Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Result 2022: ಸಕಾಲದಲ್ಲಿಯೇ ಸಿಬಿಎಸ್​ಇ ಫಲಿತಾಂಶ; ಧರ್ಮೇಂದ್ರ ಪ್ರಧಾನ್

ಈ ನಡುವೆ ದೇಶಾದ್ಯಂತ ಸಿಬಿಎಸ್​ಇ ವಿದ್ಯಾರ್ಥಿಗಳು ಅಂತಿಮ ಫಲಿತಾಂಶದ ಅಂಕಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎನ್ನುವ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

CBSE Result 2022: ಸಕಾಲದಲ್ಲಿಯೇ ಸಿಬಿಎಸ್​ಇ ಫಲಿತಾಂಶ; ಧರ್ಮೇಂದ್ರ ಪ್ರಧಾನ್
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 18, 2022 | 8:19 AM

ದೆಹಲಿ: ಈ ವರ್ಷದ ಸಿಬಿಎಸ್​ಇ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು (Central Board of Secondary Education – CBSE) ಸಕಾಲದಲ್ಲಿ ಪ್ರಕಟಿಸಲಾಗುವುದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೂನ್ 15ರವರೆಗೆ ಸಿಬಿಎಸ್​ಇ ಪರೀಕ್ಷೆಗಳು ನಡೆಯುತ್ತಿದ್ದವು. ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮತ್ತು ಫಲಿತಾಂಶ ಸಿದ್ಧಪಡಿಸಲು 45 ದಿನಗಳ ಕಾಲಾವಕಾಶ ಬೇಕು ಎಂದು ಅಧಿಕಾರಿಗಳು ಹೇಳಿದ್ದರು. ಎಲ್ಲ ಪ್ರಕ್ರಿಯೆಗಳೂ ನಿಗದಿತ ಕಾಲದಲ್ಲಿಯೇ ನಡೆಯುತ್ತಿವೆ. ಸಕಾಲದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು. ಇದೇ ತಿಂಗಳ ಕೊನೆಯಲ್ಲಿ ಸಿಬಿಎಸ್​ಇ 10 ಮತ್ತು 12ನೇ ತರಗತಿಯ ಫಲಿತಾಂಶ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಈ ನಡುವೆ ದೇಶಾದ್ಯಂತ ಸಿಬಿಎಸ್​ಇ ವಿದ್ಯಾರ್ಥಿಗಳು ಅಂತಿಮ ಫಲಿತಾಂಶದ ಅಂಕಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎನ್ನುವ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಟ್ವಿಟರ್​ನಲ್ಲಿ best of either term results subject wise ಹ್ಯಾಷ್​ಟ್ಯಾಗ್ ಟ್ರೆಂಡ್ ಆಗುತ್ತಿದೆ.

ಫಲಿತಾಂಶ ಘೋಷಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿಯೇ ಸಿಬಿಎಸ್​ಇ ಮಂಡಳಿಯು ‘ಪರೀಕ್ಷಾ ಸಂಗಮ್’ ಪೋರ್ಟಲ್​ಗೆ ಚಾಲನೆ ನೀಡಿದೆ. ಫಲಿತಾಂಶಕ್ಕೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಪರೀಕ್ಷೆಗೆ ಬೇಕಿರುವ ಪರಾಮರ್ಶನ ಸಂಪನ್ಮೂಲಗಳನ್ನು ಒಳಗೊಂಡಿರುತ್ತದೆ.

ಈ ವರ್ಷ ಡಿಜಿಲಾಕರ್​ ಮೂಲಕ ಡಿಜಿಟಲ್ ಅಂಕಪಟ್ಟಿಗಳನ್ನು ವಿತರಿಸಲು ಸಿಬಿಎಸ್​ಇ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ವಿದ್ಯಾರ್ಥಿಗಳು https://t.co/pSvg3mGnPS ಲಿಂಕ್ ಕ್ಲಿಕ್ ಮಾಡಿ, ಅಗತ್ಯ ವಿವರ ಒದಗಿಸಿ ಡಿಜಿಲಾಕರ್ ಅಕೌಂಟ್ ಎನೇಬಲ್ ಮಾಡಿಕೊಳ್ಳಬೇಕಾಗುತ್ತದೆ.

ಐಸಿಎಸ್​ಇ ಫಲಿತಾಂಶ

ಐಸಿಎಸ್​ಇ ಮಂಡಳಿಯು ನಿನ್ನೆ (ಜುಲೈ 17) 10ನೇ ತರಗತಿ ಫಲಿತಾಂಶ ಪ್ರಕಟಿಸಿತ್ತು. ಶೇ 99.8ರಷ್ಟು ಅಂಕ ಪಡೆದಿರುವ ನಾಲ್ವರು ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಹಂಚಿಕೊಂಡಿದ್ದಾರೆ. 34 ವಿದ್ಯಾರ್ಥಿಗಳು ಎರಡನೇ ರ‍್ಯಾಂಕ್‌ ಗಳಿಸಿದ್ದಾರೆ. ಈ ವರ್ಷದ ಒಟ್ಟಾರೆ ಫಲಿತಾಂಶ ಶೇ 99.97ರಷ್ಟು ಬಂದಿದೆ.

ಅಖಿಲ ಭಾರತ ಮಟ್ಟದಲ್ಲಿ 5ನೇ ರ‍್ಯಾಂಕ್‌ ಪಡೆದ 34 ವಿದ್ಯಾರ್ಥಿಗಳ ಪೈಕಿ ಬೆಂಗಳೂರಿನ ಐವರು ಇದ್ದಾರೆ. ಇವರೆಲ್ಲರೂ ಇಂಗ್ಲಿಷ್ ಮತ್ತು ಇತರ ನಾಲ್ಕು ವಿಷಯಗಳಲ್ಲಿ ಒಟ್ಟು 498 ಅಂಕಗಳನ್ನು ಪಡೆದಿದ್ದಾರೆ. ಕರ್ನಾಟಕದ ಒಟ್ಟಾರೆ ಐಸಿಎಸ್​ಇ ಫಲಿತಾಂಶವು ಶೇ 99.99 ಇದೆ. 23,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಎಂಇಎಸ್ ಕಿಶೋರ ಕೇಂದ್ರ ಪಬ್ಲಿಕ್ ಸ್ಕೂಲ್​ನ ಬಿ.ಎನ್.ವಿಭೂತಿ, ನ್ಯೂ ಹೊರೈಜಾನ್ ಪಬ್ಲಿಕ್​ ಸ್ಕೂಲ್​ನ ಎಸ್.ಸಂಧ್ಯಾ, ಕ್ಲಾರೆನ್ಸ್​ ಪಬ್ಲಿಕ್ ಸ್ಕೂಲ್​ನ ರಾಹುಲ್ ದತ್ತಾ, ಟ್ರಿಯೊ ವರ್ಲ್ಡ್​ ಸ್ಕೂಲ್​ನ ಆದಿ ಕೃಷ್ಣ, ಬೆಥನಿ ಹೈಸ್ಕೂಲ್​ನ ನಿಹಾರ ಮರಿಯಮ್ ಓಮನ್ ರಾಷ್ಟ್ರಮಟ್ಟದಲ್ಲಿ 2ನೇ ರ‍್ಯಾಂಕ್‌ ಪಡೆದಿದ್ದಾರೆ.

Published On - 8:19 am, Mon, 18 July 22

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!