AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 10 Result 2021: ಇಂದು ಮಧ್ಯಾಹ್ನ 12ಗಂಟೆಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ..

ಈ ಬಾರಿ ಕೊವಿಡ್​ 19 (Covid 19) ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ಸಿಬಿಎಸ್​ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲಾಗುತ್ತಿದೆ.

CBSE Class 10 Result 2021: ಇಂದು ಮಧ್ಯಾಹ್ನ 12ಗಂಟೆಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ..
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Aug 03, 2021 | 11:01 AM

Share

ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result )ಇಂದು ಘೋಷಣೆಯಾಗಲಿದೆ. ಈ ಬಗ್ಗೆ ಸಿಬಿಎಸ್​ಇ ಎಚ್​ಕ್ಯೂ ಟ್ವೀಟ್ ಮಾಡಿದೆ. ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ನಿನ್ನೆ ಅಂದರೆ ಆಗಸ್ಟ್​ 2ಕ್ಕೆ ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಮುಂದೂಡಲ್ಪಟ್ಟಿತ್ತು. ಆದರೆ ಇಂದು ಮಧ್ಯಾಹ್ನ 12 ಗಂಟೆಹೊತ್ತಿಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result )ಪ್ರಕಟವಾಗುವುದು ಪಕ್ಕಾ ಆಗಿದೆ. ಇನ್ನು ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಶುಕ್ರವಾರವೇ ಘೋಷಣೆಯಾಗಿದೆ. ಈ ಬಾರಿ ಕೊವಿಡ್​ 19 (Covid 19) ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ಅಂಕಗಳನ್ನು ನೀಡಲಾಗುತ್ತಿದೆ. ಹಾಗೊಮ್ಮೆ ರಿಸಲ್ಟ್​ ಬಂದ ಮೇಲೆ ಯಾವುದೇ ವಿದ್ಯಾರ್ಥಿಗೆ ತಮ್ಮ ಅಂಕದಿಂದ ಸಮಾಧಾನ ಆಗದೆ ಇದ್ದರೆ, ಕೊವಿಡ್ 19 ಪರಿಸ್ಥಿತಿ ಸುಧಾರಿಸಿದ ಮೇಲೆ ನಡೆಸಲಿರುವ ಪರೀಕ್ಷೆಗಳನ್ನು ಬರೆಯಲು, ತಮ್ಮ ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು https://cbseresults.nic.in ಅಥವಾ https://cbse.gov.in ಅಥವಾ Digi Locker (ಡಿಜಿಲಾಕರ್​) ಮೂಲಕ ತಮ್ಮ ರಿಸಲ್ಟ್ ವೀಕ್ಷಿಸಬಹುದಾಗಿದೆ. ಹಾಗೇ, ರೋಲ್​ ನಂಬರ್​ ಪಡೆಯಲು https://cbseit.in/cbse/2021/rfinder/landing.aspx ಗೆ ಭೇಟಿಕೊಡಬಹುದು.

CBSE Class X Results to be announced today at 12 Noon.#CBSEResults #CBSE pic.twitter.com/LJU1MUaB4Z

— CBSE HQ (@cbseindia29) August 3, 2021

Published On - 10:53 am, Tue, 3 August 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್