AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್​ಇ 12ನೇ ತರಗತಿಗೆ ಆಫ್​ಲೈನ್​ ಪರೀಕ್ಷೆ ಪ್ರಶ್ನಿಸಿ ಭಾರತದ ಮುಖ್ಯ ನ್ಯಾಯಮೂರ್ತಿಯವರಿಗೆ 300ಕ್ಕೂ ಹೆಚ್ಚು ಮಕ್ಕಳಿಂದ ಅರ್ಜಿ

CBSE 12th Board Exams 2021: ದೇಶದೆಲ್ಲೆಡೆ ಕೊರೊನಾ ವ್ಯಾಪಿಸಿರುವ ಸಂದರ್ಭದಲ್ಲಿ ಆಫ್​ಲೈನ್​ ಪರೀಕ್ಷೆ ನಡೆಸುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿರುವ ವಿದ್ಯಾರ್ಥಿಗಳು ಶಿಕ್ಷಣ ಮಂಡಳಿಯ ನಿರ್ಧಾರವನ್ನು ರದ್ದುಗೊಳಿಸಬೇಕೆಂದು ಕೋರಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮೊರೆ ಹೋಗಿದ್ದಾರೆ.

ಸಿಬಿಎಸ್​ಇ 12ನೇ ತರಗತಿಗೆ ಆಫ್​ಲೈನ್​ ಪರೀಕ್ಷೆ ಪ್ರಶ್ನಿಸಿ ಭಾರತದ ಮುಖ್ಯ ನ್ಯಾಯಮೂರ್ತಿಯವರಿಗೆ 300ಕ್ಕೂ ಹೆಚ್ಚು ಮಕ್ಕಳಿಂದ ಅರ್ಜಿ
ಪ್ರಾತಿನಿಧಿಕ ಚಿತ್ರ
Follow us
Skanda
|

Updated on: May 26, 2021 | 9:31 AM

ದೆಹಲಿ: ಕೊರೊನಾತಂಕದ ನಡುವೆಯೇ 12ನೇ ತರಗತಿಯ ಮಕ್ಕಳಿಗೆ ಆಫ್​ಲೈನ್​ ಪರೀಕ್ಷೆ ನಡೆಸಲು ನಿರ್ಧರಿಸಿರುವ ಸಿಬಿಎಸ್​ಇ ಬೋರ್ಡ್​ ನಿರ್ಣಯವನ್ನು ಪ್ರಶ್ನಿಸಿ ಸುಮಾರು 300 ವಿದ್ಯಾರ್ಥಿಗಳು ಭಾರತದ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದಾರೆ. ದೇಶದೆಲ್ಲೆಡೆ ಕೊರೊನಾ ವ್ಯಾಪಿಸಿರುವ ಸಂದರ್ಭದಲ್ಲಿ ಆಫ್​ಲೈನ್​ ಪರೀಕ್ಷೆ ನಡೆಸುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿರುವ ವಿದ್ಯಾರ್ಥಿಗಳು ಶಿಕ್ಷಣ ಮಂಡಳಿಯ ನಿರ್ಧಾರವನ್ನು ರದ್ದುಗೊಳಿಸಬೇಕೆಂದು ಕೋರಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮೊರೆ ಹೋಗಿದ್ದಾರೆ.

ಅರ್ಜಿಯಲ್ಲಿ ಆಫ್​ಲೈನ್ ಪರೀಕ್ಷೆಗೆ ಪರ್ಯಾಯ ವ್ಯವಸ್ಥೆ ಸಿದ್ಧಪಡಿಸಬೇಕೆಂದಿರುವ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಪರೀಕ್ಷೆಗಳನ್ನು ಆಯೋಜಿಸುವ ಬಗ್ಗೆ ನಡೆದ ಸಭೆಯ ಬೆನ್ನಲ್ಲೇ ವಿದ್ಯಾರ್ಥಿಗಳು ಮುಖ್ಯ ನ್ಯಾಯಮೂರ್ತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಸ್ತುತ ಸಿಬಿಎಸ್​ಇ 12ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸಲು ಯೋಚಿಸುತ್ತಿರುವ ಕೇಂದ್ರ ಸರ್ಕಾರ ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಕೊರೊನಾ ಹತೋಟಿಗೆ ಬರುವ ಸೂಚನೆ ಸಿಗುತ್ತಿದ್ದಂತೆಯೇ ಪರೀಕ್ಷೆ ನಡೆಸುವ ಸಾಧ್ಯತೆ ಇದ್ದು, ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮೇ 30ರಂದು ಸಭೆ ನಡೆಸಲಿದ್ದಾರೆ ಎಂದು ಕೆಲ ಮೂಲಗಳು ತಿಳಿಸಿವೆ.

ಕಳೆದ ಏಪ್ರಿಲ್ ತಿಂಗಳ 14ನೇ ತಾರೀಖಿನಂದು ಸಿಬಿಎಸ್​ಇ 12ನೇ ತರಗತಿ ಮಕ್ಕಳ ಪರೀಕ್ಷೆಯನ್ನು (CBSE 12th Board Exams 2021) ಕೊರೊನಾ ಕಾರಣದಿಂದ ಮುಂದೂಡುತ್ತಿರುವುದಾಗಿ ಪ್ರಕಟಣೆ ಹೊರಡಿಸಿದ್ದ ಶಿಕ್ಷಣ ಮಂಡಳಿ, ಜೂನ್​ 1ರ ಆಸುಪಾಸಿನಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಯೋಚಿಸುವುದಾಗಿ ಹೇಳಿತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟವಾಗಿರುವುದರಿಂದ ಮುಂದಿನ ಹಂತದಲ್ಲಿ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

(CBSE class xii 2021 exams around 300 students writes to CJI against offline examination)

ಇದನ್ನೂ ಓದಿ: CBSE 12th Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದಿಲ್ಲ; ಜೂನ್ 1ರಂದು ಅಂತಿಮ ತೀರ್ಮಾನ ಪ್ರಕಟಗೊಳ್ಳುವ ಸಂಭವ 

CBSE Class 12 Exam 2021: ಸಿಬಿಎಸ್​ಇ ಹತ್ತರಂತೆ, ಕ್ಲಾಸ್​ 12 ಪರೀಕ್ಷೆ ಸಹ ಕ್ಯಾನ್ಸಲ್​? ಹಾಗಾದ್ರೆ ಮುಂದೇನು?

ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​