅಥವಾ ಡಿಗ್ರಿ ಶಿಕ್ಷಣ ಪಡೆಯುವುದಾ? ಎನ್ನುವ ನಿರ್ಧಾರಕ್ಕೆ ಬರುತ್ತಾರೆ. ಆದರೆ ಪಿಯುಸಿ ಬಳಿಕ ನೀವು ಮಾಡುವ ಕೋರ್ಸ್ ಅಥವಾ ಪಡೆಯುವ ಡಿಗ್ರಿ ನಿಮ್ಮ ಉದ್ಯೋಗವನ್ನು ನಿರ್ಧರಿಸುತ್ತದೆ. ಹೀಗಾಗಿ ಪಿಯುಸಿ ಬಳಿಕ ಮುಂದೇನು ಎನ್ನುವ ಬಗ್ಗೆ ಹೆಚ್ಚು ಯೋಚಿಸಬೇಕು, ವಿದ್ಯಾರ್ಥಿಗಳಿಗೆ ಈ ಕುರಿತಾದ ಕೆಲವು ಟಿಪ್ಸ್ ಇಲ್ಲಿದೆ.

Career Option : ಪಿಯುಸಿ ನಂತರ ಮುಂದೇನು? ಈ ಕೋರ್ಸ್ ಮಾಡಿದ್ರೆ ಸುಲಭವಾಗಿ ಕೆಲಸ ಸಿಗುತ್ತೆ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 24, 2025 | 5:34 PM

ಎಸ್ ಎಸ್ ಎಲ್ ಸಿ (SSLC) ಹಾಗೂ ಪಿಯುಸಿ (PUC) ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟಗಳಲ್ಲಿ ಒಂದು. ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಬಂದ ಬಳಿಕ ಮುಂದೆ ಏನು ಮಾಡಬೇಕೆಂದು ಮತ್ತು ಏನು ಓದಬೇಕೆಂದು ಗೊಂದಲಕ್ಕೊಳಗಾಗುತ್ತಾರೆ. ಆದರೆ ಈ ಹಂತದಲ್ಲಿ ಆಯ್ಕೆ ಮಾಡಿಕೊಳ್ಳುವ ಕೋರ್ಸ್ (Course) ಗಳು ನಿಮ್ಮ ವೃತ್ತಿ ಜೀವನಕ್ಕೆ ಭದ್ರ ಅಡಿಪಾಯ ಹಾಕಿಕೊಳ್ಳುತ್ತದೆ. ವಿಜ್ಞಾನ (Science) , ವಾಣಿಜ್ಯ (Commerce) ಅಥವಾ ಕಲಾ (Arts) ವಿಷಯಗಳೊಂದಿಗೆ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಪಿಯುಸಿ ಬಳಿಕ ಈ ಕೋರ್ಸ್ ಮಾಡಿದರೆ ಸುಲಭವಾಗಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.

  • ವಾಣಿಜ್ಯ ವಿಷಯದಲ್ಲಿ ಪಿಯುಸಿ ಮಾಡಿದ್ದರೆ : ವಾಣಿಜ್ಯ ವಿದ್ಯಾರ್ಥಿಗಳು ಬಿಬಿಎ, ಬಿಕಾಂ ಪದವಿ ಪಡೆದು ಕಂಪೆನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಇದೇ ಕ್ಷೇತ್ರದಲ್ಲಿ ಉನ್ನತ್ತ ಶಿಕ್ಷಣ ಪಡೆಯುವ ಆಯ್ಕೆಗಳು ಇವೆ. ಅದಲ್ಲದೇ, ಕಂಪನಿ ಸೆಕ್ರೆಟರಿ, ಸರ್ಟಿಫೈಡ್ ಪಬ್ಲಿಕ್ ಅಕೌಂಟೆಂಟ್ (ಸಿಪಿಎ), ಸರ್ಟಿಫೈಡ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್, ಡಿಜಿಟಲ್ ಮಾರ್ಕೆಟರ್, ಬ್ಯಾಂಕಿಂಗ್ ಮತ್ತು ಅಕೌಂಟೆನ್ಸಿ ಹೀಗೆ ಹತ್ತಾರು ವೃತ್ತಿ ಆಯ್ಕೆಗಳಿವೆ.
  • ವಿಜ್ಞಾನದಲ್ಲಿ ಪಿಯುಸಿ ಮಾಡಿದ್ದರೆ :ವಿಜ್ಞಾನ ವಿಷಯದಲ್ಲಿ ಪಿಯುಸಿ ಪೂರ್ಣಗೊಳಿಸುವ ವಿದ್ಯಾರ್ಥಿಗಳು ಬಿ ಎಸ್ಸಿ ಅಥವಾ ಬಿಸಿಎ ಯಲ್ಲಿ ಪದವಿ ಪಡೆಯುವ ಮೂಲಕ ಅದೇ ಹಂತದಲ್ಲಿ ಮುಂದುವರೆಯುತ್ತಾರೆ. ಆದರೆ ವಿಜ್ಞಾನ ಓದಿರುವ ವಿದ್ಯಾರ್ಥಿಗಳಿಗೆ ಆಯ್ಕೆಗಳು ಹಲವಾರು ಇದ್ದು, ಎಂಬಿಬಿಎಸ್, ಆರ್ಕಿಟೆಕ್ಚರ್, ಏವಿಯೇಷನ್‌ನಲ್ಲಿ ಸೌಂಡ್ ಇಂಜಿನಿಯರಿಂಗ್, ಬಯೋಮೆಡಿಕಲ್ ವೃತ್ತಿಗಳು, ಓಸಿಯೋನೋಗ್ರಫಿ, ಬಯೋಕೆಮಿಸ್ಟ್ರಿ, ಫೋರೆನ್ಸಿಕ್ ಸೈನ್ಸ್, ನರ್ಸಿಂಗ್, ಪ್ಯಾರಾ ಮೆಡಿಕಲ್, ಡಿಪ್ಲೋಮ ಇಂಜಿನಿಯರಿಂಗ್ ನಂತಹ ಕೋರ್ಸ್ ಗಳನ್ನು ಮಾಡಿದರೆ ನೂರಕ್ಕೆ ನೂರರಷ್ಟು ಉದ್ಯೋಗ ಸಿಗುತ್ತದೆ.
  • ಕಲಾ ವಿಭಾಗದಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರೆ : ಕಲಾ ವಿಭಾಗದ ವಿದ್ಯಾರ್ಥಿಗಳು ಬಿಎ ಪದವಿ ಪಡೆದು ಕೊಂಡು ಬಿಎಡ್ ಸೇರಿದಂತೆ ಇನ್ನಿತ್ತರ ಕೋರ್ಸ್ ಗಳನ್ನು ಮಾಡಿ ಶಿಕ್ಷಕರಾಗಿ ಉದ್ಯೋಗ ಪಡೆದುಕೊಳ್ಳಬಹುದು. ಅದಲ್ಲದೇ, ಹೋಟೆಲ್ ಮ್ಯಾನೇಜ್‌ಮೆಂಟ್, ಪ್ರಾಡಕ್ಟ್ ಡಿಸೈನ್, ಪ್ರತಿಕೋದ್ಯಮ, ಅನಿಮೇಷನ್, ವೆಬ್ ಡಿಸೈನಿಂಗ್ ಹೀಗೆ ವಿವಿಧ ಕೋರ್ಸ್ ಗಳಂತಹ ಆಯ್ಕೆಗಳಿವೆ.
  • ಚಾರ್ಟೆಡ್ ಅಕೌಂಟೆನ್ಸಿ : ಪಿಯುಸಿಯಲ್ಲಿ ವಾಣಿಜ್ಯ ವಿಷಯ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬೆಸ್ಟ್ ಆಯ್ಕೆಯೆಂದರೆ ಸಿಎ. ಆದರೆ ಈ ಕೋರ್ಸ್ ನಲ್ಲಿ ಮೂರು ಹಂತದಲ್ಲಿ ಪರೀಕ್ಷೆಗಳನ್ನು ಎದುರಿಸಬೇಕಾಗಿದ್ದರೂ ಶ್ರಮ ಹಾಕಿ ಪರೀಕ್ಷೆ ಪಾಸ್ ಆದರೆ ಹೆಚ್ಚಿನ ಸಂಬಳ ಉದ್ಯೋಗ ನಿಮ್ಮ ಕೈ ಸೇರುತ್ತದೆ
  • ಫ್ಯಾಷನ್ ಡಿಸೈನಿಂಗ್ : ಇತ್ತೀಚೆಗಿನ ದಿನಗಳಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಗೆ ಹೆಚ್ಚು ಬೇಡಿಕೆಯಿದೆ. ಫ್ಯಾಷನ್ ಡಿಸೈನಿಂಗ್ ನಲ್ಲಿ ವಿವಿಧ ಕ್ಷೇತ್ರಗಳು ಇದ್ದು, ಇದರಲ್ಲಿ ಆಭರಣಗಳ ಡಿಸೈನಿಂಗ್ ಕೂಡ ಕಲಿಯಬಹುದು. ಬಟ್ಟೆಗಳ ವಿನ್ಯಾಸ ಹಾಗೂ ಒಡವೆಗಳ ವಿನ್ಯಾಸದ ಬಗ್ಗೆ ಹೆಚ್ಚು ಆಸಕ್ತಿಯಿರುವ ವಿದ್ಯಾರ್ಥಿಗಳು ಈ ಕೋರ್ಸ್ ಮಾಡಿ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ