AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Board Exam 2021: ಬೋರ್ಡ್ ಪರೀಕ್ಷೆ ಎದುರಿಸಲಿರುವ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಈ ಮಾಹಿತಿ ಗಮನಿಸಿ

CBSE Board Exam: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (CBSE) ವಲಸೆ ಪ್ರಮಾಣಪತ್ರ ಸಂಬಂಧಿಸಿ ನೋಟಿಫಿಕೇಷನ್ ಬಿಡುಗಡೆಗೊಳಿಸಿದೆ.

CBSE Board Exam 2021: ಬೋರ್ಡ್ ಪರೀಕ್ಷೆ ಎದುರಿಸಲಿರುವ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಈ ಮಾಹಿತಿ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 05, 2022 | 1:12 PM

Share

CBSE Board Exam 2021: 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಬಿಎಸ್​ಇ ಬಹುಮುಖ್ಯ ನೋಟಿಫಿಕೇಷನ್ ಒಂದನ್ನು ಬಿಡುಗಡೆಗೊಳಿಸಿದೆ. 10 ಅಥವಾ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಬಳಿಕ ಮತ್ತೊಂದು ಬೋರ್ಡ್​ಗೆ ವಿದ್ಯಾರ್ಥಿ ತೆರಳುವುದಿದ್ದರೆ ಅಂಥವರಿಗೆ ವಲಸೆ ಪ್ರಮಾಣ ಪತ್ರ (Migration Certificate) ಅಗತ್ಯವಾಗಿರುತ್ತದೆ. 12ನೇ ತರಗತಿ ವಿದ್ಯಾರ್ಥಿ ಉನ್ನತ ಮಟ್ಟದ ಅಧ್ಯಯನಕ್ಕಾಗಿ ತೆರಳುವಾಗಲೂ ಈ ವಲಸೆ ಪ್ರಮಾಣಪತ್ರ ಅವಶ್ಯವಾಗಿರುತ್ತದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (CBSE) ವಲಸೆ ಪ್ರಮಾಣಪತ್ರ ಸಂಬಂಧಿಸಿ ನೋಟಿಫಿಕೇಷನ್ ಬಿಡುಗಡೆಗೊಳಿಸಿದೆ. 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು CBSE ಅಧಿಕೃತ ವೆಬ್​ಸೈಟ್ cbse.gov.in ನಲ್ಲಿ ನೋಟಿಫಿಕೇಷನ್ ಪರಿಶೀಲಿಸಬಹುದಾಗಿದೆ.

ಸಿಬಿಎಸ್​ಇ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಮುಖ್ಯಸ್ಥರಿಗೆ ನೀಡಿರುವ ಪತ್ರದಲ್ಲಿ, ಯಾವ ವಿದ್ಯಾರ್ಥಿಗಳು ವಲಸೆ ಪ್ರಮಾಣಪತ್ರಕ್ಕೆ ಮನವಿ ಮಾಡುತ್ತಾರೋ ಅಂಥವರಿಗೆ ಮಾತ್ರ ವಲಸೆ ಪ್ರಮಾಣಪತ್ರದ (Migration Certificate) ಹಾರ್ಡ್ ಕಾಪಿಯನ್ನು ನೀಡಲಾಗುವುದು ಎಂದು CBSE ಹೇಳಿದೆ. ಇಲ್ಲವಾದರೆ ಪರೀಕ್ಷೆ ಫಲಿತಾಂಶ ಬರುವವರೆಗೆ ವಿದ್ಯಾರ್ಥಿಗಳು ಕಾಯಬೇಕಾಗಿದೆ. ಪರೀಕ್ಷಾ ಫಲಿತಾಂಶ ಬಿಡುಗಡೆಗೊಂಡ ಬಳಿಕ, ವಲಸೆ ಪ್ರಮಾಣಪತ್ರವು ಸಾಫ್ಟ್ ಕಾಪಿ ರೂಪದಲ್ಲಿ ಡಿಜಿ ಲಾಕರ್​ನಲ್ಲಿ ಲಭ್ಯವಾಗಲಿದೆ.

ಉನ್ನತ ಹಂತದ ಕಲಿಕೆಗಾಗಿ ಇತರ ಶಿಕ್ಷಣ ಸಂಸ್ಥೆಯಲ್ಲಿ ಅಡ್ಮಿಷನ್ ಮಾಡಿಸಿಕೊಳ್ಳಲು ಬಯಸುವವರಿಗೆ ವಲಸೆ ಪ್ರಮಾಣಪತ್ರದ ಸಾಫ್ಟ್ ಕಾಪಿ ಸಹಕಾರಿಯಾಗಲಿದೆ. ಸುಲಭವಾಗಿ ವೆಬ್ ವೆರಿಫಿಕೇಷನ್​ಗೆ ವಲಸೆ ಪ್ರಮಾಣಪತ್ರ ನೀಡಬಹುದಾಗಿದೆ.

ವಿದ್ಯಾರ್ಥಿಗಳು ಗಮನಿಸಿ -ವಲಸೆ ಪ್ರಮಾಣಪತ್ರದ ಹಾರ್ಡ್ ಕಾಪಿ 2024ರಿಂದ ಸಂಪೂರ್ಣವಾಗಿ ನಿಲ್ಲಲಿದೆ. ಆ ಬಳಿಕ ಸಾಫ್ಟ್ ಕಾಪಿ ಮಾತ್ರ ಪಡೆಯಬಹುದು. -CBSE 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮೇ 4, 2021ರಿಂದ ಆರಂಭವಾಗಲಿದೆ. -CBSE 10 ಹಾಗೂ 12ನೇ ತರಗತಿ ಪರೀಕ್ಷೆಯ ದಿನನಿತ್ಯದ ಅಪ್​ಡೇಟ್​ಗಾಗಿ CBSE ಇಲಾಖೆಯ ಅಧಿಕೃತ ವೆಬ್​ಸೈಟ್ cbse.gov.in ಗೆ ಭೇಟಿ ನೀಡುತ್ತಿರಿ.

ಇದನ್ನೂ ಓದಿ: CBSE Board Exam 2021: 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಬಹುದು. ಇಲ್ಲಿದೆ ವಿವರ

ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

Published On - 5:22 pm, Fri, 26 March 21

ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ