AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 10th Result 2022: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ

ಸೆಂಟ್ರಲ್ ಬೋರ್ಡ್​ ಆಫ್ ಸೆಕೆಂಡರಿ ಎಜುಕೇಷನ್ , ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ.

CBSE 10th Result 2022: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ
CBSE
TV9 Web
| Edited By: |

Updated on:Jul 22, 2022 | 3:24 PM

Share

ಸೆಂಟ್ರಲ್ ಬೋರ್ಡ್​ ಆಫ್ ಸೆಕೆಂಡರಿ ಎಜುಕೇಷನ್ , ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್​ಇಯ ಅಧಿಕೃತ ವೆಬ್​ಸೈಟ್​ cbse.gov.in ನಲ್ಲಿ ಪರಿಶೀಲಿಸಬಹುದು.

ಹಾಗೆಯೇ ಸಿಬಿಎಸ್​ಇ 10ನೇ ತರಗತಿ ವಿದ್ಯಾರ್ಥಿಗಳು ವೆಬ್​ಸೈಟ್​ಗಳಾದ sbseresults.nic.in, parikshasangam.cbse.gov.in ಹಾಗೂ results.cbse.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಸಿಬಿಎಸ್​ಇಯ ಹತ್ತನೇ ತರಗತಿಯಲ್ಲಿ ಶೇ.94.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರು ಹುಡುಗರಿಗಿಂತ ಶೇ.1.41ರಷ್ಟು ಸಾಧನೆ ಮಾಡಿದ್ದಾರೆ.

ಹಾಗೆಯೇ 64,908 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚಿನ ಅಂಕಗಳಿಸಿದ್ದು, 2.36 ಲಕ್ಷ ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿಬಿಎಸ್​ಇಯ 10ನೇ ತರಗತಿ ಪರೀಕ್ಷೆಯು ಏಪ್ರಿಲ್ 26ರಿಂದ ಮೇ 4 ರವರೆಗೆ ನಡೆದಿತ್ತು. ವಿದ್ಯಾರ್ಥಿಗಳು ಫಲಿತಾಂಶವನ್ನು ಡಿಜಿಲಾಕರ್​ನಲ್ಲಿ ಹಾಗೂ ಎಸ್​ಎಂಎಸ್​ ಮೂಲಕವೂ ಪಡೆಯಬಹುದಾಗಿದೆ.

ಸಿಬಿಎಸ್​ಇಯು ಬೆಳಗ್ಗೆಯಷ್ಟೇ ತನ್ನ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿತ್ತು. ಹುಡುಗಿಯರ ಉತ್ತೀರ್ಣತೆಯು ಶೇಕಡಾ 95.21 ರಷ್ಟಿದ್ದರೆ, ಶೇಕಡಾ 93.80 ರಷ್ಟು ಹುಡುಗರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ತೃತೀಯಲಿಂಗಿ ಅಭ್ಯರ್ಥಿಗಳ ತೇರ್ಗಡೆ ಪ್ರಮಾಣ ಶೇ.90 ರಷ್ಟಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರವು ಹೊರಡಿಸಿದ ಎಲ್ಲಾ COVID19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಯನ್ನು ನಡೆಸಲಾಯಿತು. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು CBSE ಯ ಅಧಿಕೃತ ಸೈಟ್ ಅನ್ನು ಪರಿಶೀಲಿಸಬಹುದು.

CBSE 10 ನೇ ಫಲಿತಾಂಶ ವೀಕ್ಷಿಸುವುದು ಹೇಗೆ?

-cbse.gov.in ನಲ್ಲಿ CBSE ಯ ಅಧಿಕೃತ ಸೈಟ್‌ಗೆ ಭೇಟಿ ನೀಡಿ. -ಫಲಿತಾಂಶ ವಿಭಾಗದ ಮೇಲೆ ಕ್ಲಿಕ್ ಮಾಡಿ ಮತ್ತು ಹೊಸ ವೆಬ್‌ಸೈಟ್ ತೆರೆಯುತ್ತದೆ. -ಮುಖಪುಟದಲ್ಲಿ ಲಭ್ಯವಿರುವ 10 ನೇ ತರಗತಿಯ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ. -ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಬ್​ಮಿಟ್​ ಕ್ಲಿಕ್ ಮಾಡಿ. -ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ವೀಕ್ಷಿಸಬಹುದು -ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ. -ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ

Published On - 2:59 pm, Fri, 22 July 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ