AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 10 Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ; ಆನ್​ಲೈನ್​ ಮೂಲಕ ರಿಸಲ್ಟ್ ನೋಡಲು ಹೀಗೆ ಮಾಡಿ..

ಸಿಬಿಎಸ್​ಸಿ ಫಲಿತಾಂಶ 2021: ಈ ಬಾರಿ ಕೊವಿಡ್​ 19 ಕಾರಣದಿಂದ ಸಿಬಿಎಸ್​ಇ ಪರೀಕ್ಷೆಯೇ ಇಲ್ಲದೆ ಕಾರಣ ಫಲಿತಾಂಶಕ್ಕೆ ಸಂಬಂಧಪಟ್ಟು ಗೊಂದಲಗಳು ಎದ್ದಿದ್ದವು. ಅಷ್ಟೇ ಅಲ್ಲ, ಫಲಿತಾಂಶದ ದಿನಾಂಕ ಕೂಡ ಪದೇಪದೆ ಮುಂದೂಡಲ್ಪಟ್ಟಿತ್ತು.

CBSE Class 10 Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ; ಆನ್​ಲೈನ್​ ಮೂಲಕ ರಿಸಲ್ಟ್ ನೋಡಲು ಹೀಗೆ ಮಾಡಿ..
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Aug 03, 2021 | 12:11 PM

Share

ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result 2021) ಪ್ರಕಟವಾಗಿದೆ. ನಿನ್ನೆ ಆಗಸ್ಟ್​ 2ರಂದೇ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಮುಂದೂಡಲ್ಪಟ್ಟಿತ್ತು. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ 10ನೇ ತರಗತಿ ಫಲಿತಾಂಶ (CBSE Class 10 Result 2021) ಪ್ರಕಟಿಸುವುದಾಗಿ ಸಿಬಿಎಸ್​ಇ(CBSE) ತನ್ನ ಅಧಿಕೃತ ಟ್ವಿಟರ್ ಅಕೌಂಟ್​ನಲ್ಲಿ ಅಪ್​ಡೇಟ್​ ಮಾಡಿತ್ತು.  ಹಾಗೇ, ಇಂದು ಸುಮಾರು 20 ಲಕ್ಷ ವಿದ್ಯಾರ್ಥಿಗಳು ತಮ್ಮ ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ಪಡೆದಿದ್ದಾರೆ. ಹಾಗೇ, ಈ ಫಲಿತಾಂಶವನ್ನು ಆನ್​ಲೈನ್ ಮೂಲಕವೇ ವೀಕ್ಷಿಸಬಹುದಾಗಿದೆ. ಸಿಬಿಎಸ್​ಇಯ ವೆಬ್​ಸೈಟ್​ಗಳು, ಆ್ಯಪ್​ಗಳು, ಡಿಜಿಲಾಕರ್​ ಮೂಲಕ ವಿದ್ಯಾರ್ಥಿಗಳಿಗೆ ರಿಸಲ್ಟ್ ನೋಡುವ ಅವಕಾಶ ಕಲ್ಪಿಸಲಾಗಿದೆ.

ಸಿಬಿಎಸ್​ಇ 10ನೇ ತರಗತಿ ಫಲಿತಾಂಶ(CBSE Class 10 Result 2021)ವನ್ನು http://cbseresults.nic.in  ವೆಬ್​ಸೈಟ್​ ಮೂಲಕ ವೀಕ್ಷಿಸುವ ವಿಧಾನ ಇಲ್ಲಿದೆ..ನೋಡಿ

1. ಮೊದಲು cbseresults.nic.in ವೆಬ್​ಸೈಟ್​ಗೆ ಭೇಟಿ ನೀಡಿ 2. ಅಲ್ಲಿ ಕಾಣಿಸುವ  CBSE Class 10 ರಿಸಲ್ಟ್ ಲಿಂಕ್​ ಮೇಲೆ ಕ್ಲಿಕ್​ ಮಾಡಿ. 3. ನಂತರ ನಿಮ್ಮ ರಿಜಿಸ್ಟರ್​ ನಂಬರ್​ ಮತ್ತು ರೋಲ್​ನಂಬರ್​ ಸೇರಿ, ಉಳಿದೆಲ್ಲ ವಿವರಗಳನ್ನೂ ದಾಖಲಿಸಿ ಲಾಗಿನ್​ ಆಗಿ. 4. ಆಗ ಸ್ಕ್ರೀನ್​ ಮೇಲೆ ನಿಮ್ಮ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಕಾಣಿಸುತ್ತದೆ 5. ಆ ಮಾರ್ಕ್​ಶೀಟ್​ನ್ನು ಡೌನ್​ಲೋಡ್ ಮಾಡಿಕೊಳ್ಳಿ. ಪ್ರಿಂಟ್ ಕೂಡ ತೆಗೆದುಕೊಳ್ಳಿ

ಇದೇ ವಿಧಾನದಲ್ಲಿ cbse.nic.in ಮೂಲಕವೂ ನಿಮ್ಮ ರಿಸಲ್ಟ್ ನೋಡಬಹುದಾಗಿದೆ.

ಡಿಜಿಲಾಕರ್ ಆ್ಯಪ್ ಮೂಲಕ ಫಲಿತಾಂಶ ವೀಕ್ಷಣೆ ಹೇಗೆ? ಇಲ್ಲಿದೆ ನೋಡಿ.. 1. ಡಿಜಿಲಾಕರ್ (DigiLocker) ಆ್ಯಪ್​ ಡೌನ್​ಲೋಡ್ ಮಾಡಿಕೊಳ್ಳಿ 2. Access DigiLocker ಎಂದಿರುವಲ್ಲಿ ಕ್ಲಿಕ್​ ಮಾಡಿ 3. ನಂತರ ಅಲ್ಲಿ ನಿಮ್ಮ ಹೆಸರು ನಮೂದಿಸಬೇಕು. ಆಧಾರ್​ ಕಾರ್ಡ್​ನಲ್ಲಿ ಹೇಗೆ ಹೆಸರು ಇದೆಯೋ, ಹಾಗೇ ನಮೂದಿಸಬೇಕು. 4. ಅದಾದ ಬಳಿಕ ಆಧಾರ್​ಕಾರ್ಡ್​ನಲ್ಲಿರುವಂತೆ, ನಿಮ್ಮ ಹುಟ್ಟಿದ ದಿನ, ಇಸ್ವಿ ನಮೂದಿಸಿ 5. ಪುರುಷ/ಮಹಿಳೆ..ಎಂಬಿರುವಲ್ಲಿ ನಿಮ್ಮ ಜಂಡರ್ ಯಾವುದೆಂದು ಆಯ್ಕೆ ಮಾಡಿ 6. ನಿಮ್ಮ ಮೊಬೈಲ್​ ನಂಬರ್ ನಮೂದಿಸಿ 7. ಒಂದು ಸೆಕ್ಯೂರಿಟಿ ಪಿನ್​ ಸೆಟ್​ ಮಾಡಿಕೊಳ್ಳಿ 8. ಆಧಾರ್ ನಂಬರ್​, ಇಮೇಲ್​ ಐಡಿಗಳನ್ನೆಲ್ಲ ನಮೂದಿಸಿ, ಸಬ್​ಮಿಟ್ ಮಾಡಿ. 9. ಅದಾದ ಬಳಿಕ ಯೂಸರ್​ ನೇಮ್​ ಸೆಟ್ ಮಾಡಿಕೊಳ್ಳಿ. ಇಷ್ಟಾದ ಬಳಿಕ ನೀವು ಸುಲಭವಾಗಿ ನಿಮ್ಮ ರಿಸಲ್ಟ್ ಪಡೆಯಬಹುದು.

ಈ ಬಾರಿ ಕೊವಿಡ್​ 19 ಕಾರಣದಿಂದ ಸಿಬಿಎಸ್​ಇ ಪರೀಕ್ಷೆಯೇ ಇಲ್ಲದೆ ಕಾರಣ ಫಲಿತಾಂಶಕ್ಕೆ ಸಂಬಂಧಪಟ್ಟು ಗೊಂದಲಗಳು ಎದ್ದಿದ್ದವು. ಅಷ್ಟೇ ಅಲ್ಲ, ಫಲಿತಾಂಶದ ದಿನಾಂಕ ಕೂಡ ಪದೇಪದೆ ಮುಂದೂಡಲ್ಪಟ್ಟಿತ್ತು. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಜು.20ರಂದು ಫಲಿತಾಂಶವನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಈ ಬಾರಿ ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಅಂಕ ಕೊಡುವ ಕಾರಣ, ಶಾಲೆಗಳಿಂದ ಅಂಕಗಳು ತಲುಪುವುದು ವಿಳಂಬವಾಯಿತು. ಈ ಮಧ್ಯೆ ಸಿಬಿಎಸ್​ಇ 12ನೇ ತರಗತಿ ಫಲಿತಾಂಶವನ್ನು ಜು.31ರೊಳಗೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಗಡುವು ನೀಡಿದ್ದರಿಂದ, ಶುಕ್ರವಾರ ಅದನ್ನು ಪ್ರಕಟಿಸಿ, 10ನೇ ತರಗತಿ ಫಲಿತಾಂಶವನ್ನು ಮತ್ತೆ ಮುಂದೂಡಲಾಗಿತ್ತು.

ಇದನ್ನೂ ಓದಿ: ತಣ್ಣೀರು ತರಲು ಚಿತಾಗಾರಕ್ಕೆ ಹೋದ 7 ವರ್ಷದ ಬಾಲಕಿ; ಮುಂದಾಗಿದ್ದೆಲ್ಲ ಊಹಿಸಲಾರದಷ್ಟು ಭೀಕರ

ಒಂದೇ ಸಿನಿಮಾ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​-ಜಾನ್​ ಅಬ್ರಾಹಂ; ಮಲಯಾಳಂ ಚಿತ್ರಕ್ಕೆ ಸ್ಟಾರ್​ ನಟರು ಫಿದಾ

Published On - 12:01 pm, Tue, 3 August 21

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ