AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್​ಇ 12ನೇ ತರಗತಿ ಫಲಿತಾಂಶವು 30:30:40 ಮಾದರಿಯಲ್ಲಿರಲಿದೆ; ಸುಪ್ರೀಂಗೆ ಮಾಹಿತಿ ನೀಡಿರುವ ಬೋರ್ಡ್​

CBSE Class 12 Exam: 10 ಮತ್ತು 11ನೇ ತರಗತಿಯಿಂದ ಪರಿಗಣಿಸಲ್ಪಡುವ ಶೇ.60ರಷ್ಟು ಅಂಕಗಳಲ್ಲಿ ಶೇ.30ರಷ್ಟು ಅಂಕ 11ನೇ ತರಗತಿಯ ಅಂತಿಮ ಪರೀಕ್ಷೆಯದ್ದಾಗಿರಲಿದ್ದು, ಇನ್ನುಳಿದ ಶೇ.30ರಷ್ಟು ಅಂಕ 10ನೇ ತರಗತಿಗಳಲ್ಲಿ ನಡೆಸಲಾದ ಪರೀಕ್ಷೆಗಳಿಂದ ಬೆಸ್ಟ್ ಆಫ್​ ತ್ರೀ ಮಾದರಿಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಬೋರ್ಡ್​ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಿಬಿಎಸ್​ಇ 12ನೇ ತರಗತಿ ಫಲಿತಾಂಶವು 30:30:40 ಮಾದರಿಯಲ್ಲಿರಲಿದೆ; ಸುಪ್ರೀಂಗೆ ಮಾಹಿತಿ ನೀಡಿರುವ ಬೋರ್ಡ್​
ಸುಪ್ರೀಂ​ ಕೋರ್ಟ್
TV9 Web
| Edited By: |

Updated on:Jun 17, 2021 | 12:55 PM

Share

ದೆಹಲಿ: ಸಿಬಿಎಸ್​ಇ 12ನೇ ತರಗತಿಯ ಫಲಿತಾಂಶ ಜುಲೈ 31ರ ಹಾಗೆ ಪ್ರಕಟವಾಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಫಲಿತಾಂಶಕ್ಕೆ ಸಂಬಂಧಿಸಿದಂತೆ ಅಂಕ ಪರಿಗಣನೆಯ ಮಾನದಂಡದ ಕುರಿತು ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡುತ್ತಿರುವ ಸಿಬಿಎಸ್​ಇ ಬೋರ್ಡ್​, 12ನೇ ತರಗತಿ ಮಕ್ಕಳ ಅಂಕವನ್ನು 11ನೇ ತರಗತಿ ಮತ್ತು 10ನೇ ತರಗತಿ ಪರೀಕ್ಷಾ ಫಲಿತಾಂಶದ ಸಹಾಯದೊಂದಿಗೆ ನಿರ್ಧರಿಸುವುದಾಗಿ ತಿಳಿಸಿದೆ. ಅಲ್ಲದೇ, ಒಟ್ಟಾರೆ ಫಲಿತಾಂಶಕ್ಕೆ 12ನೇ ತರಗತಿ ಮಕ್ಕಳ ಈ ಹಿಂದಿನ ಪೂರ್ವ ಸಿದ್ಧತಾ ಪರೀಕ್ಷೆಗಳ ಅಂಕವೂ ಪರಿಗಣಿಸಲ್ಪಡುತ್ತದೆ ಎಂದು ಮಾಹಿತಿ ನೀಡಿದೆ.

ಈ ಪೈಕಿ ಶೇ.40ರಷ್ಟು ಅಂಕವು 12ನೇ ತರಗತಿಯಲ್ಲಿ ನಡೆಸಲಾದ ಬೇರೆ ಪರೀಕ್ಷೆಗಳ ಆಧಾರದಿಂದ ಪರಿಗಣಿಸಲ್ಪಟ್ಟರೆ ಶೇ.60ರಷ್ಟು ಅಂಕವು 11 ಹಾಗೂ 10ನೇ ತರಗತಿಯ ಪರೀಕ್ಷೆಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸುಪ್ರೀಂಕೋರ್ಟ್​ಗೆ ತಿಳಿಸಲಾಗಿದೆ. ನ್ಯಾಯಮೂರ್ತಿ ಎ ಎಂ ಖಾನ್​ವಿಲ್ಕರ್ ಹಾಗೂ ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠವು ಬೋರ್ಡ್​ನ ಅಭಿಪ್ರಾಯವನ್ನು ಇಂದು (ಜೂನ್ 17) ಆಲಿಸುತ್ತಿದ್ದು, ಶೀಘ್ರದಲ್ಲಿ ಸ್ಪಷ್ಟ ಚಿತ್ರಣ ದೊರಕಲಿದೆ.

ಈ ಮಾನದಂಡದ ಆಧಾರದಲ್ಲಿ ಫಲಿತಾಂಶ ನೀಡುವ ಬಗ್ಗೆ 13 ಸದಸ್ಯರ ಸಮಿತಿ ಸಿಬಿಎಸ್​ಇಗೆ ಶಿಫಾರಸು ಮಾಡಿದ್ದು, ಇಂದು ಈ ಬಗ್ಗೆ ಸುಪ್ರೀಂಕೋರ್ಟ್​ಗೆ ಸಿಬಿಎಸ್ಇ ತನ್ನ ತೀರ್ಮಾನ ತಿಳಿಸುತ್ತಿದೆ. ಸದ್ಯ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಆರಂಭವಾಗಿದ್ದು, ಸಿಬಿಎಸ್ಇ ಪರ ಅಟಾರ್ನಿ ಜನರಲ್ ಕೆ.ಕೆ‌.ವೇಣುಗೋಪಾಲ್ ವಾದ ಮಂಡಿಸುತ್ತಿದ್ದಾರೆ. 1929 ರಿಂದ ಸಿಬಿಎಸ್ಇ ಆಸ್ತಿತ್ವದಲ್ಲಿದೆ, ಈ ರೀತಿಯ ಪರಿಸ್ಥಿತಿ ಹಿಂದೆಂದೂ ಬಂದಿರಲಿಲ್ಲ ಎಂದು ತಿಳಿಸಿದ್ದಾರೆ.

ಸಿಬಿಎಸ್ಇ, ಐಸಿಎಸ್ಇ ಫಲಿತಾಂಶದ ಮಾನದಂಡದ ವಿವರ ನೀಡಿದ್ದಾರೆ. ಅದನ್ನು ಈಗ ಸಿಬಿಎಸ್ಇ ಪರ ವಕೀಲರು ವಿವರಿಸಲಿ ಎಂದು ಸುಪ್ರೀಂಕೋರ್ಟ್​ ಅಪೇಕ್ಷಿಸಿದ್ದು, ನ್ಯಾಯಮೂರ್ತಿ ಎ ಎಂ ಖಾನ್​ವಿಲ್ಕರ್ ಹಾಗೂ ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.

30:30:40 ರ ಅನುಪಾತದಲ್ಲಿ ಅಂಕ ನೀಡಿ 12 ನೇ ತರಗತಿಯ ಫಲಿತಾಂಶ ಪ್ರಕಟ 10 ಮತ್ತು 11ನೇ ತರಗತಿಯಿಂದ ಪರಿಗಣಿಸಲ್ಪಡುವ ಶೇ.60ರಷ್ಟು ಅಂಕಗಳಲ್ಲಿ ಶೇ.30ರಷ್ಟು ಅಂಕ 11ನೇ ತರಗತಿಯ ಅಂತಿಮ ಪರೀಕ್ಷೆಯದ್ದಾಗಿರಲಿದ್ದು, ಇನ್ನುಳಿದ ಶೇ.30ರಷ್ಟು ಅಂಕ 10ನೇ ತರಗತಿಗಳಲ್ಲಿ ನಡೆಸಲಾದ ಪರೀಕ್ಷೆಗಳಿಂದ ಬೆಸ್ಟ್ ಆಫ್​ ತ್ರೀ ಮಾದರಿಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಬೋರ್ಡ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಮಾದರಿಯನ್ನು ಅನುಸರಿಸಿದ ನಂತರವೂ ಯಾರೂ ಉತ್ತೀರ್ಣರಾಗುವ ಹಂತ ತಲುಪುವುದಿಲ್ಲವೋ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಜತೆಗೆ, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿರುವ ವಿದ್ಯಾರ್ಥಿಗಳು ಕೂಡಾ ಪರಿಸ್ಥಿತಿ ತಿಳಿಯಾದ ನಂತರ ಪರೀಕ್ಷೆ ಬರೆಯಲು ಅವಕಾಶ ಪಡೆಯವಬಹುದು ಎಂದು ಹೇಳಲಾಗಿದೆ.

ಕೊರೊನಾ ಕಾರಣದಿಂದ ಈ ಬಾರಿ 12ನೇ ತರಗತಿ ಪರೀಕ್ಷೆ ರದ್ದಾದ ನಂತರ ಫಲಿತಾಂಶ ಪ್ರಕಟಣೆ ಬಗ್ಗೆ ಬೋರ್ಡ್​ ಸಾಕಷ್ಟು ಚಿಂತೆ ಮಾಡಿತ್ತು. ಪರೀಕ್ಷೆ ನಡೆಸದಿದ್ದರೂ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬಲ್ಲ ಫಲಿತಾಂಶ ನೀಡಲಿದ್ದೇವೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಪಾರದರ್ಶಕವಾಗಿ ಅಂಕ ನೀಡುವುದಾಗಿ ಭರವಸೆ ನೀಡಿತ್ತು.

ಇದನ್ನೂ ಓದಿ: CBSE 12th Board Exam 2021: 12 ನೇ ತರಗತಿಯ ಸಿಬಿಎಸ್‌ಇ, ಸಿಐಎಸ್‌ಸಿಇ ಪರೀಕ್ಷೆ ರದ್ದು: ಪ್ರಧಾನಿ ಮೋದಿ

Published On - 12:48 pm, Thu, 17 June 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?