AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಕಗಳ ಮರುಪರಿಶೀಲನೆ, ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

2026ರ ಸಿಬಿಎಸ್‌ಇ 12ನೇ ತರಗತಿ ಬೋರ್ಡ್ ಪರೀಕ್ಷೆಯ ಅಂಕಗಳ ಮರುಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗೆ ಪೋರ್ಟಲ್ ಆರಂಭವಾಗಿದೆ. ಜೂನ್ 6 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶುಲ್ಕದಲ್ಲಿ ಕಡಿತಗೊಳಿಸಲಾಗಿದ್ದು, ಅಂಕಗಳು ಹೆಚ್ಚಾದಲ್ಲಿ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

CBSE 12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಕಗಳ ಮರುಪರಿಶೀಲನೆ, ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
CBSE 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್Image Credit source: Pinterest
ಅಕ್ಷತಾ ವರ್ಕಾಡಿ
|

Updated on: Jun 02, 2026 | 11:24 AM

Share

ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. 2026ರ ಬೋರ್ಡ್ ಪರೀಕ್ಷೆಯ ಅಂಕಗಳ ಮರುಪರಿಶೀಲನೆ (Verification of Marks) ಮತ್ತು ಪ್ರಶ್ನೆವಾರು ಮರುಮೌಲ್ಯಮಾಪನ (Re-evaluation) ಪ್ರಕ್ರಿಯೆಯ ಪೋರ್ಟಲ್ ಇಂದು ಅಧಿಕೃತವಾಗಿ ಆರಂಭವಾಗಿದೆ. ತಾಂತ್ರಿಕ ನವೀಕರಣಗಳ ನಂತರ ಸದ್ಯ ಪೋರ್ಟಲ್ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 6 ರವರೆಗೆ ಕಾಲಾವಕಾಶ:

ಸಿಬಿಎಸ್‌ಇ ಪ್ರಕಟಣೆಯ ಪ್ರಕಾರ, ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜೂನ್ 6 ಮಧ್ಯರಾತ್ರಿಯವರೆಗೆ ಅವಕಾಶ ಕಲ್ಪಿಸಲಾಗಿದೆ. ಕೊನೆಯ ದಿನದಂದು ಸರ್ವರ್ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ, ವಿದ್ಯಾರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ನೆರವಾಗಲು ಸಿಬಿಎಸ್‌ಇ ಹಂತ-ಹಂತವಾಗಿ ಅರ್ಜಿ ಸಲ್ಲಿಸುವ ವೀಡಿಯೊ ಮಾರ್ಗದರ್ಶನವನ್ನೂ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಪರಿಷ್ಕೃತ ಶುಲ್ಕ ಪಟ್ಟಿ ಮತ್ತು ಹಣ ವಾಪಸಾತಿ ನಿಯಮ:

ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಈ ಬಾರಿ ಸಿಬಿಎಸ್‌ಇ ತನ್ನ ಶುಲ್ಕದಲ್ಲಿ ಭಾರಿ ಕಡಿತ ಮಾಡಿದೆ. ಅಂಕಗಳ ಮರುಪರಿಶೀಲನೆಗೆ (Verification) ಪ್ರತಿ ಉತ್ತರ ಪತ್ರಿಕೆಗೆ 100 ರೂಪಾಯಿ ಹಾಗೂ ಮರುಮೌಲ್ಯಮಾಪನಕ್ಕೆ (Re-evaluation) ಪ್ರತಿ ಪ್ರಶ್ನೆಗೆ 25 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಅಷ್ಟೇ ಅಲ್ಲದೆ, ಒಂದು ವೇಳೆ ಮರುಮೌಲ್ಯಮಾಪನದಲ್ಲಿ ಅಂಕಗಳು ಹೆಚ್ಚಾದರೆ ವಿದ್ಯಾರ್ಥಿಗಳು ಪಾವತಿಸಿದ ಈ ಶುಲ್ಕವನ್ನು ಪೂರ್ತಿಯಾಗಿ ರೀಫಂಡ್ (ಹಣ ವಾಪಸ್) ಮಾಡಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು?

ಈ ಹಂತದಲ್ಲಿ ಅರ್ಜಿ ಸಲ್ಲಿಸಲು ಒಂದು ಪ್ರಮುಖ ನಿಯಮವನ್ನು ಅನ್ವಯಿಸಲಾಗಿದೆ. ಈಗಾಗಲೇ ತಮ್ಮ ಉತ್ತರ ಪತ್ರಿಕೆಯ ಡಿಜಿಟಲ್ ಸ್ಕ್ಯಾನ್ಡ್ ಪ್ರತಿಯನ್ನು (Stage 1) ಪಡೆದುಕೊಂಡ ವಿದ್ಯಾರ್ಥಿಗಳು ಮಾತ್ರ ಈಗ ಈ ಹಂತದಲ್ಲಿ (Stage 2) ನಿರ್ದಿಷ್ಟ ಪ್ರಶ್ನೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ನೇರವಾಗಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಪೋರ್ಟಲ್‌ನಲ್ಲಿ ಅವಕಾಶವಿರುವುದಿಲ್ಲ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸರಳ ವಿಧಾನ:

ವಿದ್ಯಾರ್ಥಿಗಳು ಮೊದಲಿಗೆ ಸಿಬಿಎಸ್‌ಇಯ ಅಧಿಕೃತ ಪೋರ್ಟಲ್ postresult.cbseit.in/pvr/ ಗೆ ಭೇಟಿ ನೀಡಬೇಕು. ಅಲ್ಲಿ ನಿಮ್ಮ ಅಡ್ಮಿಟ್ ಕಾರ್ಡ್‌ನಲ್ಲಿರುವ 12ನೇ ತರಗತಿಯ ರೋಲ್ ನಂಬರ್ (Roll Number), ಸ್ಕೂಲ್ ನಂಬರ್ (School No.) ಮತ್ತು ಸೆಂಟರ್ ನಂಬರ್ (Center No.) ವಿವರಗಳನ್ನು ದಾಖಲಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ, ನೀವು ಮರುಮೌಲ್ಯಮಾಪನ ಬಯಸುವ ಪ್ರಶ್ನೆ ಸಂಖ್ಯೆಗಳನ್ನು ನಿಖರವಾಗಿ ಆಯ್ಕೆ ಮಾಡಿ, ಡೆಬಿಟ್/ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ ಯುಪಿಐ (UPI) ಮೂಲಕ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿ ಅಪ್ಲಿಕೇಶನ್ ಸಬ್ಮಿಟ್ ಮಾಡಬಹುದು.

ವಿದ್ಯಾರ್ಥಿಗಳ ಸಹಾಯಕ್ಕಾಗಿ ಹೆಲ್ಪ್‌ಲೈನ್ ವಿವರಗಳು:

ಅರ್ಜಿ ಸಲ್ಲಿಸುವಾಗ ಲಾಗಿನ್ ಸಮಸ್ಯೆ ಅಥವಾ ಆನ್‌ಲೈನ್ ಹಣ ಪಾವತಿ ವಿಫಲವಾದರೆ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ವಿದ್ಯಾರ್ಥಿಗಳ ನೆರವಿಗಾಗಿ ಮಂಡಳಿಯು ಟೋಲ್-ಫ್ರೀ ಸಹಾಯವಾಣಿ ಸಂಖ್ಯೆ 1800 11 8004 ಅನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ resultcbse2026@cbseshiksha.in ಇಮೇಲ್ ಐಡಿ ಮೂಲಕವೂ ವಿದ್ಯಾರ್ಥಿಗಳು ತಮ್ಮ ದೂರುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?