AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 10th Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಆಗಸ್ಟ್​ 2ಕ್ಕೆ ಘೋಷಣೆ ಸಾಧ್ಯತೆ; ಇಲ್ಲಿದೆ ನೋಡಿ ಮಾಹಿತಿ

ಕೊವಿಡ್​ 19 ಹಿನ್ನೆಲೆಯಲ್ಲಿ ಈ ಬಾರಿ ಸಿಬಿಎಸ್​ಇ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳಿಗೆ ಅಂಕ ನೀಡಲಾಗುತ್ತಿದೆ.

CBSE 10th Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಆಗಸ್ಟ್​ 2ಕ್ಕೆ ಘೋಷಣೆ ಸಾಧ್ಯತೆ; ಇಲ್ಲಿದೆ ನೋಡಿ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 01, 2021 | 6:29 PM

Share

ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಘೋಷಣೆಯಾಗಿದ್ದು, ಇನ್ನು ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE 10th Result) ಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಮಧ್ಯೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಆಗಸ್ಟ್​ 2ರಂದು ಅಂದರೆ ನಾಳೆಯೇ ಪ್ರಕಟಿಸಲಿದೆ ಎನ್ನಲಾಗಿದೆ. ಹಾಗೊಮ್ಮೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ನಾಳೆ ಪ್ರಕಟವಾದರೆ ವಿದ್ಯಾರ್ಥಿಗಳು cbseresults.nic.in ಮತ್ತು cbse.gov.in. ವೆಬ್​ಸೈಟ್​ಗಳ ಮೂಲಕವೇ ತಮ್ಮ ಅಂಕವನ್ನು ನೋಡಬಹುದಾಗಿದೆ. ಶುಕ್ರವಾರ ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ವೇಳೆ ಮಾತನಾಡಿದ್ದ ಪರೀಕ್ಷೆಗಳ ಕಂಟ್ರೋಲರ್​ ಸನ್ಯಂ ಭಾರದ್ವಾಜ್​, 10ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನವಾರ ಪ್ರಕಟಿಸಲಾಗುವುದು ಎಂದಿದ್ದರು. ಇದೀಗ ಬಂದಿರುವ ಮಾಹಿತಿ ಪ್ರಕಾರ ನಾಳೆಯೇ ರಿಸಲ್ಟ್​ ಬರಲಿದೆ.

ಕೊವಿಡ್​ 19 ಹಿನ್ನೆಲೆಯಲ್ಲಿ ಈ ಬಾರಿ ಸಿಬಿಎಸ್​ಇ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳಿಗೆ ಅಂಕ ನೀಡಲಾಗುತ್ತಿದೆ. ಈಗ ನೀಡುವ ಫಲಿತಾಂಶದಿಂದ ತೃಪ್ತಿಯಾಗದಿದ್ದರೆ ವಿದ್ಯಾರ್ಥಿಗಳ ಎದುರು ಒಂದು ದಾರಿಯಿದೆ. ಕೊವಿಡ್​ 19 ಸಂದರ್ಭ ಸಾಮಾನ್ಯ ಸ್ಥಿತಿಗೆ ಮರಳಿದ ಮೇಲೆ ನಡೆಸಲಾಗುವ ಪರೀಕ್ಷೆಗಳಿಗೆ ಹಾಜರಾಗಲು ತಮ್ಮ ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ನೀವು ಈ ವಿಧಾನಗಳನ್ನು ಅನುಸರಿಸುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.. 1. cbseresults.nic.in ಅಥವಾ cbse.nic.in ವೆಬ್​ಸೈಟ್​ಗೆ ಭೇಟಿ ನೀಡಿ 2. ಅದರಲ್ಲಿ ಪರೀಕ್ಷಾ ಫಲಿತಾಂಶ ಎಂದಿರುವಲ್ಲಿ ಕ್ಲಿಕ್​ ಮಾಡಿ..ನಿಮ್ಮ ರೋಲ್​ ನಂಬರ್​, ಹುಟ್ಟಿದ ದಿನದ ವಿವರಗಳನ್ನು ಸಲ್ಲಿಸಿ 3. ಅದೆಲ್ಲ ಆದ ಬಳಿಕ ನಿಮ್ಮ ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ವೀಕ್ಷಿಸಬಹುದು. 4. ಸ್ಕ್ರೀನ್​ ಮೇಲೆ ಕಾಣುವ ಫಲಿತಾಂಶವನ್ನು ಡೌನ್​ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಇದನ್ನೂ ಓದಿ: ಟಿವಿ9 ಕನ್ನಡ ಫಲಶ್ರುತಿ: ಪುಸ್ತಕ, ಆಟಿಕೆ ಸಾಮಗ್ರಿ ಕಳೆದುಕೊಂಡಿದ್ದ ಬಾಲಕಿಯ ಕಣ್ಣಿರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

CBSE 10th Result 2021 Date And Time check here to know more information

Published On - 6:27 pm, Sun, 1 August 21

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!