AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 10th Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಆಗಸ್ಟ್​ 2ಕ್ಕೆ ಘೋಷಣೆ ಸಾಧ್ಯತೆ; ಇಲ್ಲಿದೆ ನೋಡಿ ಮಾಹಿತಿ

ಕೊವಿಡ್​ 19 ಹಿನ್ನೆಲೆಯಲ್ಲಿ ಈ ಬಾರಿ ಸಿಬಿಎಸ್​ಇ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳಿಗೆ ಅಂಕ ನೀಡಲಾಗುತ್ತಿದೆ.

CBSE 10th Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಆಗಸ್ಟ್​ 2ಕ್ಕೆ ಘೋಷಣೆ ಸಾಧ್ಯತೆ; ಇಲ್ಲಿದೆ ನೋಡಿ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 01, 2021 | 6:29 PM

Share

ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಘೋಷಣೆಯಾಗಿದ್ದು, ಇನ್ನು ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE 10th Result) ಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಮಧ್ಯೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಆಗಸ್ಟ್​ 2ರಂದು ಅಂದರೆ ನಾಳೆಯೇ ಪ್ರಕಟಿಸಲಿದೆ ಎನ್ನಲಾಗಿದೆ. ಹಾಗೊಮ್ಮೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ನಾಳೆ ಪ್ರಕಟವಾದರೆ ವಿದ್ಯಾರ್ಥಿಗಳು cbseresults.nic.in ಮತ್ತು cbse.gov.in. ವೆಬ್​ಸೈಟ್​ಗಳ ಮೂಲಕವೇ ತಮ್ಮ ಅಂಕವನ್ನು ನೋಡಬಹುದಾಗಿದೆ. ಶುಕ್ರವಾರ ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ವೇಳೆ ಮಾತನಾಡಿದ್ದ ಪರೀಕ್ಷೆಗಳ ಕಂಟ್ರೋಲರ್​ ಸನ್ಯಂ ಭಾರದ್ವಾಜ್​, 10ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನವಾರ ಪ್ರಕಟಿಸಲಾಗುವುದು ಎಂದಿದ್ದರು. ಇದೀಗ ಬಂದಿರುವ ಮಾಹಿತಿ ಪ್ರಕಾರ ನಾಳೆಯೇ ರಿಸಲ್ಟ್​ ಬರಲಿದೆ.

ಕೊವಿಡ್​ 19 ಹಿನ್ನೆಲೆಯಲ್ಲಿ ಈ ಬಾರಿ ಸಿಬಿಎಸ್​ಇ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳಿಗೆ ಅಂಕ ನೀಡಲಾಗುತ್ತಿದೆ. ಈಗ ನೀಡುವ ಫಲಿತಾಂಶದಿಂದ ತೃಪ್ತಿಯಾಗದಿದ್ದರೆ ವಿದ್ಯಾರ್ಥಿಗಳ ಎದುರು ಒಂದು ದಾರಿಯಿದೆ. ಕೊವಿಡ್​ 19 ಸಂದರ್ಭ ಸಾಮಾನ್ಯ ಸ್ಥಿತಿಗೆ ಮರಳಿದ ಮೇಲೆ ನಡೆಸಲಾಗುವ ಪರೀಕ್ಷೆಗಳಿಗೆ ಹಾಜರಾಗಲು ತಮ್ಮ ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ನೀವು ಈ ವಿಧಾನಗಳನ್ನು ಅನುಸರಿಸುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.. 1. cbseresults.nic.in ಅಥವಾ cbse.nic.in ವೆಬ್​ಸೈಟ್​ಗೆ ಭೇಟಿ ನೀಡಿ 2. ಅದರಲ್ಲಿ ಪರೀಕ್ಷಾ ಫಲಿತಾಂಶ ಎಂದಿರುವಲ್ಲಿ ಕ್ಲಿಕ್​ ಮಾಡಿ..ನಿಮ್ಮ ರೋಲ್​ ನಂಬರ್​, ಹುಟ್ಟಿದ ದಿನದ ವಿವರಗಳನ್ನು ಸಲ್ಲಿಸಿ 3. ಅದೆಲ್ಲ ಆದ ಬಳಿಕ ನಿಮ್ಮ ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ವೀಕ್ಷಿಸಬಹುದು. 4. ಸ್ಕ್ರೀನ್​ ಮೇಲೆ ಕಾಣುವ ಫಲಿತಾಂಶವನ್ನು ಡೌನ್​ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಇದನ್ನೂ ಓದಿ: ಟಿವಿ9 ಕನ್ನಡ ಫಲಶ್ರುತಿ: ಪುಸ್ತಕ, ಆಟಿಕೆ ಸಾಮಗ್ರಿ ಕಳೆದುಕೊಂಡಿದ್ದ ಬಾಲಕಿಯ ಕಣ್ಣಿರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

CBSE 10th Result 2021 Date And Time check here to know more information

Published On - 6:27 pm, Sun, 1 August 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು