AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meet Kafi: ಆಸಿಡ್ ದಾಳಿಯಲ್ಲಿ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿನಿಗೆ ಇಂದು PUCಯಲ್ಲಿ ಶೇ.95.6 ಅಂಕ

ಚಂಡೀಗಢದ ಕಾಫಿ ಎಂಬ ವಿದ್ಯಾರ್ಥಿನಿ ತನ್ನ ಮೂರನೇ ವಯಸ್ಸಿನಲ್ಲಿ ಆಸಿಡ್ ದಾಳಿಯಲ್ಲಿ ದೃಷ್ಟಿ ಕಳೆದುಕೊಂಡಿದ್ದರೂ ಕೂಡ ಛಲ ಬಿಡದೇ ಓದಿ ಇದೀಗ ಸಿಬಿಎಸ್‌ಇ 12ನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಶೇ. 95.6 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದಿದ್ದಾಳೆ. ಆಡಿಯೋ ಪುಸ್ತಕಗಳು ಮತ್ತು ಯೂಟ್ಯೂಬ್ ನನ್ನ ಕಲಿಕೆಗೆ ಸಹಾಯಕವಾಗಿದೆ ಎಂದು ಕಾಫಿ ಹೇಳಿದ್ದಾಳೆ. ದೆಹಲಿ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಪದವಿ ಪಡೆದು ಐಎಎಸ್ ಅಧಿಕಾರಿಯಾಗುವುದು ಆಕೆಯ ಕನಸು.

Meet Kafi: ಆಸಿಡ್ ದಾಳಿಯಲ್ಲಿ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿನಿಗೆ ಇಂದು PUCಯಲ್ಲಿ  ಶೇ.95.6 ಅಂಕ
Cbse 12th Result Blind Student Kafi Tops Despite Acid Attack
ಅಕ್ಷತಾ ವರ್ಕಾಡಿ
|

Updated on:May 14, 2025 | 3:39 PM

Share

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮಧ್ಯೆ ಚಂಡೀಗಢದ ವಿದ್ಯಾರ್ಥಿನಿ ಕಾಫಿ( Kafi) ಎಲ್ಲೆಡೆ ಸುದ್ದಿಯಲ್ಲಿದ್ದಾಳೆ. ತನ್ನ ಮೂರನೇ ವಯಸ್ಸಿನಲ್ಲಿ ಆಸಿಡ್ ದಾಳಿಗೆ ಒಳಗಾದ ಕಾಪಿ, ದೃಷ್ಟಿ ಕಳೆದುಕೊಂಡಿದ್ದರೂ ಕೂಡ 12 ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 95.6 ಅಂಕಗಳನ್ನು ಗಳಿಸುವ ಮೂಲಕ ಇನ್ಸ್ಟಿಟ್ಯೂಟ್ ಫಾರ್ ದಿ ಬ್ಲೈಂಡ್‌ ಕಾಲೇಜಿನಲ್ಲಿ ಅಗ್ರಸ್ಥಾನ ಪಡೆದಿದ್ದಾಳೆ. ಈ ಮೂಲಕ ಸಾಕಷ್ಟು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾಳೆ. ಎರಡು ವರ್ಷಗಳ ಹಿಂದೆಯೂ ಕೂಡ ಅಂದರೆ 10 ನೇ ತರಗತಿಯಲ್ಲಿಯೂ ಸಹ ಕಾಫಿ ಶೇ. 95.2 ಅಂಕ ಗಳಿಸುವ ಮೂಲಕ ತನ್ನ ಸಂಸ್ಥೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಳು.

ವರದಿಗಳ ಪ್ರಕಾರ, ತನ್ನ ಮೂರನೇ ವಯಸ್ಸಿನಲ್ಲಿ ನೆರೆಮನೆಯಿಂದಲೇ ಆಸಿಡ್ ದಾಳಿಗೆ ಒಳಗಾಗಿದ್ದ ಕಾಫಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡಿದ್ದಳು. ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಈಕೆ 2016 ರಲ್ಲಿ ಎಂಟನೇ ವಯಸ್ಸಿನಲ್ಲಿ ಶಾಲೆಗೆ ಸೇರಿದಳು. ಓದಿನಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಈಕೆಯನ್ನು 2018 ರಲ್ಲಿ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಇನ್ಸ್ಟಿಟ್ಯೂಟ್ ಫಾರ್ ದಿ ಬ್ಲೈಂಡ್‌ನಲ್ಲಿ ನೇರವಾಗಿ 6 ​​ನೇ ತರಗತಿಗೆ ಸೇರಿಸಲಾಯಿತು.

ಇದನ್ನೂ ಓದಿ: ಕಸದ ಬುಟ್ಟಿಯಲ್ಲಿ ಸಿಕ್ಕಿದ್ದ ಅಂಧ ಮಗು ಇಂದು ಅಸಿಸ್ಟಂಟ್ ಕಲೆಕ್ಟರ್

ತನ್ನ 12 ನೇ ತರಗತಿಯ ಪರೀಕ್ಷೆಗಳಿಗೆ, ಕಾಫಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಎರಡರಿಂದ ಮೂರು ಗಂಟೆಗಳ ಕಾಲ ಆಡಿಯೋ ಪುಸ್ತಕಗಳು ಮತ್ತು ಯೂಟ್ಯೂಬ್ ಅನ್ನು ಅವಲಂಬಿಸಿ ಅಧ್ಯಯನ ಮಾಡುತ್ತಿದ್ದಳು. ದೆಹಲಿ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದು ನಂತರ ಐಎಎಸ್ ಅಧಿಕಾರಿಯಾಗುವುದು ಕಾಫಿಯ ಕನಸು. ಈಗಾಗಲೇ ದೆಹಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಗೂ ಹಾಜರಾಗಿದ್ದು, ಶೀಘ್ರದಲ್ಲೇ ಪ್ರವೇಶ ಪಡೆಯುವ ಭರವಸೆಯಲ್ಲಿದ್ದಾರೆ ಕಾಫಿ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Wed, 14 May 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!