AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು!

ಸಿಬಿಎಸ್‌ಇ 2026 ರಿಂದ 9ನೇ ತರಗತಿಗೆ ಹೊಸ ತ್ರಿಭಾಷಾ ನೀತಿಯನ್ನು ಜಾರಿಗೆ ತಂದಿದೆ. NEP 2020 ಅಡಿಯಲ್ಲಿ, ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ಭಾಷೆಗಳನ್ನು ಕಲಿಯಬೇಕು, ಕನಿಷ್ಠ ಎರಡು ಭಾರತೀಯ ಭಾಷೆಗಳಾಗಿರಬೇಕು. ಕರ್ನಾಟಕದ ಮಕ್ಕಳಿಗೆ ಕನ್ನಡ ಕಲಿಯಲು ಇದು ಉತ್ತಮ ಅವಕಾಶ. 10ನೇ ತರಗತಿಯಲ್ಲಿ ಮೂರನೇ ಭಾಷೆಗೆ ಬೋರ್ಡ್ ಪರೀಕ್ಷೆ ಇರುವುದಿಲ್ಲ, ಇದು ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡುತ್ತದೆ.

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 16, 2026 | 7:12 PM

Share

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ. ಈ ಮೂಲಕ ಸಿಬಿಎಸ್​​​​​ಇ ಮಕ್ಕಳಿಗೂ ಸುಲಭವಾಗಿ ಕನ್ನಡ ಕಲಿಯಬಹುದು.

ವಿದ್ಯಾರ್ಥಿಗಳು ಕಲಿಯುವ ಒಟ್ಟು ಮೂರು ಭಾಷೆಗಳಲ್ಲಿ ಕನಿಷ್ಠ ಎರಡು ಭಾಷೆಗಳು ಕಡ್ಡಾಯವಾಗಿ ಭಾರತೀಯ ಮೂಲದ ಸ್ಥಳೀಯ ಭಾಷೆಗಳಾಗಿರಬೇಕು. 9ನೇ ತರಗತಿಯಿಂದ ಮೂರು ಭಾಷೆಗಳ ಕಲಿಕೆ ಕಡ್ಡಾಯವಾಗಿದ್ದರೂ, 10ನೇ ತರಗತಿಯಲ್ಲಿ ಮೂರನೇ ಭಾಷೆಗೆ (R3) ಯಾವುದೇ ಪ್ರಮುಖ ಬೋರ್ಡ್ ಪರೀಕ್ಷೆ ಇರುವುದಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ. ಇದು ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲಿದೆ.

ಇದನ್ನೂ ಓದಿ: 61ನೇ ವಯಸ್ಸಿನಲ್ಲಿ 10ನೇ ತರಗತಿ ಪಾಸ್; 650ಕ್ಕೆ 500 ಅಂಕ ಪಡೆದ ಮಹಿಳೆ

ಮೇ 15 ರಂದು ಹೊರಡಿಸಲಾದ ಅಧಿಕೃತ ಸುತ್ತೋಲೆಯಲ್ಲಿ, ಬಹುಭಾಷಾ ಜ್ಞಾನ ಮತ್ತು ಭಾರತೀಯ ಭಾಷೆಗಳ ಸಂರಕ್ಷಣೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಈ ಹೊಸ ಬದಲಾವಣೆಯು ಸಿಬಿಎಸ್‌ಇ ಶಾಲೆಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಯೋಜನೆಯನ್ನು ಮರುರೂಪಿಸಿಕೊಳ್ಳುವಂತೆ ಮಾಡಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!